ಐವರು ಕೋವಿಡ್‌ 19 ಸೋಂಕಿತರು ಗುಣಮುಖ


Team Udayavani, May 30, 2020, 6:56 AM IST

rkl idugadde

ಕೋಲಾರ: ಕೋವಿಡ್‌ 19 ಸೋಂಕು ಪತ್ತೆಯಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಮುಳಬಾಗಿ ಲಿನ ಐದು ಜನರು ಗುಣಮುಖರಾಗಿ ಶುಕ್ರವಾರ ಎಸ್‌.ಎನ್‌. ಆರ್‌. ಜಿಲ್ಲಾಸ್ಪತ್ರೆ ಯಿಂದ ಬಿಡುಗಡೆಯಾದರು. ಗುಣಮುಖರಾದ ಐವರಿಗೂ  ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಹಣ್ಣಿನ ಬುಟ್ಟಿ ನೀಡಿ ಶುಭ ಕೋರಿ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಥಮವಾಗಿ ಮುಳಬಾಗಿಲಿನ 5 ಜನರಿಗೆ ಕೋವಿಡ್‌ 19 ಪಾಸಿಟಿವ್‌ ಕಂಡು ಬಂದಿತ್ತು. ಇವರು ಹೊರ ರಾಜ್ಯ ಹಾಗೂ ಹೊರ  ಜಿಲ್ಲೆಗಳಿಂದ ಕೋಲಾರ ಜಿಲ್ಲೆಗೆ ಆಗಮಿ ಸಿದ್ದರು. ಇವರಿಗೆ ಪಾಸಿಟಿವ್‌ ಬಂದ ತಕ್ಷಣ ಚಿಕಿತ್ಸೆ ಯನ್ನು ಪ್ರಾರಂಭಿಸಲಾಯಿತು. ಇವರ ಗಂಟಲು ದ್ರವವನ್ನು ಪರೀಕ್ಷಿಸಿ ನೆಗೆಟಿವ್‌ ಬಂದಿದ್ದರಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

14 ಸಕ್ರಿಯ ಪ್ರಕರಣ: ಕೋವಿಡ್‌ 19ಗೆ ಯಾರು ಆತಂಕ ಪಡಬಾರದು. ಅಗತ್ಯ ಮುನ್ನೆಚ್ಚರಿಕಾ ಕ್ರಮ ಗಳನ್ನು ವಹಿಸಬೇಕು. ಜಿಲ್ಲೆಯಲ್ಲಿ 19 ಪ್ರಕರಣಗಳು ಕಂಡು ಬಂದಿದ್ದವು. ಶುಕ್ರವಾರ 5 ಜನ ಬಿಡುಗಡೆ ಆಗಿರುವುದರಿಂದ 14 ಸಕ್ರಿಯ  ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕಂಡು ಬರುವ ಎಲ್ಲಾ ಪ್ರಕರಣಗಳನ್ನು ಗುಣಮುಖ ಗೊಳಿಸಲಾಗುವುದು ಎಂದು ತಿಳಿಸಿದರು. ಶುಕ್ರವಾರ ಪಿ-906, ಪಿ-906, ಪಿ-908, ಪಿ-909 ಮತ್ತು ಪಿ-910 ಪ್ರಕರಣಗಳು ಗುಣ ಮುಖರಾಗಿ ಬಿಡುಗಡೆ ಆದರು. ಈ ಸಂದರ್ಭದಲ್ಲಿ ಬಿಡುಗಡೆ ಆದವರಿಗೆ ಪುಷ್ಪ ಮಳೆ ಸುರಿಸಿ ಅಭಿನಂದನೆ ಸಲ್ಲಿಸಲಾಯಿತು.

ಆರೋಗ್ಯ ಸಿಬ್ಬಂದಿಗೆ ಧನ್ಯವಾದ: ಈ ಸಂದರ್ಭ ದಲ್ಲಿ ಪಾಸಿಟಿವ್‌ ಆಗಿ ಗುಣಮುಖ ರಾಗಿದ್ದ ಯುವತಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್‌ 19 ಪಾಸಿಟಿವ್‌ ಬಂದಲ್ಲಿ ಆತಂಕಪಡಬೇಕಾ ಗಿಲ್ಲ, ಸೂಕ್ತ ಚಿಕಿತ್ಸೆ ಮತ್ತು ಪೌಷ್ಟಿಕ  ಆಹಾರ ಸೇವನೆ ಯಿಂದ ಗುಣಪಡಿಸಿ ಕೊಳ್ಳಬಹುದು, ಸರಕಾರಿ ಆಸ್ಪತ್ರೆಯಲ್ಲಿಯೂ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುತ್ತಾರೆ ಎನ್ನುವುದಕ್ಕೆ ತಾವುಗಳು ಗುಣಮುಖ ರಾಗಿರುವುದೇ ಸಾಕ್ಷಿಯಾಗಿದೆ. ತಮಗೆ ಚಿಕಿತ್ಸೆ ನೀಡಿದ ವೈದ್ಯರು ಹಾಗೂ  ಆರೋಗ್ಯ ಸಿಬ್ಬಂದಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಸಂಸದ ಎಸ್‌. ಮುನಿಸ್ವಾಮಿ, ಜಿಪಂ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌, ಜಿಲ್ಲಾಧಿಕಾರಿ ಸಿ.ಸತ್ಯಭಾಮ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ವಿ.ದರ್ಶನ್‌, ಜಿಲ್ಲಾ ಪೊಲೀಸ್‌  ವರಿಷ್ಠಾಧಿಕಾರಿ ಕಾರ್ತಿಕ್‌ ರೆಡ್ಡಿ, ಅಪರ ಜಿಲ್ಲಾಧಿಕಾರಿ ಶಿವಸ್ವಾಮಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಜಾಹ್ನವಿ, ಉಪ ವಿಭಾಗಾ ಧಿಕಾರಿ ಸೋಮಶೇಖರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ್‌ ಕುಮಾರ್‌,  ಜಿಲ್ಲಾ ಶಸ್ತ್ರಚಿಕಿತ್ಸಕ ನಾರಾಯಣಸ್ವಾಮಿ, ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

Kolar: ಕುರ್ಚಿಗೆ ಅಧಿಕಾರಿಗಳಿಬ್ಬರ ತಿಕ್ಕಾಟ; ಕೆಲಸ ಸ್ಥಗಿತ

11

Drinking water: ಜಾತ್ರೆಗೆ ಬಂದ ರಾಸುಗಳಿಗೆ ಕುಡಿಯಲು ನೀರಿಲ!

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.