21ಲಕ್ಷ ರೂ. ವಂಚನೆ: ಲೋಕಾಯುಕ್ತಕ್ಕೆ ದೂರು


Team Udayavani, Aug 1, 2023, 3:48 PM IST

tdy-18

ಬಂಗಾರಪೇಟೆ: ತಾಲೂಕಿನ ಕೇತಗಾನಹಳ್ಳಿ ಗ್ರಾಪಂ ನಲ್ಲಿ 2022-23ನೆ ಸಾಲಿನ 15ನೇ ಹಣಕಾಸಿನಲ್ಲಿ ನಕಲಿ ಬಿಲ್‌ ಸೃಷ್ಠಿಸಿ 21ಲಕ್ಷ ರೂ. ಗಳನ್ನು ಅಧ್ಯಕ್ಷರು ಹಾಗೂ ಪಿಡಿಒ ಸೇರಿ ದುರ್ಬಳಕೆ ಮಾಡಿಕೊಂಡಿರುವ ಬಗ್ಗೆ ಸದಸ್ಯರಿಂದಲೇ ಲೋಕಾಯುಕ್ತಕ್ಕೆ ಹಾಗೂ ಜಿಪಂ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

ತಾಲೂಕಿನ ಕಾಮಸಮುದ್ರ ಹೋಬಳಿಯ ಕೇತಗಾನಹಳ್ಳಿ ಗ್ರಾಪಂ ಅಧ್ಯಕ್ಷರಾದ ಆಶಾಲತ ಮತ್ತು ಪಿಡಿಒಎಂ.ರವಿ 15ನೇ ಹಣಕಾಸು ಖರ್ಚು ಮಾಡುವ ನಿಯಮಾವಳಿಯನ್ನು ಉಲ್ಲಂಘನೆ ಮಾಡಿದ್ದು, ವಿವಿಧ ಅಭಿವೃದ್ಧಿಗೆ ಬಳಸಬೇಕಾದ 15ನೇ ಹಣಕಾಸಿನಲ್ಲಿ ಸದಸ್ಯರಿಗೆ ಮಂಕು ಬೂದಿ ಎರಚಿ 21ಲಕ್ಷ ಡ್ರಾ ಮಾಡಿ ಅದಕ್ಕೆ ನಕಲಿ ಬಿಲ್‌ ತಯಾರಿಸಿ ವಂಚಿಸಿರುವುದು ಬೆಳಕಿಗೆ ಬಂದಿದೆ. 15ನೇ ಹಣಕಾಸಿನಲ್ಲಿ 11ಲಕ್ಷಕ್ಕಿಂತ ಹೆಚ್ಚಿನ ಹಣ ಡ್ರಾ ಮಾಡಬಾರೆಂದು ಕಾನೂನು ಇದ್ದರೂ, ಸಹ ಅಧ್ಯಕ್ಷರು ಹಾಗೂ ಪಿಡಿಒ ಒಂದಾಗಿ ಎರಡೇ ತಿಂಗಳಲ್ಲಿ ಇಬ್ಬರ ಹೆಸರಿನಲ್ಲಿ 21ಲಕ್ಷ ಡ್ರಾ ಮಾಡಿರುವುದನ್ನು ಸದಸ್ಯರು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಒಂದೇ ತಿಂಗಳಲ್ಲಿ ಹತ್ತಾರು ಬಾರಿ ಹಣ ಡ್ರಾ: ತಾಲೂಕಿನ ಕಾಮಸಮುದ್ರದ ಮೋಹನ್‌ ಎಲೆಕ್ಟ್ರಿಕಲ್ಸ್‌ ಮತ್ತು ಹಾರ್ಡ್‌ವೇರ್‌ ಹಾಗೂ ಕೋಲಾರದ ಕರ್ನಾಟಕ ಎಲೆಕ್ಟ್ರಿಕಲ್ಸ್‌ ಏಜೆನ್ಸಿ ಎಂಬ ಹೆಸರಿನಲ್ಲಿ, ಒಂದೇ ತಿಂಗಳಲ್ಲಿ ಹತ್ತಾರು ಬಾರಿ ಎರಡು ಸಂಸ್ಥೆಗಳಿಗೆ ಹಣ ನೀಡಿರುವಂತೆ ನಕಲಿ ಬಿಲ್‌ ತಯಾರಿಸಿ 21ಲಕ್ಷ ರೂಗಳನ್ನು ಸರ್ಕಾರಕ್ಕೆ ವಂಚಿಸಲಾಗಿದೆ. ಈ ಹಿಂದೆ ಈ ಗ್ರಾಪಂ ಉತ್ತಮ ಹಾಗೂ ಭ್ರಷ್ಟಾಚಾರ ಇಲ್ಲದೆ ಆಡಳಿತ ನಡೆಸಿ ಮತ್ತು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ದ್ದರಿಂದ ಎರಡು ಬಾರಿ ಮಹಾತ್ಮಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿತ್ತು. ಇಂತಹ ಗ್ರಾಪಂ ನಲ್ಲಿ ಈಗ ಭ್ರಷ್ಟಾಚಾರ ನಡೆದಿರುವುದು ಗ್ರಾಪಂ ಆಡಳಿತ ಎತ್ತ ಸಾಗಿದೆ ಎಂದು ಗ್ರಾಮಸ್ಥರು ಪ್ರಶ್ನಿಸುವಂತಾಗಿದೆ.

ಹಣಕಾಸಿನ ಅವ್ಯವಹಾರ ತನಿಖೆಗೆ ಒತ್ತಾಯ: ಮಹಾತ್ಮಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗಳಿಸಿರುವ ಗ್ರಾಪಂ ನಲ್ಲಿ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಯಿಂದ ಸದಸ್ಯರ ಗಮನಕ್ಕೆ ತರದೆ, ಸರ್ವಾಧಿಕಾರಿಯಂತೆ ಹಣ ಡ್ರಾ ಮಾಡಿ ವಂಚನೆ ಮಾಡಿರುವ ಪ್ರಕರಣ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಪಂ ಸದಸ್ಯರು ಲೋಕಾಯುಕ್ತರಿಗೆ ದೂರು ನೀಡಿದ್ದರೆ. ಕಳೆದ ಎರಡು ವರ್ಷಗಳಿಂದ ಗ್ರಾಪಂಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಹಾಗೂ ಹಣಕಾಸಿನ ವ್ಯವಹಾರಗಳನ್ನು ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗ್ರಾಪಂ ಸದಸ್ಯರಾದ ನಾರಾಯಣಸ್ವಾಮಿ, ಶ್ರೀಧರ್‌, ನಟರಾಜ್‌, ಅರುಣ, ರವಿ, ಸುಭ್ರಮಣಿ, ಪ್ರದೀಪ್‌ ಮತ್ತು ನಾಗರಾಜ್‌ ಒತ್ತಾಯಿಸಿದ್ದಾರೆ.

2022-23ರ ಸಾಲಿನಲ್ಲಿ 15ನೆ ಹಣಕಾಸು ಯೋಜನೆಯ 36 ಲಕ್ಷ ಅನುದಾನವನ್ನು ಖರ್ಚು ಮಾಡುವ ಬಗ್ಗೆ ಕ್ರಿಯಾಯೋಜನೆ ತಯಾರಿಸಲಾಗಿತ್ತು. ಈ ವರ್ಷದಲ್ಲಿ ಅಭಿವೃದ್ಧಿಪಡಿಸದೇ ಈ ಅನುದಾನವನ್ನು ಇಲ್ಲಿಯವರೆಗೂ ಉಳಿಸಿಕೊಂಡು ಬಂದಿದ್ದು, ಪ್ರಸ್ತುತ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆಯುತ್ತಿದ್ದು, ಹಾಲಿ ಗ್ರಾಪಂ ಅಧ್ಯಕ್ಷರು ಅಧಿಕಾರ ಕೊನೆಗೊಳ್ಳುವ ಉಸಾಬರಿಯಲ್ಲಿ ಕೆಲವು ಸದಸ್ಯರು, ಹಾಲಿ ಪಿಡಿಒ ಎಂ.ರವಿ ನಕಲಿ ಬಿಲ್‌ ಸೃಷ್ಟಿಸಿ ಮೂರು ಅಂಗಡಿಗಳಲ್ಲಿ ಕುಡಿಯುವ ನೀರಿಗೆ ಸಂಬಂಧಪಟ್ಟ ಸಲಕರಣೆ ಖರೀದಿಸಿರುವ ಬಗ್ಗೆ ಅಕ್ರಮ ಬಿಲ್‌ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸಿ ತುರ್ತು ಕ್ರಮ ಕೈಗೊಳ್ಳಬೇಕಾಗಿದೆ. ಶ್ರೀಧರ್‌, ಗ್ರಾಪಂ ಸದಸ್ಯರು

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.