ಪೌರತ್ವ ತಿದ್ದುಪಡಿಗೆ ತೀವ್ರ ವಿರೋಧ


Team Udayavani, Dec 20, 2019, 2:17 PM IST

kolar-tdy-1

ಕೋಲಾರ: ಪೌರತ್ವ ತಿದ್ದುಪಡೆ ಕಾಯ್ದೆ ವಿರೋಧಿಸಿ ನಿಷೇಧಾಜ್ಞೆ ಜಾರಿ ನಡುವೆಯೂ ಸಿಪಿಎಂ ಮುಖಂಡರು ಪ್ರತಿಭಟಿಸಿ ಪೊಲೀಸರೊಂದಿಗೆ ತಿಕ್ಕಾಟ ನಡೆಸಿ, ಬಂಧನಕ್ಕೊಳಗಾದ ಘಟನೆ ನಗರದ ಬಸ್‌ ನಿಲ್ದಾಣ ವೃತ್ತದಲ್ಲಿ ನಡೆಯಿತು.

ಪೌರತ್ವ ತಿದ್ದಪಡಿ ಕಾಯ್ದೆ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಗೆ ಕೆಲವು ಸಂಘಟನೆಗಳು ಕರೆ ನೀಡಿದ್ದರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿಯೂ ನಿಷೇಧಾಜ್ಞೆ ಹೇರಿದ್ದರು. ಇದನ್ನು ಲೆಕ್ಕಿಸದೇ ಸಿಪಿಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಬಸ್‌ ನಿಲ್ದಾಣದ ವೃತ್ತದಲ್ಲಿ ಮಧ್ಯಾಹ್ನ 12 ಗಂಟೆಗೆ ಸೇರಿದರು.

ಸಂಚಾರ ಅಸ್ತವ್ಯಸ್ತ: ಪ್ರತಿಭಟನೆಯ ಸುಳಿವು ಅರಿತ ಪೊಲೀಸರು, ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿ ಪ್ರತಿಭಟಿಸದಂತೆ ಮನವಿ ಮಾಡಿದರು. ಮನವಿ ಲೆಕ್ಕಿಸದೆ ಕಾರ್ಯಕರ್ತರು ಕೆಂಪು ಬಾವುಟ ಗಳೊಂದಿಗೆ ಘೋಷಣೆ ಕೂಗುತ್ತಾ ಬಸ್‌ ನಿಲ್ದಾಣ ವೃತ್ತದತ್ತ ನುಗ್ಗಿದರು. ಪ್ರತಿಭಟನೆ ಆರಂಭವಾಗುತ್ತಿ ದ್ದಂತೆಯೇ ವೃತ್ತದಲ್ಲಿ ಸಂಚಾರ ಸ್ಥಗಿತಗೊಂಡಿತು.

ಪ್ರತಿಭಟನೆ ತೀವ್ರ: ಪೊಲೀಸರು ಜಾಗೃತಗೊಂಡು ಪ್ರತಿಭಟನಾಕಾರರನ್ನು ಒಬ್ಬೊಬ್ಬರಿಗೂ ಮೂರು ನಾಲ್ಕು ಮಂದಿ ಸುತ್ತುವರಿದು ಬಂಧಿಸಲು ಮುಂದಾದರು. ಸಿಪಿಎಂ ಕಾರ್ಯಕರ್ತರು ಪೌರತ್ವ ಕಾಯ್ದೆ ಮತ್ತು ಬಿಜೆಪಿ ವಿರುದ್ಧ ಘೋಷಣೆ ಮೊಳಗಿಸುತ್ತಲೇ ವೃತ್ತದಲ್ಲಿ ಕುಳಿತು ಪ್ರತಿಭಟನೆ ತೀವ್ರಗೊಳಿಸಿದರು. ಇದರಿಂದ ವಿಚಲಿತರಾದ ಪೊಲೀಸರು, ಬಲವಂತವಾಗಿ ವಾಹನಕ್ಕೆ ನೂಕಲು ಮುಂದಾದರು.

ಮಾತಿನ ಚಕಮಕಿ: ಪ್ರತಿಭಟನಾಕಾರರ ಬಂಧಿ ಸುತ್ತಿದ್ದಂತೆಯೇ ಜನವಾದಿ ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ವಿ.ಗೀತಾ ಏಕಾಂಗಿಯಾಗಿ ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ನಗರ ಠಾಣೆ ಸಬ್‌ಇನ್ಸ್‌ಪೆಕ್ಟರ್‌ ಅಣ್ಣಯ್ಯ ನಡುವೆ ತೀವ್ರ ಮಾತಿನ ಚಕಮಕಿ ನಡೆಸಿದರು. ಏಕವಚನ ಪ್ರಯೋಗವು ನಡೆಯಿತು. ಮಹಿಳಾ ಪೇದೆಗಳು ವಿ.ಗೀತಾ ಅವರನ್ನು ಸುತ್ತುವರಿದು, ಬಲವಂತದಿಂದ ಪೊಲೀಸ್‌ ಜೀಪ್‌ ಹತ್ತಿಸಿದರು.

ಘೋಷಣೆ ಕೂಗಿ ಆಕ್ರೋಶ: ಈ ವೇಳೆ ವಿ.ಗೀತಾ ಜೀಪ್‌ ಹತ್ತುವುದಿಲ್ಲ, ಬಂಧಿತರಿರುವ ವಾಹನದಲ್ಲಿಯೇ ಬರುವಂತಾಗಿ ಹೇಳಿದ ವಿ.ಗೀತಾ, ಪ್ರತಿಭಟನಾಕಾರರಿದ್ದ ವಾಹನ ಏರುತ್ತಲೇ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಪ್ರಧಾನಿ ವಿರುದ್ಧ ಕಿಡಿ: ನಮ್ಮ ಸಂವಿಧಾನದ ಧರ್ಮ ನಿರಪೇಕ್ಷವನ್ನು ನುಚ್ಚುನೂರು ಮಾಡಲು ಸ್ವತಃ ಪ್ರಧಾನ ಮಂತ್ರಿಯವರೇ, ತನ್ನ ಹುದ್ದೆಯ ಘನತೆ ಮರೆತು ಪ್ರತಿಭಟನಾನಿರತರನ್ನು ಬಟ್ಟೆ ಮೇಲೆ ಗುರುತಿಸಬಹುದು ಎಂದು ಬಾಲಿಶ ಹೇಳಿಕೆ ನೀಡಿದ್ದಾರೆ. ತಿದ್ದುಪಡಿ ಆಗಿರುವ ಈ ಕಾನೂನಿ‌ನಲ್ಲಿ ಪೌರತ್ವ ನೀಡಲು ಧರ್ಮ ಆಧಾರವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ ದಿಂದ ಮಾತ್ರ ಬಂದವರಾಗಿರಬೇಕು ಎಂಬ ಅಂಶ ಒಳಗೊಂಡಿದೆ. ಇದು ನಮ್ಮ ಸಂವಿಧಾನದ ಆತ್ಮವಾದ ಧರ್ಮ ನಿರಪೇಕ್ಷ, ಸಮಾನತೆ ತತ್ವಗಳಿಗೆ ವಿರುದ್ಧ ಎಂದು ಆರೋಪಿಸಿದರು. ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಪಿ.ಶ್ರೀನಿವಾಸ್‌, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಗಾಂಧಿನಗರ ನಾರಾಯಣಸ್ವಾಮಿ, ಪಿ.ಆರ್‌.ಸೂರ್ಯನಾರಾಯಣ, ಟಿ.ಎಂ. ವೆಂಕಟೇಶ್‌ ಇದ್ದರು.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.