ಆನೆ ಹಾವಳಿ ತಪ್ಪಿಸಲು ರೈತ ಸಂಘದಿಂದ ಪ್ರತಿಭಟನೆ


Team Udayavani, Oct 4, 2022, 4:49 PM IST

tdy-16

ಬಂಗಾರಪೇಟೆ: ಹತ್ತಾರು ವರ್ಷಗಳಿಂದ ಗಡಿ ಭಾಗದ ರೈತರ ಜೀವ ಹಿಂಡುತ್ತಿರುವ ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕೊಡಿ ಇಲ್ಲವೇ ಆನೆ ಲದ್ದಿ ಮಾರಾಟ ಮಾಡಲು ಮಾರುಕಟ್ಟೆಯ ವ್ಯವಸ್ಥೆ ಮಾಡಿ ಎಂದು ಆಗ್ರಹಿಸಿ ರೈತಸಂಘದಿಂದ ಆನೆ ಲದ್ದಿ ಸಮೇತ ಕಾಮಸಮುದ್ರದ ಗಾಂಧಿ ಪ್ರತಿಮೆಯೆದುರು ಹೋರಾಟ ನಡೆಸಲಾಯಿತು.

ಎ.ಎಸ್‌.ಐ ವೆಂಕಟೇಶ್‌ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಪ್ರಜೆಗಳಿಂದ, ಪ್ರಜೆಗಳಿಗಾಗಿ ಪ್ರಜಾ ಸೇವಕರಾಗಬೇಕಾದ ಜನಪ್ರತಿನಿಧಿಗಳು ಚುನಾವಣೆ ಸಮಯದಲ್ಲಿ ಹಳ್ಳಿಯಲ್ಲಿ ಮತ ಪಡೆಯಲು ಕೈ ಕಾಲಿಗೆ ಬಿದ್ದು ಗೆದ್ದ ನಂತರ ಇಡೀ ದೇಶವೇ ಗೆದ್ದಂತೆ ಜನಸಾಮಾನ್ಯರ ಸಮಸ್ಯೆಗಳನ್ನು ಮರೆಯುತ್ತಿದ್ದಾರೆ. ಗಡಿ ಭಾಗದ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ಮಾಡುತ್ತಿರುವ ಜನಪ್ರತಿನಿಧಿಗಳಿಗೆ ಮುಂದಿನ ಚುನಾವಣೆಯನ್ನು ಬಹಿಷ್ಕಾರ ಮಾಡುವ ಜೊತೆಗೆ ಅಪ್ಪಿ ತಪ್ಪಿ ಹಳ್ಳಿಗಳಿಗೆ ಬಂದರೆ ಆನೆ ಲದ್ದಿ ತಿನ್ನಿಸುವ ಚಳುವಳಿ ಮಾಡುವ ಎಚ್ಚರಿಕೆಯನ್ನು ನೀಡಿದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಅಂದು ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ ಮುಖಾಂತರ ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಭವ್ಯ ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಆದರೆ ಇಂದು ಗಡಿ ಭಾಗದ ಕಾಡಾನೆಗಳ ಹಾವಳಿಯಿಂದ ಶಾಶ್ವತ ಪರಿಹಾರಕ್ಕಾಗಿ ಗಾಂಧಿ ಪ್ರತಿಮೆ ಮುಂದೆ ರೈತರ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೊಂದ ರೈತ ಕದಿರಿನತ್ತ ಅಪ್ಪೋಜಿರಾವ್‌ ಮಾತನಾಡಿ, ಮಾರುಕಟ್ಟೆಗೆ ಬೆಳೆ ಬರುವ ಸಮಯದಲ್ಲಿ ರಾತ್ರೋರಾತ್ರಿ ಕಾಡಾನೆಗಳು ರೈತರ ಬೆವರ ಹನಿಯನ್ನು ಕಸಿದುಕೊಳ್ಳುತ್ತಿದ್ದರೂ ಸಮಸ್ಯೆ ಯಾದಾಗ ಮಾತ್ರ ಜನಪ್ರತಿನಿಧಿಗಳಿಗೆ ಸರ್ಕಾರಕ್ಕೆ ಅಧಿಕಾರಿಗಳಿಗೆ ಜ್ಞಾಪಕ ಬಂದು ಬಿಕ್ಷೆ ರೂಪದಲ್ಲಿ ಪರಿಹಾರ ಘೋಷಣೆ ಮಾಡಿ ಮೊಸಳೆ ಕಣ್ಣೀರು ಸುರಿಸುವ ಮೂಲಕ ಕೈತೊಳೆದುಕೊಳ್ಳುತ್ತಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಗಾಂಧಿ ಜಯಂತಿಯಂದು ಗಡಿ ಭಾಗದ ಕಾಡಾನೆಗಳ ಹಾವಳಿಯಿಂದ ಶಾಶ್ವತ ಪರಿಹಾರಕ್ಕಾಗಿ ಸರ್ಕಾರದ ಕಣ್ತೆರೆಸಲು ಗಾಂಧಿ ಪ್ರತಿಮೆ ಮುಂದೆ ಬೆಳೆ ತಿಂದು ಭೂಮಿಯಲ್ಲಿ ಹಾಕಿರುವ ಆನೆ ಲದ್ದಿ ಸಮೇತ ಸಂಬಂಧಪಟ್ಟ ಅಧಿಕಾರಿಗಳಿಗೆ ಪಾರ್ಸೆಲ್‌ ಮಾಡುವ ಮುಖಾಂತರ ನಮ್ಮ ಬೆಳೆಗೆ ಆನೆಗಳಿಂದ ಮುಕ್ತಿ ಕೊಡಿ ಇಲ್ಲವೇ ಆನೆ ಹಿಡಿಯಲು ಆದೇಶ ಕೊಡಿ ಅದೂ ಇಲ್ಲದಿದ್ದರೆ ಕಡೆಯದಾಗಿ ಆನೆ ಲದ್ದಿ ಮಾರಾಟ ಮಾಡಲು ಗಡಿ ಭಾಗದಲ್ಲಿ ಮಾರುಕಟ್ಟೆಯ ವ್ಯವಸ್ಥೆ ಕಲ್ಪಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಒತ್ತಾಯಿಸಿದರು. ಮನವಿ ಸ್ವೀಕರಿಸಿ ಮಾತನಾಡಿದ ಎ.ಎಸ್‌.ಐ ವೆಂಕಟೇಶ್‌, ನಿಮ್ಮ ಮನವಿಯನ್ನು ಸರ್ಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.

ಹಸಿರುಸೇನೆ ಜಿಲ್ಲಾಧ್ಯಕ್ಷ ಪುತ್ತೇರಿ ರಾಜು, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ, ನಾಗಯ್ಯ, ವಿಶ್ವ, ಮುನಿರಾಜು, ಯಲ್ಲಣ್ಣ, ಪ್ರಭಾಕರ್‌, ನಾಗರಾಜ್‌, ಗೋವಿಂದಪ್ಪ, ಮಂಜುನಾಥ್‌, ಗುಲ್ಲಟ್ಟಿ, ಲಕ್ಷ್ಮಣ್‌ ನೊಂದ ವಕ್ಕಲೇರಿ ಹನುಮಯ್ಯ, ರೈತರು ಹಾಜರಿದ್ದರು.

ಟಾಪ್ ನ್ಯೂಸ್

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು…!

Thirthahalli: ಬಾವಿಕೈಸರು ಬಳಿ ಟ್ರಾಕ್ಟರ್ ಪಲ್ಟಿ, ಓರ್ವ ಕಾರ್ಮಿಕ ಮೃತ್ಯು

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

Kollywood: 4 ಬಾರಿ ರಜಿನಿಕಾಂತ್‌ ಜೊತೆ ನಟಿಸುವ ಅವಕಾಶ ಬಂದರೂ ತಿರಸ್ಕರಿಸಿದ ಖ್ಯಾತ ನಟಿ ಈಕೆ

13-katapady

Agriculture: ಮನೆಯ ತಾರಸಿನಲ್ಲಿ 200ಕ್ಕೂ ಹೆಚ್ಚು ಬೆಳೆ: ಜೋಸೆಫ್ ಲೋಬೋ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-15

Cyber Crime: ಇಬ್ಬರಿಗೆ 48 ಲಕ್ಷ ರೂ.ವಂಚಿಸಿದ ಸೈಬರ್‌ ಕಳ್ಳರು

Telangana election: ತೆಲಂಗಾಣ: ಕಣದಲ್ಲಿ ಬರ್ರೆಲಕ್ಕನ  ಸದ್ದು ಜೋರು

Telangana election: ತೆಲಂಗಾಣ: ಕಣದಲ್ಲಿ ಬರ್ರೆಲಕ್ಕನ  ಸದ್ದು ಜೋರು

Agriculture: ಹಿಪ್ಪು ನೇರಳೆ ಕೃಷಿಯಲ್ಲಿ ಮರ ಪದ್ಧತಿ ಆವಿಷ್ಕರಿಸಿದ ರೈತನಿಗೆ ಸಿಗದ ಮನ್ನಣೆ

Agriculture: ಹಿಪ್ಪು ನೇರಳೆ ಕೃಷಿಯಲ್ಲಿ ಮರ ಪದ್ಧತಿ ಆವಿಷ್ಕರಿಸಿದ ರೈತನಿಗೆ ಸಿಗದ ಮನ್ನಣೆ

Kolar: ಸರ್ಕಾರ ಬಂದ್ರೂ ಒಗ್ಗೂಡದ ಕಾಂಗ್ರೆಸ್‌ ಬಣ!

Kolar: ಸರ್ಕಾರ ಬಂದ್ರೂ ಒಗ್ಗೂಡದ ಕಾಂಗ್ರೆಸ್‌ ಬಣ!

Farmers: ಪ್ರತಿ ಹೆಕ್ಟೇರ್‌ಗೆ 17 ಸಾವಿರ ಪರಿಹಾರ ನೀಡಿ

Farmers: ಪ್ರತಿ ಹೆಕ್ಟೇರ್‌ಗೆ 17 ಸಾವಿರ ಪರಿಹಾರ ನೀಡಿ

MUST WATCH

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

udayavani youtube

ಗುರುಕಿರಣ್ ರಿಗೆ ಬೆಂಗಳೂರು ಕಂಬಳದ ಮೇಲಿನ ಆಸಕ್ತಿಯ ಹಿಂದಿದೆ ಅದೊಂದು ಕಾರಣ

udayavani youtube

ಕಂಬಳದ ಬಗ್ಗೆ ಸಮಿತಿಯವರ ಮಾತು

ಹೊಸ ಸೇರ್ಪಡೆ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ

Bagalkote: 22 ಟನ್‌ ಕಬ್ಬು ಹೇರಿ ಸಾಧನೆಗೈದ ಮುತ್ತಪ್ಪ!

web-29-goosberry

Gooseberry Benefits: ನೆಲ್ಲಿಕಾಯಿ ಸೇವನೆಯಿಂದ ಆರೋಗ್ಯಕ್ಕೆ ಹಲವು ಪ್ರಯೋಜನವಿದೆ…

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Stock Market: ಬಾಂಬೆ ಷೇರುಪೇಟೆ ಸೆನ್ಸೆಕ್ಸ್‌ 728 ಅಂಕ ಏರಿಕೆ, ನಿಫ್ಟಿ 20,100

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Sandalwood: ‘ಕಾಟೇರʼದಲ್ಲಿ ಪಕ್ಕಾ ಲೋಕಲ್‌ ಹೈದನಾದ ʼದಾಸʼ: ರಿಲೀಸ್ ಡೇಟ್ ಅನೌನ್ಸ್

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Bribe: ಪಹಣಿ ಪತ್ರ ತಿದ್ದುಪಡಿಗೆ ಲಂಚ… ಎಸಿ ಕಚೇರಿ ಎಸ್‌ಡಿಸಿ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.