ನೀರಿನ ಸೌಲಭ್ಯವಿದ್ರೆ ಉದ್ಯಮ ಆರಂಭಕ್ಕೆ ಸಹಕಾರಿ


Team Udayavani, Sep 21, 2019, 12:10 PM IST

kolara-tdy-2

ಕೋಲಾರ: ಜಿಲ್ಲೆಯನ್ನು ಕಾಡುತ್ತಿರುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡರೆ ಬೃಹತ್‌ ಉದ್ಯಮಗಳನ್ನು ಇಲ್ಲಿಗೆ ತರಲು ಸಹಕಾರಿಯಾಗುತ್ತದೆ. ಆ ನಿಟ್ಟಿನಲ್ಲಿ ಕೆ.ಸಿ.ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆಗಳ ಸಮಗ್ರ ಜಾರಿಗೆ ಪಣತೊಟ್ಟಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು.

ನಗರದಲ್ಲಿ ತಮ್ಮ ಅಭಿಮಾನಿಗಳ ಒಕ್ಕೂಟದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಮೆರವಣಿಗೆಯಲ್ಲಿ ಪಾಲ್ಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕೆ.ಸಿ. ವ್ಯಾಲಿ ಯೋಜನೆಯಡಿ ಈಗಾಗಲೇ 30 ಕೆರೆಗಳು ಮಾತ್ರ ತುಂಬಿವೆ. ಯೋಜನೆಯಡಿ ಹರಿಯುತ್ತಿರುವ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಕೆರೆಗಳು ತುಂಬಲು ಕಾಲಾವಕಾಶ ಹೆಚ್ಚಾಗಿ ಪಡೆದುಕೊಳ್ಳುತ್ತಿದೆ. ಹೀಗಾಗಿ ನೀರಿನ ಪ್ರಮಾಣವನ್ನು 400 ಎಂಎಲ್‌ಡಿಗೆ ಹೆಚ್ಚಿಸಲು ಹಾಗೂ ಎತ್ತಿನ ಹೊಳೆ ಯೋಜನೆಯಡಿ ಒಂದೂವರೆ ವರ್ಷದಲ್ಲಿ ಈ ಭಾಗಕ್ಕೆನೀರು ಹರಿಸಲು ಸಂಸದರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ವರ್ಷದ 365 ದಿನವೂ ಕೆರೆಗಳಿಗೆ ನೀರು ಹರಿಯಬೇಕಿದ್ದು, ಅದು ಸಾಧ್ಯವಾದರೆ ಮಾತ್ರವೇ ಜಿಲ್ಲೆಯು ಎಲ್ಲ ರೀತಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಉದ್ಯೋಗಾವಕಾಶ: ಮುಳಬಾಗಿಲು ತಾಲೂಕಿನಲ್ಲಿ ಇತ್ತೀಚೆಗೆ ನಡೆಸಿದ್ದ ಮಿನಿ ಉದ್ಯೋಗ ಮೇಳದಲ್ಲಿ 900 ಮಂದಿಗೆ ಸ್ಥಳದಲ್ಲೇ ಉದ್ಯೋಗವಕಾಶ ಸಿಕ್ಕಿತ್ತು. ಇದೇ ಮಾದರಿಯಲ್ಲಿ ಕೋಲಾರದಲ್ಲಿ ಉದ್ಯೋಗ ಮೇಳವನ್ನು ಸದ್ಯದಲ್ಲೇ ನಡೆಸಿ 4-5 ಸಾವಿರ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದರು.

ಮನೆ ಮನೆ ನೀರು: ಎತ್ತಿನಹೊಳೆ ಯೋಜನೆಯಡಿ ನೀರು ಬಂದ ಬಳಿಕ ಸಮಸ್ಯೆ ಬಹುತೇಕ ಬಗೆಹರಿಯಲಿದೆ. ಮನೆ ಮನೆಗೆ ನಲ್ಲಿ ಮೂಲಕ ನೀರನ್ನು ನೀಡಬೇಕು ಎನ್ನುವ ಆಸೆ ನನ್ನದಾಗಿದ್ದು, ಆನಂತರ ಟ್ಯಾಂಕರ್‌ಗಳ ಹಾವಳಿಯೂ ತಪ್ಪಲಿದೆ ಎಂದು ತಿಳಿಸಿದರು.

ಎಲ್ಲಾ ತಾಲೂಕುಗಳ ಸಂಪರ್ಕ: ಕೋಲಾರವು ಬೆಂಗಳೂರಿನಿಂದ 65 ಕಿ.ಮೀ. ದೂರದಲ್ಲಿದ್ದರೂ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದೆ ಉಳಿದಿದೆ. ಹೀಗಾಗಿ ನಗರವನ್ನು ಅಭಿವೃದ್ಧಿಪಡಿಸಲು ಯೋಜನೆ ಗಳನ್ನು ರೂಪಿಸಲಾಗುವುದು. ರಸ್ತೆಗಳನ್ನು ಸರಿಪಡಿಸುವುದು, ರಿಂಗ್‌ ರಸ್ತೆ ನಿರ್ಮಿಸಿ ಎಲ್ಲಾ ತಾಲೂಕುಗಳ ಸಂಪರ್ಕಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ನೆರವು ಬಂದೇ ಬರುತ್ತೆ: ರಾಜ್ಯದ ಸಿಎಂ ಬಿ.ಎಸ್‌.ಯಡಿಯೂರಪ್ಪ ಬಹಳ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ.ಕಾರಣಾಂತರಗಳಿಂದ ಪ್ರವಾಹ ಪೀಡಿತರಿಗೆ ನೆರವು ವಿಳಂಬವಾಗಿರಬಹುದು. ಆದರೆ, ಅದು ಬಂದೇ ಬರುತ್ತದೆ. ಪ್ರಧಾನಿಅವರನ್ನು ಭೇಟಿಯಾಗಲು ಮತ್ತೆ ಸಿಎಂ ದೆಹಲಿಗೆ ತೆರಳಲಿದ್ದಾರೆ ಎಂದು ಹೇಳಿದರು.

ಹಿಂದಿನ ಮೈತ್ರಿ ಸರ್ಕಾರದಲ್ಲಿ ಜಿಲ್ಲೆಗೆ ಬಿಡುಗಡೆಯಾಗಿದ್ದ ಅನುದಾನವನ್ನು ಹೊಸ ಸರ್ಕಾರ ಬಂದ ಬಳಿಕ ತಡೆಯಲಾಗಿದೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಶೀಘ್ರವೇ ಮುಖ್ಯಮಂತ್ರಿ ಬಳಿ ಚರ್ಚಿಸಿ ಜಿಲ್ಲೆಗೆ ಅನ್ಯಾಯವಾಗದಂತೆ ಕ್ರಮವಹಿಸಲಾಗುವುದು ಎಂದರು.

ಇತ್ತೀಚೆಗೆ ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿ ಕೊಂಡಿರುವುದು ಬೇಸರದ ಸಂಗತಿ. ಅವರ ಸಾಲವೂ ಹೆಚ್ಚಿನ ಪ್ರಮಾಣದ್ದಲ್ಲ. ತಾವೂ ತಮ್ಮ ಕ್ಷೇತ್ರದ ರೈತನ ಮನೆಗೆ ಭೇಟಿ ನೀಡಿ ಸ್ಥಳದಲ್ಲೇ 2 ಲಕ್ಷ ರೂ. ಪರಿಹಾರ, ಆತನ ಮಗನಿಗೆ ಉದ್ಯೋಗವಕಾಶ ಕಲ್ಪಿಸಿಕೊಟ್ಟಿದ್ದೇವೆ ಎಂದರು. ಡೀಸಿ ಜೆ.ಮಂಜುನಾಥ್‌, ಉಪ ವಿಭಾಗಾಧಿಕಾರಿ ಸೋಮಶೇಖರ್‌, ಅಬಕಾರಿ ಉಪ ಆಯುಕ್ತೆ ಕೆ.ಕೆ.ಸುಮಿತ್ರಾ, ತಹಶೀಲ್ದಾರ್‌ ನಾಗವೇಣಿ, ಅಪ್ಪಿ ನಾರಾಯಣ ಸ್ವಾಮಿ, ನಾಗೇಶ್‌ ಅಭಿಮಾನಿಗಳಾದ ಕದಸಂಸವಿಜಯಕುಮರ್‌, ವಿನೋದ್‌, ಮುನಿಆಂಜಿ, ರಾಜಪ್ಪ, ಇದ್ದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.