ನೇಗಿಲು ಭೂಮಿಗಿಳಿಸಿದ ಅನ್ನದಾತ

ತಾಲೂಕಿನಲ್ಲಿ ಸುರಿದ ಸಾಧಾರಣ ಮಳೆ • ಭೂಮಿ ಹದ ಮಾಡಲು ರೈತರು ಸಜ್ಜು

Team Udayavani, Apr 26, 2019, 2:42 PM IST

kolar-3-tdy..

ಎಂ.ರವಿಕುಮಾರ್‌

ಮಾಲೂರು: ತಾಲೂಕಿನ ಹಲವೆಡೆ ಮುಂಗಾರು ಪೂರ್ವ ಮಳೆ ಸಾಧಾರಣವಾಗಿ ಸುರಿದಿದ್ದು, ಕೆಲವು ರೈತರು ಮುಂಗಡವಾಗಿಯೇ ಭೂಮಿ ಹದ ಮಾಡಲು ಮುಂದಾಗಿದ್ದಾರೆ.

ತಾಲೂಕಿನ ಮಾಸ್ತಿ ಹೋಬಳಿಯಲ್ಲಿ 12.2 ಮಿ.ಮೀ., ಮಾಲೂರು ಪಟ್ಟಣ 3.2 ಮಿ.ಮೀ., ಟೇಕಲ್ನಲ್ಲಿ 25 ಮಿ.ಮೀ., ಲಕ್ಕೂರು 6 ಮಿ.ಮೀ. ಮಳೆಯಾಗಿದೆ. ಟೇಕಲ್ನ ಕೆಲವು ಭಾಗದಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಇದರಿಂದ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ.

ರಣ ಬಿಸಿಲಿಗೆ ಬೆಂದಿದ್ದ ಭೂಮಿ ತಂಪಾಗಿದೆ. ರೈತರ ಮೊಗದಲ್ಲೂ ಸಂತಸ ತರಿಸಿದೆ. ತಾಲೂಕಿನ ಮಾಸ್ತಿ, ಲಕ್ಕೂರು ಮತ್ತು ಚಿಕ್ಕತಿರುಪತಿ ಅಸುಪಾಸಿನಲ್ಲಿ ಮೂರು ನಾಲ್ಕು ದಿನಗಳಿಂದ ಸಾಧಾರಣ ಮಳೆಯಾದ್ದರಿಂದ ರೈತರು ಕೃಷಿಯತ್ತ ಮುಖಮಾಡುತ್ತಿದ್ದಾರೆ. ಎತ್ತುಗಳನ್ನು ಹೊಂದಿರುವ ರೈತರು ಸುಗ್ಗಿ ನಂತರ ಮೂಲೆ ಸೇರಿದ್ದ ನೇಗಿಲು, ಕೃಷಿ ಸಲಕರಣೆಗಳನ್ನು ಸರಿಪಡಿಸಿಕೊಂಡು ಉಳುಮೆಗೆ ಅಣಿಯಾಗುತ್ತಿದ್ದರೆ, ಇನ್ನು ಎತ್ತುಗಳಿಲ್ಲದ ರೈತರು, ಟ್ರ್ಯಾಕ್ಟರ್‌ಗಳಲ್ಲಿ ಗೇಯ್ಮೆ ಮಾಡಿಸಲು ಮುಂದಾಗಿದ್ದಾರೆ.

ಟ್ರ್ಯಾಕ್ಟರ್‌ನಲ್ಲಿ ಮೊದಲ ಉಳುಮೆ: ಮೊದಲ ಉಳುಮೆ ಟ್ರ್ಯಾಕ್ಟರ್‌ನಲ್ಲಿ ಮಾಡಿಸಿದರೆ, ಸಾಲುಗಳು ಆಳ ಮತ್ತು ಅಗಲವಾಗಿ ಬೀಳುವುದರಿಂದ ಮುಂದಿನ ದಿನಗಳಲ್ಲಿ ಕಡಿಮೆ ಮಳೆಯಾದ್ರೂ ಉಳುಮೆ ಮಾಡಲು ಅನುಕೂಲವಾಗುತ್ತದೆ ಹಾಗೂ ನೆಲವು ಹೆಚ್ಚು ನೀರು ಹಿಡಿದಿಟ್ಟುಕೊಳ್ಳುತ್ತದೆ. ಮುಂದೆ ಮಳೆ ಸ್ವಲ್ಪ ತಡವಾಗಿ ಬಂದ್ರೂ ಬೆಳೆಗಳು ಬೇಗ ಒಣಗುವುದಿಲ್ಲ. ಹೀಗಾಗಿ ಮೊದಲ ಉಳುಮೆ ರೈತರು ಟ್ರ್ಯಾಕ್ಟರ್‌ಗಳಲ್ಲಿ ಮಾಡಿಸುತ್ತಾರೆ. ತಾಲೂಕಿನ ಬಹುಪಾಲು ರೈತರು ಪ್ರಥಮ ಉಳುಮೆಗಾಗಿ ಟ್ರ್ಯಾಕ್ಟರ್‌ ಅವಲಂಬಿಸಿರುವ ಕಾರಣ ಬೇಡಿಕೆ ಹೆಚ್ಚುತ್ತಿದೆ. ತಾಲೂಕಿನ ಮಾಸ್ತಿ ಸುತ್ತಮುತ್ತಲಿನ ರೈತರಿಗೆ ಶ್ರೀಕ್ಷೇತ್ರ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಬಾಡಿಗೆ ಆಧಾರದಲ್ಲಿ ಕೃಷಿ ಉಪಕರಣ ಒದಗಿಸುತ್ತಿರುವುದು ಈ ಭಾಗದ ರೈತರಿಗೆ ಹೆಚ್ಚು ವರದಾನವಾಗಿದೆ. ಉಳಿದಂತೆ ಲಕ್ಕೂರು, ಟೇಕಲ್ ಮತ್ತು ಕಸಬಾ ಹೋಬಳಿಗಳಲ್ಲಿ ಖಾಸಗಿ ಟ್ರ್ಯಾಕ್ಟರ್‌ಗಳನ್ನೇ ಅವಲಂಬಿಸಬೇಕಾಗಿದೆ.

ಮಳೆ ಆಶ್ರಿತ ಬೇಸಾಯ: ಮುಂಗಾರು ಮತ್ತು ಹಿಂಗಾರು ಮಳೆ ಕೈಕೊಟ್ಟ ಕಾರಣ ಇದ್ದ ಬೋರ್‌ವೆಲ್ಗಳೂ ಬತ್ತಿಹೋಗಿವೆ. ಸಾಲ ಮಾಡಿ ಹೊಸದಾಗಿ 1750 ಅಡಿ ಕೊರೆಸಿದರೂ ನೀರು ಸಿಗುತ್ತಿಲ್ಲ. ಹೀಗಾಗಿ ತೋಟಗಾರಿಕೆ ಬೆಳೆ ಕೈಬಿಟ್ಟ ರೈತರು, ಪ್ರಸ್ತುತ ಬೀಳುತ್ತಿರುವ ಅಲ್ಪ ಸ್ವಲ್ಪ ಮಳೆಯಿಂದ ಬೀಡು ತೋಟಗಳನ್ನು ಉಳಮೆ ಮಾಡಿ ಮಳೆ ಅಶ್ರಿತ ಬೆಳೆ ಬೆಳೆಯಲು ಮುಂದಾಗಿದ್ದಾರೆ.

ಈ ಬಾರಿ ತಾಲೂಕಿನಲ್ಲಿ ಕೃಷಿ ಭೂಮಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಸರ್ಕಾರ ನೀಲಗಿರಿ ನಿಷೇಧಿಸಿರುವುದರ ಜೊತೆಗೆ ಬೆಲೆಯೂ ಕಡಿಮೆಯಾದ್ದರಿಂದ ರೈತರು ಹತ್ತಾರು ವರ್ಷಗಳಿಂದ ಎಕರೆಗಟ್ಟಲೆ ಬೆಳೆದಿದ್ದ ನೀಲಗಿರಿ ತೆಗೆದು ಮಾವು, ಸಪೋಟ, ಸೀಬೆ ಹೀಗೆ ಹಣ್ಣಿನ ಬೇಸಾಯಕ್ಕೆ ಮುಂದಾಗುತ್ತಿದ್ದರೆ, ನೀರಿನ ಅನುಕೂಲವಿಲ್ಲದ ರೈತರು ಮಳೆ ಆಶ್ರಿತ ಬೇಸಾಯದಲ್ಲಿ ನಿರತರಾಗಿದ್ದಾರೆ.

ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯು ತಾಲೂಕಿನ ಲಕ್ಕೂರು, ಮಾಸ್ತಿ, ಚಿಕ್ಕತಿರುಪತಿ ಭಾಗದಲ್ಲಿ ಉತ್ತಮವಾಗಿ ಬಿದ್ದಿದ್ದು, ಕಸಬಾ ಹೋಬಳಿಯ ಕೆಲವು ಪ್ರದೇಶಗಳಲ್ಲಿ ಸಾಧಾರಣವಾಗಿ, ಮಾಲೂರು ಪಟ್ಟಣದಲ್ಲಿ ಆಶಾದಾಯಕ ಮಳೆಯಾ ಗಿದೆ. ಇದರಿಂದ ಭೂಮಿ ತಂಪಾಗಿ ಬಿಸಿಲಿನ ಝಳ ಮತ್ತು ಧೂಳಿನಿಂದ ಸಾರ್ವಜನಿಕರಿಗೆ ಮುಕ್ತಿ ಸಿಕ್ಕಿದೆ.

ಎಳ್ಳು, ತೊಗರಿ ಬೇಸಾಯಕ್ಕೆ ಸಿದ್ಧತೆ:

ತಾಲೂಕಿನ ಮಾಸ್ತಿ ಹೋಬಳಿಯ ಕೆಲವು ರೈತರು ಅಶ್ವಿ‌ನಿ ಮಳೆಯಲ್ಲಿ ಹೊಲ ಉಳಮೆ ಮಾಡಿ, ಭರಣಿ ಮಳೆಯಲ್ಲಿ ಎಳ್ಳು ಬೇಸಾಯ ಮಾಡುತ್ತಾರೆ. ಕೆಲವು ರೈತರು ಈ ವೇಳೆ ಉಳಮೆ ಅರಂಭಿಸಿ ಮುಂದಿನ ಭರಣಿ, ಕೃತಿಕಾ ಮಳೆಗಳಲ್ಲಿ ತೊಗರಿ, ನೆಲಗಡಲೆ ಮತ್ತಿತರ ದ್ವಿದಳ ಧಾನ್ಯಗಳ ಬಿತ್ತನೆ ಮಾಡುವುದರಿಂದ ಪ್ರಸ್ತುತ ಸುರಿದ ಮಳೆಯು ರೈತರ ಪಾಲಿಗೆ ವರದಾನವಾಗಿದೆ. ಮಾಸ್ತಿ, ಚಿಕ್ಕ ಇಗ್ಗಲೂರು, ದೊಡ್ಡ ಇಗ್ಗಲೂರು, ಬಾಳಿಗಾನಹಳ್ಳ ಲಕ್ಕೂರು ಹೋಬಳಿಯ ಮಿಣಸಂದ್ರ ತಾಳಕುಂಟೆ, ಕುಡಿಯನೂರು ಮತ್ತಿತರ ಕಡೆಗಳಲ್ಲಿ ಕೃಷಿ ಚುಟುವಟಿಕೆ ಭರದಿಂದ ನಡೆಯುತ್ತಿದೆ.

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.