ಮುಟ್ಟುಗೋಲು ಹಾಕಿಕೊಂಡ್ರೂ ವಶವಿಲ್ಲ


Team Udayavani, Dec 31, 2019, 3:14 PM IST

kolar-tdy-1

ಮುಳಬಾಗಿಲು: ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ಇಲ್ಲೇ ಕೆಲಸ ಮಾಡುತ್ತಿರುವ ಕೆಲವು ಸ್ಥಳೀಯ ಅಧಿಕಾರಿಗಳು, ಸಿಬ್ಬಂದಿ ಭೂ ಮಾಫಿಯಾ ದೊಂದಿಗೆ ಶಾಮೀಲಾಗಿ ಸರ್ಕಾರಿ ಜಮೀನು ಸಂರಕ್ಷಣೆ ಮಾಡದೇ, ನಕಲಿ ದಾಖಲೆಗಳ ಮೂಲಕ ಪರಭಾರೆ ಮಾಡುತ್ತಿದ್ದಾರೆ ಎಂಬ ಆರೋಪ ವಿದ್ದು, 9 ವರ್ಷಗಳ ಹಿಂದೆ 36 ಎಕರೆ ಸರ್ಕಾರಿ ಜಮೀನನ್ನು ಮುಟ್ಟುಗೋಲು ಹಾಕಿಕೊಂಡಿದ್ದರೂ ವಶಪಡಿಸಿ ಕೊಂಡಿಲ್ಲ. ಹೀಗಾಗಿ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರಾದ್ರೂ ಈ ಕಡೆ ಗಮನ ಹರಿಸಬೇಕೆಂಬುದು ಸ್ಥಳೀಯರ ಮನವಿಯಾಗಿದೆ.

ತಾಲೂಕಿನ ಆವಣಿ ಹೋಬಳಿ ರಾಷ್ಟ್ರೀಯ ಹೆದಾರಿ 75ರ ಅಂಚಿನಲ್ಲಿರುವ ಜಮ್ಮನಹಳ್ಳಿ ಸರ್ವೆ ನಂಬರ್‌ 103ರಲ್ಲಿನ ಸರ್ಕಾರಿ ಗೋಮಾಳದಲ್ಲಿ 1969-72ನೇ ಸಾಲಿನಲ್ಲಿ ದೇವರಾಯಸಮುದ್ರ ಜಿ.ಎಸ್‌.ವೆಂಕಟೇಶ್‌ ಅಯ್ಯರ್‌ ಕಂದಾಯ ಇಲಾಖೆ ಕೆಲ ಅಧಿಕಾರಿಗಳ ಕುಮ್ಮಕ್ಕಿನಿಂದ ಸರ್ವೆ ನಂಬರ್‌ 103/4, 103/5, 103/6, 103/7 ರಲ್ಲಿ ತಲಾ 5 ಎಕರೆಯಂತೆ ಒಟ್ಟು 20 ಎಕರೆಯನ್ನು ನಕಲಿ ದಾಖಲೆಗಳ ಸೃಷ್ಟಿ ಮೂಲಕ ಪಡೆದುಕೊಂಡಿದ್ದರು. ಅದೇ ರೀತಿ ಎಂ.ಆರ್‌. ವೆಂಕಟೇಶ್‌ಅಯ್ಯರ್‌ ಸಹ ಜಮ್ಮನಹಳ್ಳಿ ಸರ್ವೆ ನಂಬರ್‌ 103/9, 103/10, 103/11, 103/13 ರಲ್ಲಿ ತಲಾ 4ರಂತೆ ಒಟ್ಟು 16 ಎಕರೆ ಸೇರಿ 36 ಎಕರೆ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿಕೊಂಡು ಲಕ್ಷಾಂತರ ರೂ.ಗೆ ಬೆಂಗಳೂರಿನ ಸಯ್ಯದ್‌ಮಸ್ತಾನ್‌ ಅವರಿಗೆ ಮಾರಾಟ ಮಾಡಿದ್ದಾರೆ.

ನಕಲಿ ದಾಖಲಿ ಸೃಷ್ಟಿ: ಈ ಭೂ ಕಬಳಿಕೆಯ ಸುಳಿವನ್ನು ಅರಿತ ದಸಂಸ ತಾಲೂಕು ಸಂಚಾಲಕ ಕೀಲುಹೊಳಲಿ ಸತೀಶ್‌ ಮತ್ತು ಕಾರ್ಗಿಲ್‌ ವೆಂಕಟೇಶ್‌ ಅಕ್ರಮ ಭೂ ದಾಖಲೆ ರದ್ದುಗೊಳಿಸಿ ಜಮೀನನ್ನು ಸರ್ಕಾರ ಮುಟ್ಟು ಗೋಲು ಹಾಕಿಕೊಳ್ಳಬೇಕೆಂದು 2008ರಲ್ಲಿ ಅಂದಿನ ಜಿಲ್ಲಾಧಿಕಾರಿಗೆ ಅರ್ಜಿ ನೀಡಿದ್ದರು. ಅದರ ಅನ್ವಯ ಕಾರ್ಯಪ್ರವೃತ್ತವಾದ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ 2010ರಲ್ಲಿ ಅಂದಿನ ತಹಶೀಲ್ದಾರ್‌ ಜಯಮಾಧವ್‌, ನಕಲಿ ದಾಖಲೆ ರದ್ದುಗೊಳಿಸಿ ರಾಷ್ಟ್ರೀಯ ಹೆದ್ದಾರಿ 75ರ ಅಂಚಿನಲ್ಲಿ ರುವ ಜಮೀನನ್ನು ಮುಟ್ಟುಗೋಲು ಹಾಕಿ ಕೊಂಡಿದ್ದರು.

ಅಲ್ಲದೇ, ಇಲಾಖೆ ವಶಕ್ಕೆ ಪಡೆಯಲು ಆದೇಶಿಸಿದ್ದಾರೆ. ಅದರಂತೆ, ಈ ಜಮ್ಮನಹಳ್ಳಿ ಸರ್ವೆ ನಂಬರ್‌ 103/9, 103/10, 103/11, 103/13 ರಲ್ಲಿ ತಲಾ 4 ಎಕರೆಯಂತೆ ಒಟ್ಟು 16 ಎಕರೆ ಸೇರಿದ ಪಹಣಿಗಳಲ್ಲಿ ಮಾತ್ರ ಎಂ.ಆರ್‌.8/2011-12, ದಿ.7/2/12 ರಂತೆ ಸರ್ಕಾರಕ್ಕೆ ಎಂದು ನಮೂದಿಸಲಾಗಿದೆ. ಆದರೆ, ಮುಟ್ಟುಗೋಲು ಹಾಕಿಕೊಂಡ ಜಮ್ಮನಹಳ್ಳಿ ಸರ್ವೆ ನಂಬರ್‌ 103/4, 103/5, 103/6, 103/7 ರಲ್ಲಿ ತಲಾ 5 ಎಕರೆ ಸೇರಿ 20 ಎಕರೆ ಜಮೀನು ಪಹಣಿಗಳಲ್ಲಿ ಮಾತ್ರ ಎಂ.ಆರ್‌ .13/2011/12, ದಿ.31/1/12 ರಂತೆ ಸರ್ಕಾರಕ್ಕೆ ಮತ್ತು ಬೆಳೆ ಕಾಲಂನಲ್ಲಿ ರಾಗಿ ಎಂದು ನಮೂದಿಸಿದೆ.

ಕೋರ್ಟ್‌ ತಡೆಯಾಜ್ಞೆ: ಅಲ್ಲದೇ, ನ್ಯಾಯಾಲಯದ ಡಬ್ಯೂಪಿ ನಂಬರ್‌ 13679/2012, ಜು.24, 2012 ರಂದು ತಡೆಯಾಜ್ಞೆ ನೀಡಿದೆ ಎಂದು ನಮೂದಿಸ ಲಾಗಿದೆ. ಆದರೆ, 2010ರ ನ.12 ರಂದು ಅಂದಿನ ತಹಶೀಲ್ದಾರ್‌ ಜಯಮಾದವ್‌, ದೇವರಾಯಸಮುದ್ರ ಜಿ.ಎಸ್‌.ವೆಂಕಟೇಶ್‌ಅಯ್ಯರ್‌ ಹೆಸರಿನಲ್ಲಿದ್ದ 20 ಎಕರೆ ಮತ್ತು ಎಂ.ಆರ್‌.ವೆಂಕಟೇಶ್‌ ಅಯ್ಯರ್‌ ಹೆಸರಿನಲ್ಲಿದ್ದ 16 ಎಕರೆ ಸೇರಿ 36 ಎಕರೆ ಜಮೀನನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲು ಆದೇಶಿಸಿತ್ತು. ಆದರೆ, ಜಿ.ಎಸ್‌.ವೆಂಕಟೇಶ್‌ಅಯ್ಯರ್‌ ಹೆಸರಿನಲ್ಲಿದ್ದ 20 ಎಕರೆ ಜಮೀನು ವಿಚಾರವಾಗಿ ಎರಡು ವರ್ಷಗಳ ನಂತರ 2012ರಲ್ಲಿ ನ್ಯಾಯಾಲಯ ತಡೆಯಾಜ್ಞೆ ನೀಡಿದ್ದು, ಏಳು ವರ್ಷಗಳೇ ಕಳೆದರೂ ತಹಶೀಲ್ದಾರ್‌ ಯಾರೂ ತಡೆಯಾಜ್ಞೆ ತೆರವುಗೊಳಿಸಿಲ್ಲ. ಅಲ್ಲದೇ, ಯಾವುದೇ ಅಡೆತಡೆಯಿಲ್ಲದ ಎಂ.ಆರ್‌.ವೆಂಕಟೇಶ್‌ಅಯ್ಯರ್‌ ಹೆಸರಿನಲ್ಲಿದ್ದ 16 ಎಕರೆ ಜಮೀನನ್ನೂ ವಶಕ್ಕೆ ತೆಗೆದುಕೊಳ್ಳದೇ ಕೈ ಬಿಟ್ಟಿದ್ದಾರೆ.

ಕಲ್ಲಿನ ಕಾಂಪೌಂಡು: ಒಟ್ಟಿನಲ್ಲಿ ತಹಶೀಲ್ದಾರ್‌ ಜಯ ಮಾದವ್‌ ಆದೇಶ ಮಾಡಿ 9 ವರ್ಷಗಳೇ ಕಳೆದರೂ ಕಂದಾಯ ಅಧಿಕಾರಿಗಳು ಜಮೀನನ್ನು ತೆರವುಗೊಳಿ ಸದೇ ಇರುವುದರಿಂದ ಕೋಟ್ಯಂತರ ರೂ. ಮೌಲ್ಯದ ಸರ್ಕಾರಿ ಜಮೀನು ಸಯ್ಯದ್‌ಮಸ್ತಾನ್‌ ಅವರ ವಶ ದಲ್ಲಿದ್ದು, ಅವರು ಜಮೀನಿನ ಸುತ್ತಲೂ ಕಲ್ಲಿನ ಕಾಂಪೌಂಡ್‌ ನಿರ್ಮಿಸಿ, ಅದರಲ್ಲಿ ರೋಜಾ ಹೂ ಹಾಗೂ ಮತ್ತಿತರ ಬೆಳೆ ಬೆಳೆಯುತ್ತಿದ್ದಾರೆ. ಜಿಲ್ಲಾಧಿಕಾರಿ ಆಗಲಿ ತಹಶೀಲ್ದಾರ್‌ ಆಗಲಿ ಮುಟ್ಟು ಗೋಲು ಹಾಕಿಕೊಂಡಿರುವ ಜಮೀನನ್ನು ವಶಕ್ಕೆ ತೆಗೆದುಕೊಳ್ಳದೇ ಇರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ನಿರ್ಲಕ್ಷ್ಯ: ಭೂಕಬಳಿಕೆ ತಡೆಗಟ್ಟಲು ಸರ್ಕಾರ ಹಲವು ಕಟ್ಟುನಿಟ್ಟಿನ ಆದೇಶ ಜಾರಿಗೊಳಿಸಲಾಗುತ್ತಿದ್ದರೂ ಇತ್ತ ಕೋಟ್ಯಂತರ ರೂ. ಸರ್ಕಾರಿ ಜಮೀನು ದಲಿತ ಸಂಘ ಟನೆಗಳ ಕಾನೂನು ಹೋರಾಟದಿಂದ ಸರ್ಕಾರಕ್ಕೆ ದಕ್ಕಿದ್ದರೂ ಸ್ಥಳೀಯ ಕಂದಾಯ ಅಧಿಕಾರಿಗಳಿಗೆ ಸರ್ಕಾರಿ ಜಮೀನು ಪರಭಾರೆ ಮಾಡುವಲ್ಲಿ ಇರುವ ಉತ್ಸಾಹ ಸರ್ಕಾರಿ ಜಮೀನು ಸಂರಕ್ಷಣೆ ಮಾಡುವಲ್ಲಿ ಇಲ್ಲದೇ, ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಜಮೀನು ಖಾಸಗಿ ವ್ಯಕ್ತಿಯ ಆಧೀನದಲ್ಲೇ ಉಳಿದಿರುವುದರಿಂದ ಪ್ರಾದೇ ಶಿಕ ಆಯಕ್ತ ಹರ್ಷಗುಪ್ತ ಇತ್ತ ಗಮನ ಹರಿಸಬೇಕಾಗಿದೆ.

 

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.