ಕಾಡಲ್ಲಿನ ಮಕ್ಕಳು ಶಾಲೆಗೆ ಕರೆತರಲು ಪ್ರಯತ್ನ


Team Udayavani, Jan 31, 2020, 2:45 PM IST

kolar-tdy-1

ಶಾಲೆಯಿಂದ ದೂರ ಉಳಿದು, ಶ್ರೀನಿವಾಸಪುರ ತಾಲೂಕಿನ ಕೊಳ್ಳೂರು ಸಮೀಪದ ರಸೆ ಯ ಕಾಡಿನಲ್ಲಿದ್ದ ವಲಸೆ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಬೇಕೆಂಬ ನಿಟ್ಟಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ತಂಡ ಪೋಷಕರ ಮನವೊಲಿಕೆ ಮಾಡುತ್ತಿರುವುದು

ಶ್ರೀನಿವಾಸಪುರ: ಶಾಲೆಯಿಂದ ದೂರು ಉಳಿದು ಅರಣ್ಯದಲ್ಲಿ ಇರುವ ಮಕ್ಕಳು ಹಾಗೂ ಪೋಷಕರನ್ನು ಗುರುವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ತಂಡ ಭೇಟಿ ಮಾಡಿ, ಮಕ್ಕಳನ್ನು ಶಾಲೆಗೆ ಸೇರಿಸುವಂತೆ ಮನವಿ ಮಾಡಿದೆ. ಆದರೆ, ಇದಕ್ಕೆ ಮಕ್ಕಳ ಪೋಷಕರು ಸೂಕ್ತ ಸ್ಪಂದನೆ ನೀಡುತ್ತಿಲ್ಲ. ಪಟ್ಟಣದಿಂದ 5 ಕಿ.ಮೀ.ದೂರದ ಅರಣ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಬಂದಿರುವ ಕೂಲಿ ಕಾರ್ಮಿಕರು ನೀಲಗಿರಿ ಮರ ಕಡಿಯುವ ಕೆಲಸದಲ್ಲಿ ತೊಡಗಿದ್ದಾರೆ.

ಶಾಲೆಯಿಂದ ದೂರ ಉಳಿದಿದ ಮಕ್ಕಳೂ ಇದ್ದಾರೆ. ಯಾವುದೇ ಸೌಲಭ್ಯಗಳಿಲ್ಲದೇ, ಅರಣ್ಯದಲ್ಲಿ ಆದಿ ಮಾನವರಂತೆ ಬದುಕು ನಡೆಸುತ್ತಿದ್ದಾರೆ. ಈ ಬಗ್ಗೆ ಉದಯವಾಣಿಯಲ್ಲಿ ಜ.28ರಂದು ವರದಿ ಪ್ರಕಟ ಮಾಡಿತ್ತು. ಇದರಿಂದ ಎಚ್ಚೆತ್ತ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಇಲಾಖೆಯ ಬಿಅರ್‌ಪಿ ಹಾಗೂ ಸಿಅರ್‌ಪಿಗಳನ್ನು ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡಿ, ವರದಿ ನೀಡುವಂತೆ ತಿಳಿಸಿದ್ದಾರೆ. ಆದರೆ, ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳ ತಂಡಕ್ಕೆ ಮಕ್ಕಳ ಪೋಷಕರು ಸಮರ್ಪಕ ಮಾಹಿತಿ ನೀಡಿಲ್ಲ.

ಸ್ಪಂದಿಸುತ್ತಿಲ್ಲ: ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ, ಕ್ಷೇತ್ರ ಸಂಪನ್ಮೂಲ ಸಂಯೋಜಕರಾದ ಕೆ.ಸಿ.ವಸಂತ, ಬಿಆರ್‌ಪಿ, ಸಿಆರ್‌ಪಿ ಹಾಗೂ ಸ್ಥಳೀಯ ಶಾಲೆಯ ಶಿಕ್ಷಕರು ಅರಣ್ಯಕ್ಕೆ ಭೇಟಿ ನೀಡಿ, ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು, ಇದು ಕಡ್ಡಾಯವಾಗಿದೆ ಎಂದು ಪೋಷಕರಿಗೆ ತಿಳಿಸಿದ್ದರೂ ಅದಕ್ಕೆ ಸರಿಯಾದ ರೀತಿ ಸ್ಪಂದಿಸಿಲ್ಲ.

ಇಲ್ಲ ಸಲ್ಲದ ಸಬೂಬು: ನಾವು ಹೊರಟು ಹೋಗುತ್ತೇವೆ. ನಮಗೆ ಶಿಕ್ಷಣ ಬೇಡ, ಒಂದೆರೆಡು ವಾರ ಇಲ್ಲಿ ಇರುತ್ತೇವೆ. ಹಬ್ಬಕ್ಕಾಗಿ ಮಕ್ಕಳು ಇಲ್ಲಿಗೆ ಬಂದಿದ್ದಾರೆ ಎಂದು ಇಲ್ಲ ಸಲ್ಲದ ಸಬೂಬು ಹೇಳಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅಲ್ಲಿನ ಸತ್ಯಾಂಶ ತಿಳಿದು ಬಂತು, 1 ಗಂಟೆಗಳ ಕಾಲ ಪೋಷಕರೊಂದಿಗೆ ಚರ್ಚೆ ನಡೆಸಿದರೂ ವಿಫ‌ಲ ವಾಗಿದೆ. ಆದರೂ ಒಲ್ಲದ ಮನಸ್ಸಿನಲ್ಲಿ ಕೂಲಿ ಕಾರ್ಮಿಕರನ್ನು ಕರೆ ತಂದಿರುವ ಶಂಕರ್‌, ಗುರುವಾರ ರಾತ್ರಿ ಪೋಷಕರೊಂದಿಗೆ ಚರ್ಚಿಸಿ, ಶುಕ್ರವಾರ ನಿಮಗೆ ತಿಳಿಸುತ್ತೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಶಿಕ್ಷಣ ಇಲಾಖೆಯಲ್ಲಿ ಮಕ್ಕಳಿಗೆ ಇರುವ ಉಚಿತ ಸೌಲಭ್ಯಗಳು, ಅವರ ಭವಿಷ್ಯದ ಬಗ್ಗೆ ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಹೆಚ್ಚು ತಿಳಿವಳಿಕೆ ನೀಡಿದ್ದಾರೆ. ಮಕ್ಕಳನ್ನು ಶಾಲೆಗೆ ಕರೆ ತಂದರೂ ಸರಿ, ಇಲ್ಲವೇ ತಾವು ಇರುವ ಸ್ಥಳದಲ್ಲಿಯೇ ಬೋರ್ಡ್‌ ಹಾಕಿ ಮಕ್ಕಳಿಗೆ ಅಕ್ಷರ ಕಲಿಸುತ್ತೇವೆ. ಪುಸ್ತಕ, ಪೆನ್ನು, ಬಿಸಿಯೂಟ ಸಹ ಇಲ್ಲಿಗೆ ತಂದು ಕೊಡುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಎಲ್ಲಾ ಪ್ರಯತ್ನಗಳ ನಡುವೆ ಕೂಲಿ ಕಾರ್ಮಿಕರನ್ನು ಕರೆತರುವ ನಟರಾಜ್‌, ಸ್ಥಳಕ್ಕೆ ಬಂದಿದ್ದು, ಅವರಿಗೂ ಮಕ್ಕಳ ಭವಿಷ್ಯದ ಬಗ್ಗೆ ತಿಳಿಸಿಕೊಡಲಾಗಿದೆ. ಈ ಮಕ್ಕಳಿಗೆ ಕೊಳ್ಳೂರಿನ ಶಾಲೆಯ ಪ್ರತ್ಯೇಕ ಕೊಠಡಿಯಲ್ಲಿ ಅಕ್ಷರ ಕಲಿಸಿಕೊಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದಕ್ಕೆ ಪೋಷಕರು ಒಪ್ಪಿಗೆನೀಡುವ ಸಾಧ್ಯತೆ ಇದ್ದು, ಮಕ್ಕಳು ಶುಕ್ರವಾರ ಶಾಲೆಗೆ ಮರಳುವ ಸಾಧ್ಯತೆಗಳು ಇದೆ. ಈ ಬಗ್ಗೆ ಕೋಲಾರದ ಮಕ್ಕಳ ರಕ್ಷಣಾ ಘಟಕ ಸಹ ಕ್ಷೇತ್ರ ಶಿಕ್ಷಣಾಧಿಕಾರಿಗಳಲ್ಲಿವಸ್ತು ಸ್ಥಿತಿ ಬಗ್ಗೆ ಮಾತುಕತೆ ನಡೆಸಿದೆ. ಅದೇ ರೀತಿ ಸಾರ್ವಜನಿಕರು, ಕೆಲವು ಸಂಘಗಳು ಈ ಬಗ್ಗೆ ಚರ್ಚೆಗೆ ಮುಂದಾಗಿವೆ.  ಒಟ್ಟಾರೆ ಶಿಕ್ಷಣದಿಂದ ವಂಚಿತ ರಾಗಿರುವ ಈ ಮಕ್ಕಳು ಮರಳಿ ಶಾಲೆಗೆ ಬರ ಬೇಕೆಂಬುದು ಉದಯವಾಣಿ ಆಶಯವಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.