ಶಿಥಿಲ ನಾಮಫ‌ಲಕ ಸರಿಪಡಿಸಿ


Team Udayavani, Dec 22, 2019, 4:03 PM IST

kolar-tdy-1

ಮುಳಬಾಗಿಲು: ತಾಲೂಕಿನ ಕೆಲವು ಗ್ರಾಮಗಳಿಗೆ ಅಳವಡಿಸಲಾದ ನಾಮಫ‌ಲಕ ಗಳು ಶಿಥಿಲಾವಸ್ಥೆ ತಲುಪಿದ್ದರೆ, ಕೆಲವು ಕಡೆ ಅಳವಡಿಸೇ ಇಲ್ಲ. ಹತ್ತಾರು ವರ್ಷಗಳ ಹಿಂದೆ ಕಲ್ಲುಗಳನ್ನು ನೆಟ್ಟು ಅದರ ಮೇಲೆ ಆಯಾ ಗ್ರಾಮಗಳ ಹೆಸರು ಬರೆಯಲಾಗುತ್ತಿತ್ತು. ಇದರಿಂದ ಅಪರಿಚಿತರಿಗೆ ಅನುಕೂಲವಾಗುತ್ತಿತ್ತು. ಈಗ ಹಿಂದೆ ಅಳವಡಿಸಿದ್ದ ಕಲ್ಲಿನ ನಾಮಫ‌ಲಕಗಳು ವಾಹನಗಳು ಡಿಕ್ಕಿ ಹೊಡೆದು, ಗಾಳಿ, ಮಳೆಗೆ ಕುಸಿದು ಬಿದ್ದಿವೆ. ಆದರೆ, ಅವುಗಳನ್ನು ಸಂಬಂಧಪಟ್ಟ ಅಧಿಕಾರಿ ಗಳು ಸರಿಪಡಿಸುವ ಗೋಜಿಗೆ ಹೋಗಿಲ್ಲ. ಹೊಸದಾಗಿಯೂ ಅಳವಡಿಕೆ ಮಾಡಿಲ್ಲ.

ತಾಲೂಕಿನಲ್ಲಿ 350ಕ್ಕೂ ಅಧಿಕ ಹಳ್ಳಿಗಳಿದ್ದು, ಅವುಗಳನ್ನು ಗುರುತಿಸಲು ಪ್ರಮುಖ ರಸ್ತೆಗಳ ಗೇಟ್‌ಗಳಲ್ಲಿ ಕೆಲವು ಕಡೆ ನಾಮಫ‌ಲಕ ಹಾಕಲಾಗಿದೆ. ಮುಳಬಾಗಿಲು ಐತಿಹಾಸಿಕ, ಚಾರಿತ್ರಿಕ ಹಿನ್ನೆಲೆ ಹೊಂದಿರುವ ತಾಲೂಕು. ಪ್ರವಾಸಿ ತಾಣವೂ ಆಗಿದೆ. ಪ್ರತಿ ದಿನ ಪ್ರವಾಸಿ ಗರು ಬರುತ್ತಾರೆ. ಅಂತೆಯೇ ಗ್ರಾಮೀಣ ಪ್ರದೇಶಗಳ ಬಸ್‌ ನಿಲ್ದಾಣ ಬದಿಯಲ್ಲಿ ಆ ಪ್ರದೇಶವನ್ನು ಗುರುತಿಸಲು ಕಲ್ಲು ಬಂಡೆ, ಸಿಮೆಂಟ್‌ ಗೋಡೆ ಮತ್ತು ಕಬ್ಬಿಣದ ಕಂಬಗಳಿಂದ ಆಯಾ ಗ್ರಾಮಗಳಲ್ಲಿ ನಾಮಫ‌ಲಕ ಹಾಕಲಾಗಿದೆ. ಹಲವೆಡೆ ನಾಮಫ‌ಲಕಗಳು ಮುರಿದು ಬಿದ್ದಿದ್ದರೆ, ಕೆಲವು ನಾಮಫ‌ಲಕಗಳಿಗೆ ಖಾಸಗಿ ಶಾಲಾ ಕಾಲೇಜು, ಸಿನಿಮಾ, ಕಂಪನಿಗಳ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ. ಇದರಿಂದ ಗ್ರಾಮಗಳ ಹೆಸರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ಅಂತಹ ಐತಿಹಾಸಿಕ ತಾಣವಾದ ಆವಣಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನಾಮಫ‌ಲಕ ಶಿಥಿಲವಾಗಿದೆ. ಇದರಿಂದ ಪ್ರಯಾಣಿಕರು ಸ್ಥಳಿಯರನ್ನು ಕೇಳಿ ಮುಂದೆ ಸಾಗಬೇಕಾದ ಅನಿವಾರ್ಯತೆ ಎದುರಾಗಿದೆ.

ಕೆಜಿಎಫ್ ರಸ್ತೆಯ ಮಾರ್ಗವಾಗಿ ಕಾಶೀಪುರ, ಗಂಜಿಗುಂಟೆ ಮೂಲಕ ಆವಣಿಗೆ ಸಂಪರ್ಕ ಕಲ್ಪಿಸುವ ರಸ್ತೆ ಇದೆ. ವಿರೂಪಾಕ್ಷಿ ಮೂಲಕವಾಗಿಯೂ ಆವಣಿಗೆ ರಸ್ತೆ ಮಾರ್ಗ ಇರುವುದರಿಂದ ಗಂಜಿಗುಂಟೆ ವೃತ್ತದಲ್ಲಿ ನಾಮಫ‌ಲಕ ಅಳವಡಿಸಲಾಗಿದೆ. ಅದು ಈಗ ನಾಶವಾಗಿರುವ ಕಾರಣ ಹೊಸಬರಿಗೆ ಆವಣಿಗೆ ಯಾವ ಕಡೆ ಹೋಗಬೇಕೆಂಬುದು ದಾರಿ ತೋಚದೇ ಪರದಾಡುವಂತಾಗಿದೆ. ತಾಲೂಕಿನ ಅಭಿವೃದ್ಧಿಗೆ ಸರ್ಕಾರ ಕೋಟ್ಯಂತರ ರೂ. ಹಣ ಬಿಡುಗಡೆ ಮಾಡುತ್ತಿದೆ. ರಸ್ತೆ ಅಭಿವೃದ್ಧಿ ಅಥವಾ ದುರಸ್ತಿ ಮಾಡಿದ ನಂತರ ಸಂಬಂಧಪಟ್ಟ ಇಲಾಖೆ, ಸ್ಥಳೀಯ ಆಡಳಿತ ಗ್ರಾಮಗಳಲ್ಲಿ, ಗೇಟ್‌ ಗಳಲ್ಲಿ ನಾಮಫ‌ಲಕ ಅಳವಡಿಸುವುದಿಲ್ಲ.

ಶಿಥಿಲಗೊಂಡ ನಾಮಫ‌ಲಕಗಳನ್ನೂ ಸರಿಪಡಿಸಲ್ಲ. ಇದರಿಂದ ಅಪರಿಚಿತರಿಗೆ, ವಾಹನ ಸವಾರರಿಗಳು ಗ್ರಾಮಗಳನ್ನು ಗುರುತಿಸಲು ಆಗುವುದಿಲ್ಲ ಎಂದು ಕರ್ನಾಟಕ ರೈತ ಸೇನೆ ಜಿಲ್ಲಾಧ್ಯಕ್ಷ ಚಲ್ಲಪಲ್ಲಿ ಎಂ.ಸಿ.ಕೃಷ್ಣಾರೆಡ್ಡಿ ಹೇಳಿದರು.

 

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.