ಬಂಗಾರಪೇಟೆ: ಕುಡಿದ ಬಳಿಕ ಜಗಳ; ನಶೆಯಲ್ಲಿದ್ದ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ
Team Udayavani, Apr 24, 2022, 3:00 PM IST
ಬಂಗಾರಪೇಟೆ: ಇಡೀ ದಿನ ಸ್ನೇಹಿತರೊಂದಿಗೆ ಗುಂಡು- ತುಂಡು ಪಾರ್ಟಿ ಮಾಡಿ ಕುಡಿತದ ನಶೆ ನೆತ್ತಿಗೇರಿದ ಪರಿಣಾಮ ಶುಕ್ರವಾರ ರಾತ್ರಿ ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಾಲೂಕಿನ ಕಾರಹಳ್ಳಿ ಸ್ಮಶಾನದ ಬಳಿ ನಡೆದಿದೆ.
ಕೆರೆಕೋಡಿ ಗ್ರಾಮದ ಯುವಕ ಹರೀಶ್ (23) ಹತ್ಯೆಯಾದ ಯುವಕ.
ಕೂಲಿ ಕೆಲಸ ಮಾಡುವ ವೆಂಕಟೇಶ್ ಮತ್ತು ಶಾಂತಮ್ಮ ದಂಪತಿಯ ಮಗ ಹರೀಶ್ ಗಾರೆ ಕೆಲಸ ಮಾಡಿ ಕೊಂಡು ಬಂದ ಹಣದಲ್ಲಿ ಜೀವನ ನಡೆಸುತ್ತಿದ್ದ. ಶುಕ್ರವಾರ ಬೆಳಗ್ಗೆ ಮನೆಯಿಂದ ಹೊರಟು ಆರು ಮಂದಿ ಸ್ನೇಹಿತರು ಜತೆಗೂಡಿ ಸ್ಮಶಾನಕ್ಕೆ ಪಾತ್ರೆಗಳನ್ನು ತೆಗೆದುಕೊಂಡು ಹೋಗಿ ಅಡುಗೆ ತಯಾರಿಸಿ ಪಾರ್ಟಿ, ಮೋಜು ಮಸ್ತಿ ಮಾಡಿದ್ದಾರೆ. ಸಂಜೆ 4 ಗಂಟೆಗೆ ಮನೆಗೆ ಪಾತ್ರೆ ಕಳುಹಿಸಿದ್ದಾರೆ. ರಾತ್ರಿ ವೇಳೆಗೆ ಸ್ನೇಹಿತರ ನಡುವೆ ಜಗಳವಾಗಿ ಕೃತ್ಯ ನಡೆದಿದೆ ಎನ್ನಲಾಗಿದೆ.
ರಾತ್ರಿ ತಾಯಿ ಶಾಂತಮ್ಮ ಮಗ ಮನೆಗೆ ಬಂದಿಲ್ಲವೆಂದು ಹರೀಶ್ ಮೊಬೈಲ್ಗೆ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿದೆ. ಶನಿವಾರ ಬೆಳಗ್ಗೆ ಸ್ಮಶಾನದಲ್ಲಿ ಕೊಲೆಯಾಗಿರುವ ಮಾಹಿತಿ ಸಿಕ್ಕಿದೆ. ಇತ್ತೀಚಿಗೆ ಹರೀಶ್ ಗ್ರಾಮದಲ್ಲಿ ಬೈಕ್ ಓಡಿಸುವಾಗ ಗ್ರಾಮಸ್ಥರ ಜತೆ ಕಿರಿಕ್ ಆಗಿ ಸ್ನೇಹಿತರು ಕೊಲೆ ಬೆದರಿಕೆ ಹಾಕಿದ್ದರು ಎಂದು ಪೋಷಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ