ಭೂ ಹಗರಣ ತನಿಖೆ ಮಾಡಲು ರೈತ ಸಂಘ ಒತ್ತಾಯ
Team Udayavani, Apr 27, 2022, 4:00 PM IST
ಮುಳಬಾಗಿಲು: ತಾಲೂಕಿನಲ್ಲಿ ನಡೆದಿರುವ ಭೂ ಹಗರಣವನ್ನು ತನಿಖೆ ನಡೆಸಿ, ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸದೇ ಇರುವ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಮಂಗಳವಾರ ನಗರದ ಶಾಸಕ ಎಚ್ .ನಾಗೇಶ್ ಅವರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್ ಈ ಸಂದರ್ಭದಲ್ಲಿ ಮಾತನಾಡಿ, ಪ್ರತಿಯೊಂದು ದಾಖಲೆಗೂ ತಿಂಗಳಾನುಗಟ್ಟಲೇ ತಾಲೂಕು ಕಚೇರಿಗೆ ಮತ್ತು ಬೆಳೆ ಪರಿಹಾರಕ್ಕೆ ಸರ್ಕಾರದ ಸೌಲಭ್ಯಗಳ ಪಡೆಯಲು ತೋಟಗಾರಿಕೆ, ಕೃಷಿ ಇಲಾಖೆಗೆ ಅಲೆದಾಡಿದರೂ ಸಮಸ್ಯೆ ಪರಿಹಾರವಾಗುತ್ತಿಲ್ಲ ಎಂದು ಆರೋಪಿಸಿದರು.
ಯುವ ರೈತ ಮುಖಂಡ ಪದ್ಮಘಟ್ಟ ಧರ್ಮ ಮಾತನಾಡಿ, ಪ್ರಮುಖ ಕಡತಗಳು ರಾತ್ರೋರಾತ್ರಿ ಭೂಗಳ್ಳರ ಮತ್ತು ದಲ್ಲಾಳಿಗಳ ಮನೆ ಬಾಗಿಲಿಗೆ ನಿಯತ್ತಾಗಿ ತಲುಪಿಸಿ ತಿದ್ದುಪಡಿ ಮಾಡುವ ಮಟ್ಟಕ್ಕೆ ಅಲ್ಲಿನ ಸಿಬ್ಬಂದಿಗಳಾದ ಚೀಕೂರು ಮಣಿ ಇಡೀ ವ್ಯವಸ್ಥೆಯನ್ನೇ ಅಂಗೈಯಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದಾನೆ, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ತಾಲೂಕು ದಂಡಾಧಿಕಾರಿಗಳು ಮೌನವಾಗಿದ್ದಾರೆ ಎಂದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಜಿಲ್ಲಾ ಕಾರ್ಯಾಧ್ಯಕ್ಷ ಹೆಬ್ಬಣಿ ಆನಂದರೆಡ್ಡಿ, ವಡ್ಡಹಳ್ಳಿ ಶಶಿಕುಮಾರ್, ಸೋಮಶೇಖರ್, ಹಸಿರುಸೇನೆ ತಾಲೂಕು ಅಧ್ಯಕ್ಷ ವೇಣು, ನವೀನ್, ಕೇಶವ, ನಂಗಲಿ ನಾಗೇಶ್, ಲಾಯರ್ ಮಣಿ, ರಾಮಕೃಷ್ಣಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ