ಸಾಲಕ್ಕಾಗಿ ಬ್ಯಾಂಕ್ ಮುಂದೆ ಭಿಕ್ಷೆ


Team Udayavani, Jan 28, 2020, 3:34 PM IST

kolar-tdy-1

ಕೋಲಾರ: ಸ್ವ-ಉದ್ಯೋಗ ರೂಪಿಸಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರುದ್ಯೋಗಿ ಗಳಿಗೆ ವಿವಿಧ ಯೋಜನೆ ಜಾರಿ ಮಾಡುತ್ತಿ ದ್ದರೂ ಅದಕ್ಕೆ ಬ್ಯಾಂಕ್‌ ಅಧಿಕಾರಿಗಳು ಸಾಲ ನೀಡದೆ ಬೇಜಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಲೀಡ್‌ ಬ್ಯಾಂಕ್‌ ಕಚೇರಿ ಮುಂದೆ ಭಿಕ್ಷೆ ಬೇಡುವ ಮೂಲಕ ಪ್ರತಿಭಟನೆ ನಡೆಸಿದರು.

ಬ್ಯಾಂಕ್‌ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಂಡು ಕೂಡಲೇ ಸಾಲವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡ ಬೇಕು, ಜೊತೆಗೆ ಫೆ.3ರೊಳಗೆ ಸಭೆ ಕರೆಯಬೇಕು. ಇಲ್ಲದಿದ್ದರೆ ಏಕಕಾಲದಲ್ಲಿ ಎಲ್ಲಾ ಬ್ಯಾಂಕ್‌ ಬಂದ್‌ ಮಾಡುವ ಎಚ್ಚರಿಕೆ ನೀಡುವ ಜೊತೆಗೆ ಸಾಲ ಕ್ಕಾಗಿ ಭಿಕ್ಷೆ ಬೇಡುವ ಮೂಲಕ ಪ್ರತಿಭಟನೆ ನಡೆಸಿ, ವ್ಯವಸ್ಥಾಪಕರಿಗೆ ಮನವಿ ನೀಡಲಾಯಿತು.

ಪದವೀಧರರ ಮೂಲೆಗುಂಪು: ಹೋರಾಟದ ನೇತೃತ್ವ ವಹಿಸಿದ್ದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ದೇಶದಲ್ಲಿ ಕೈಗಾರಿಕಾ ಕ್ರಾಂತಿ ಮೂಲಕ ನಿರುದ್ಯೋಗ ಸಮಸ್ಯೆ ಸಂಪೂರ್ಣವಾಗಿ ನಿವಾರಣೆ ಮಾಡುತ್ತೇನೆ ಎಂದು ಭರವಸೆ ನೀಡುವ ಸರ್ಕಾರಗಳು, ಅಧಿಕಾರಕ್ಕೆ ಬಂದ ನಂತರ ಪದವೀಧರರನ್ನು ಮೂಲೆಗುಂಪು ಮಾಡುತ್ತಿವೆ ಎಂದು ದೂರಿದರು.

ಸ್ವ-ಉದ್ಯೋಗದತ್ತ ಮುಖ: ಮತ್ತೂಂದು ಕಡೆ ಕೈಗಾರಿಕಾ ಹೆಸರಿನಲ್ಲಿ ರೈತರ ಕೃಷಿ ಜಮೀನನ್ನು ವಶಪಡಿಸಿಕೊಂಡು ಕೈಗಾರಿಕೆ ಸ್ಥಾಪನೆಯಾದ ನಂತರ ಸ್ಥಳೀಯರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡುವುದು ಒಂದು ಕಡೆಯಾದರೆ, ಮತ್ತೂಂದು ಕಡೆ ಕೆಲಸಕ್ಕಾಗಿ ಲಂಚ ಕೊಡಲಾಗದೆ, ಬಡಪಾಯಿ ನಿರುದ್ಯೋಗಿಗಳು ತನ್ನ ಜೀವನಕ್ಕಾಗಿ ಸ್ವ- ಉದ್ಯೋಗದತ್ತ ಮುಖ ಮಾಡುತ್ತಿದ್ದಾನೆ ಎಂದು ಹೇಳಿದರು.  ಮತ್ತೂಂದಡೆ ಜನಪ್ರತಿನಿಧಿಗಳು ಕೆಡಿಪಿ ಸಭೆ ಹಾಗೂ ಮತ್ತಿತರ ಸಾರ್ವಜನಿಕರ ಸಮಾ ರಂಭಗಳಲ್ಲಿ ನೆಪಮಾತ್ರಕ್ಕೆ ಬ್ಯಾಂಕ್‌ ಅಧಿಕಾರಿ ಗಳಿಗೆ ನಿರುದ್ಯೋಗಿಗಳಿಗೆ ಸಾಲ ನೀಡುವಂತೆ ಎಚ್ಚರಿಕೆ ನೀಡಲು ಸೀಮಿತವಾಗಿದ್ದಾರೆಂದು ಅಸಮಧಾನ ವ್ಯಕ್ತಪಡಿಸಿದರು.

ಸಾಲ ತೀರುವವರೆಗೂ ನೀಡಲ್ಲ: ರೈತ ಸಂಘದ ಜಿಲ್ಲಾಧ್ಯಕ್ಷ ಮರಗಲ್‌ ಶ್ರೀನಿವಾಸ್‌ ಮಾತನಾಡಿ, ಕೈಗಾರಿಕಾ ಜಂಟಿ ನಿರ್ದೇಶಕರು, ಜವಳಿ ನಿರ್ದೇಶಕರು ಹಾಗೂ ಬ್ಯಾಂಕ್‌ ಅಧಿ ಕಾರಿಗಳು ಫಲಾನುಭವಿಗಳಿಗೆ ಸಾಲ ನೀಡಲು ನೂರೊಂದು ನೆಪ ಹೇಳುತ್ತಾರೆ. ಜೊತೆಗೆ ಮನೆಯಲ್ಲಿ ತಂದೆ ಅಥವಾ ಅಣ್ಣನಿಗೆ ಸಾಲ ನೀಡಿದರೆ, ಆ ಸಾಲ ಪಾವತಿ ಮಾಡುವ ವರೆಗೂ ಮತ್ತೂಂದು ಸಾಲ ನೀಡುವುದಿಲ್ಲ ಎಂದು ದೂರಿದರು.

ಹಣ ವಾಪಸ್‌ ಹೋಗುತ್ತಿದೆ: ದೇಶಬಿಟ್ಟು ಹೋಗುವ ಕಾರ್ಪೋರೇಟ್‌ ಕಂಪನಿಗಳು ಮತ್ತು ಉದ್ಯಮಿಗಳಿಗೆ ಸಾವಿರ, ಲಕ್ಷ ಕೋಟಿ ರೂ.ಗಳಲ್ಲಿ ಸಾಲ ನೀಡುವ ಬ್ಯಾಂಕ್‌ ಅಧಿಕಾರಿಗಳು, ಸ್ವಉದ್ಯೋಗ ಕೈಗೊಳ್ಳುವ ವರಿಗೆ 1 ಲಕ್ಷ ರೂ. ಸಾಲ ನೀಡಲು ಹಿಂದೇಟು ಹಾಕುತ್ತಾರೆ. ಇದರಿಂದ ಸರ್ಕಾರದಿಂದ ಬರುವ ಸಬ್ಸಿಡಿ ಅನುದಾನ ವಾಪಸ್‌ ಹೋಗುತ್ತಿದೆ ಎಂದು ವಿವರಿಸಿದರು.

ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಮಹಿಳಾ ಜಿಲ್ಲಾಧ್ಯಕ್ಷ ಎ.ನಳಿನಿ, ಜಿಲ್ಲಾ ಗೌರವಾಧ್ಯಕ್ಷ ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ನಾಗೇಶ್‌, ಈಕಂಬಳ್ಳಿ ಮಂಜುನಾಥ, ನಲ್ಲಂಡಹಳ್ಳಿ ಕೇಶವ, ವೇಣು, ಪುತ್ತೇರಿ ರಾಜು, ಮೀಸೆ ವೆಂಕಟೇಶಪ್ಪ, ಸಹ ದೇವಣ್ಣ, ಮಾಸ್ತಿ ವೆಂಕಟೇಶ್‌, ವಡ್ಡಹಳ್ಳಿ ಮಂಜುನಾಥ ಗಣೇಶ್‌, ಪ್ರತಾಪ್‌, ಸುಪ್ರಿಂ ಚಲ, ರಂಜಿತ್‌, ಸಾಗರ್‌, ಶಿವ ಮುಂತಾದವರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.