ಜೀವನದಲ್ಲಿ ನೈತಿಕತೆ ಮುಖ್ಯ


Team Udayavani, Nov 10, 2020, 5:11 PM IST

ಜೀವನದಲ್ಲಿ ನೈತಿಕತೆ ಮುಖ್ಯ

ಕೆಜಿಎಫ್: ವಚನಕಾರರು ಹೇಳಿದಂತೆ ನಾವು ಜೀವನದಲ್ಲಿನೈತಿಕತೆಬೆಳೆಸಿಕೊಂಡರೆ ನ್ಯಾಯಾಲಯ ಮತ್ತು ಪೊಲೀಸ್‌ ಠಾಣೆಗಳಿಗೆ ಬೀಗ ಹಾಕಬೇಕಾಗುತ್ತದೆ ಎಂದು ನ್ಯಾ.ದಯಾನಂದ ವಿ.ಹಿರೇಮಠ ಹೇಳಿದರು.

ನಗರದ ನ್ಯಾಯಾಲಯದಲ್ಲಿ ಸೋಮ ವಾರ ಕಾನೂನು ಅರಿವು ಶಿಬಿರದಲ್ಲಿ ಮಾತನಾಡಿ, ನ್ಯಾಯಾಲಯದಲ್ಲಿ ಸತ್ಯವನ್ನೇ ಹೇಳುತ್ತೇನೆ ಎಂದು ಪ್ರಮಾಣ ಮಾಡುತ್ತಾರೆ. ಆದರೆ ಮೊದಲ ವಾಕ್ಯದಿಂದಲೇ ಸುಳ್ಳನ್ನು ಹೇಳಲು ಶುರು ಮಾಡುತ್ತಾರೆ. ಇಂತಹವರಿಂದ ಎಂತಹ ನೈತಿಕತೆ ನಿರೀಕ್ಷಿಸಲು ಸಾಧ್ಯ. ವಚನಕಾರರು ಹೇಳಿದಂತೆ ಕಳಬೇಡ, ಕೊಲಬೇಡ, ಹುಸಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ, ಮುನಿಯಬೇಡ ಎಂಬ ತತ್ವವನ್ನು ನಾವೆಲ್ಲರೂ ಅನುಸರಿಸಿಕೊಂಡು ಹೋಗಬೇಕು ಎಂದರು.

ಸಂವಿಧಾನದಲ್ಲಿ ಹಲವಾರು ಕಾನೂನುಗಳನ್ನು ಜಾರಿಗೆ ತರುತ್ತಾರೆ. ಎಲ್ಲಾಕಾನೂನಿನ ತಿಳುವಳಿಕೆಯನ್ನು ನಾವು ಹೊಂದಬೇಕು ಎಂಬುವುದು ಆಶಯವಾಗಿದೆ. ಸಣ್ಣಪುಟ್ಟ ವ್ಯಾಜ್ಯಗಳಿಗೂನ್ಯಾಯಾಲಯಗಳಿಗೆ ಎಡತಾಕುವ ಕೆಲಸ ಆಗುತ್ತಿದೆ. ಕಾನೂನಿನ ಅರಿವು ಇದ್ದರೆ ಅವುಗಳನ್ನು ನ್ಯಾಯಾಲಯದ ಹೊರಗೆಯೇ ನ್ಯಾಯ ಪಡೆಯಬಹುದು ಎಂದರು.

ನ್ಯಾ.ಮಹೇಶ್‌ ಎಸ್‌.ಪಾಟೀಲ್‌ ಮಾತನಾಡಿದರು. ನ್ಯಾಯಾಧೀಶರಾದ ರೂಪಾ, ಕಿರಣ್‌, ವಕೀಲರ ಸಂಘದ ಅಧ್ಯಕ್ಷ ಕೆ.ಸಿ.ನಾಗರಾಜ್‌ ವೇದಿಕೆಯಲ್ಲಿದ್ದರು. ಕಾರ್ಯದರ್ಶಿ ಜ್ಯೋತಿಬಸು ನಿರೂಪಣೆ ಮಾಡಿದರು.

ಗ್ರಾಮಾಭಿವೃದ್ಧಿ ಯೋಜನೆಗೆ ಸರ್ಕಾರ ಸಾಥ್‌ :

ಮುಳಬಾಗಿಲು: ಸಮುದಾಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಒಳ್ಳೆಯ ಕೆಲಸಗಳನ್ನು ಮಾಡುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಸರ್ಕಾರವು ಕೈಜೋಡಿಸುವುದಾಗಿ ಎಂದು ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದರು.

ಸೋಮವಾರ ನಗರದ ಗ್ರಾಮಾಭಿವೃದ್ಧಿ ಸಂಸ್ಥೆ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಗ್ರಾಮೀಣ ಹಾಗೂ ಕನ್ನಡ ಮಾಧ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವವರ ಉತ್ತೇಜಿಸಲು ಜ್ಞಾನತಾಣ ಯೋಜನೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ ಟ್ಯಾಪ್‌ ವಿತರಿಸಿ ಮಾತನಾಡಿದರು. ತಾಪಂ ಅಧ್ಯಕ್ಷ ಶ್ರೀನಿವಾಸ್‌ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ಮಾದರಿಯಾಗಿದ್ದು, ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಕೋವಿಡ್ ಸಂದರ್ಭದಲ್ಲಿ ಶಿಕ್ಷಣಕ್ಕೆ ಒತ್ತು ಕೊಟ್ಟು ಮಕ್ಕಳು ತಂತ್ರಜ್ಞಾನದ ಮೂಲಕ ಶಿಕ್ಷಣ ಪಡೆಯಲು ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೂಂಡಿರುವುದು ಶ್ಲಾಘನೀಯ ಎಂದರು.

ತಹಶೀಲ್ದಾರ್‌ ರಾಜಶೇಖರ್‌ ಮಾತನಾಡಿ, ತಾಲೂಕಿನಲ್ಲಿ ಬೇರೆ ಬೇರೆ ಕಾರ್ಯಕ್ರಮಗಳ ಜೊತೆಗೆಕೆರೆಯ ಹೂಳೆತ್ತುವಿಕೆಕಾರ್ಯಕ್ರಮದಿಂದ ಅಂತರ್ಜಲ ಮಟ್ಟ ಹೆಚಿಸಿc ರೈತರಿಗೆ ಉಪಯೋಗಕಾರಿಯಾಗಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿಯ‌  ಜಿಲ್ಲಾ ನಿರ್ದೇಶಕ ಚಂದ್ರಶೇಖರ್‌.ಜೆ ಮಾತನಾಡಿ, ನೋವಿನ ಕುಟುಂಬಗಳನ್ನು ಅರ್ಥೈಸಿ ದುಶ cಟಕ್ಕೆ ಒಳಗಾದವರನ್ನು ಮನವೊಲಿಸಿ ಕುಟುಂಬ ಪರಿವರ್ತನೆ ಮಾಡಬೇಕೆಂದು ತಿಳಿಸಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ವಾಸುದೇವ್‌, ಶಿಕ್ಷಣ ಇಲಾಖೆ ಸಂಯೋಜಕ ಅಂಜನ್‌ ಕುಮಾರ್‌, ತಾಲೂಕುಕುರಿ ಮಂಡಳಿ ಅಧ್ಯಕ್ಷ ವೆಂಕಟೇಶ್‌ಗೌಡ, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.