15 ದಿನದಲ್ಲಿ ಅರ್ಹರಿಗೆ ಉಚಿತ ನಿವೇಶನ   


Team Udayavani, Feb 26, 2019, 7:36 AM IST

15dinadalli.jpg

ಮಾಲೂರು: ಪಟ್ಟಣದ  ವಸತಿ ರಹಿತರಿಗೆ ಮನೆಗಳನ್ನು ನೀಡುವ ಉದ್ದೇಶದಿಂದ ಪಟ್ಟಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಸರ್ಕಾರ ಮಂಜೂರು ಮಾಡಿರುವ 16 ಎಕರೆ ಭೂಮಿ ಜೊತೆಗೆ ಪುರಸಭೆಯು ಈ ಹಿಂದೆ ಖರೀದಿ ಮಾಡಿರುವ ಭೂಮಿಯಲ್ಲಿ ಮುಂದಿನ 15 ದಿನಗಳ ಒಳಗಾಗಿ ನಿವೇಶನಗಳನ್ನು ಅಭಿವೃದ್ಧಿಪಡಿಸುವುದಾಗಿ ಶಾಸಕ ಕೆ.ವೈ.ನಂಜೇಗೌಡ ಭರವಸೆ ನೀಡಿದರು.

ಪಟ್ಟಣದ ದೊಡ್ಡಕಡತೂರು ಗ್ರಾಮದ ಸರ್ವೆ ನಂಬರ್‌ 94ರಲ್ಲಿ ಆಶ್ರಯ ಬಡಾವಣೆಗಾಗಿ ಸರ್ಕಾರ ಮಂಜೂರು ಮಾಡಿರುವ 6.20 ಎಕರೆ ಪ್ರದೇಶದ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದರು. ಮಾಲೂರು ಪಟ್ಟಣದ ಜತೆಗೆ ಕಳೆದ 16ವರ್ಷಗಳ ಹಿಂದೆ ನಿವೇಶನಗಳಿಗಾಗಿ ಅರ್ಜಿ ಸಲ್ಲಿಸಿ ಪ್ರಥಮ ಹಂತವಾಗಿ 5ಸಾವಿರ ಮತ್ತು 2ನೇ ಹಂತವಾಗಿ 35ಸಾವಿರ ರೂ,ಗಳನ್ನು ಪುರಸಭೆಗೆ ಪಾವತಿಸಿದ್ದರು.

ಮೊದಲ ಕಂತಿನಲ್ಲಿ ವಸೂಲಿ ಮಾಡಿದ್ದ ಹಣದ ಪೈಕಿ ಪಟ್ಟಣದ ಮಾರುತಿ ಬಡಾವಣೆಗೆ ಹೊಂದಿಕೊಂಡಿರುವ ಸ್ಥಳದಲ್ಲಿ ಮತ್ತು ರೈಲ್ವೆ ನಿಲ್ದಾಣದ ಶುಭಾಷ್‌ನಗರಕ್ಕೆ ಹೊಂದಿಕೊಂಡಿರುವ ಸ್ಥಳ ಗುರುತಿಸಿ ಒಟ್ಟು 15 ಎಕರೆ ಭೂಮಿ ಖರೀದಿಸಿ 647 ನಿವೇಶನ ಅಭಿವೃದ್ಧಿ ಪಡಿಸಿತ್ತು.

ಇದೇ ಭೂಮಿಯಲ್ಲಿ 2.5 ಎಕರೆ ಭೂಮಿಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೀಡಿದ್ದ ಪುರಸಭೆ, ಅರ್ಜಿ ಸಲ್ಲಿಸಿ ಹಣ ಪಾವತಿಸಿದ್ದ ಒಟ್ಟು 1320 ಮಂದಿಗೆ ನಿವೇಶನ ನೀಡಲು ವಿಫ‌ಲವಾಗಿದ್ದರು. ಹೀಗಾಗಿ ಯೋಜನೆ ನನೆಗುದಿಗೆ ಬಿದ್ದಿತ್ತು ಎಂದರು. ಈ ಕುರಿತು ಅನೇಕ ಹೋರಾಟಗಳು ನಡೆದು ಕೆಲವು ರಾಜಕೀಯ ಪಕ್ಷಗಳು ವಿಳಂಬವಾಗಿರುವ ಇದೇ ಯೋಜನೆಯನ್ನು ರಾಜಕೀಯ ದಾಳವನ್ನಾಗಿಸಿಕೊಂಡು ಹೋರಾಟ ರೂಪಿಸಿದ್ದವು ಎಂದು ತಿಳಿಸಿದರು. 

ಪಟ್ಟಣದ ಸಾರ್ವಜನಿಕರು ಕಳೆದ 16ವರ್ಷಗಳ ಹಿಂದೆ ಸಲ್ಲಿಸಿದ್ದ 5ಸಾವಿರ ಮತ್ತು ಎರಡನೇ ಹಂತದಲ್ಲಿ ಸಲ್ಲಿಸಿದ್ದ 35 ಸಾವಿರ ರೂ.,ಗಳನ್ನು ಪಾವತಿದಾರರಿಗೆ ವಾಪಸು ನೀಡುವ ಮೂಲಕ ಅರ್ಹರಿಗೆ ಉಚಿತವಾಗಿ ನಿವೇಶನ ನೀಡುವುದಾಗಿ ತಿಳಿಸಿದರು.

ಪ್ರಸ್ತುತ ರಾಜ್ಯ ಸರ್ಕಾರದಲ್ಲಿ ವಸತಿ ಖಾತೆ ಸಚಿವರಾಗಿ ನೆರೆ ಹೊಸಕೋಟೆ ಕ್ಷೇತ್ರದ ಶಾಸಕರಾಗಿರುವ ಎಂಟಿಬಿ ನಾಗರಾಜು ಅವರು ವಹಿಸಿಕೊಂಡಿರುವುದರಿಂದ ನಿವೇಶನದ ಜೊತೆಗೆ ಪ್ರತಿಯೊಬ್ಬ ಅರ್ಹರಿಗೆ ಉಚಿತವಾಗಿ ಮನೆ ನಿರ್ಮಾಣಕ್ಕೆ ಅನುಕೂಲ ಕಲ್ಪಿಸುವುದಾಗಿ ತಿಳಿಸಿದರು.

ಸ್ಥಳದಲ್ಲಿ ತಹಶೀಲ್ದಾರ್‌ ವಿ.ನಾಗರಾಜು ಸರ್ವೆ ಇಲಾಖೆ ಎಡಿಎಲ್‌ ಅರ್‌ ರಮೇಶ್‌, ಪುರಸಭಾ ಅಧ್ಯಕ್ಷ ಸಿ.ಪಿ.ನಾಗರಾಜು, ಉಪಾಧ್ಯಕ್ಷೆ ಗೀತಾರಮೇಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ವಿಜಯಲಕ್ಷ್ಮಿ,  ಸದಸ್ಯರಾದ ಸಿ.ಲಕ್ಷ್ಮಿನಾರಾಯಣ್‌, ಹನುಮಂತರೆಡ್ಡಿ, ಸಿ.ಪಿ.ವೆಂಕಟೇಶ್‌,  ಶ್ರೀವಳ್ಳಿ ರಮೇಶ್‌, ಗೀತಾವೆಂಕಟೇಶ್‌, ಪಚ್ಚಪ್ಪ, ಹುಂಗೇನಹಳ್ಳಿ ಗ್ರಾಪಂ ಅಧ್ಯಕ್ಷ ಲಿಂಗಾಪುರ ಕೃಷ್ಣಪ್ಪ,(ಕಿಟ್ಟಿ),ಮುಖಂಡರಾದ ಬೋರ್‌ರಮೇಶ್‌, ಅಶ್ವತ್ಥರೆಡ್ಡಿ ಇದ್ದರು.

16 ಎಕರೆ ಭೂಮಿ ಮಂಜೂರು: ಸಂಘಟನೆಗಳ ಹೋರಾಟದ ವೇಳೆ ಸ್ಥಳಕ್ಕೆ ಧಾವಿಸಿದ ಅಂದಿನ ಜಿಲ್ಲಾಧಿಕಾರಿ ಜಿ.ಸತ್ಯವತಿ ಅವರು ಪಟ್ಟಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಸರ್ಕಾರಿ ಭೂಮಿ ಗುರುತಿಸಿ ಆಶ್ರಯ ನಿವೇಶನ ವಿತರಿಸುವ ಕ್ರಮವಹಿಸುವುದಾಗಿ ಭರವಸೆ ನೀಡಿ ಪ್ರಥಮ ಹಂತವಾಗಿ ಮಾಲೂರು ಪಟ್ಟಣದ ಸರ್ವೆ ನಂಬರ್‌ 112ರಲ್ಲಿ 3 ಎಕರೆ ಭೂಮಿ ಗುರುತು ಮಾಡಿದ್ದರು.

ಪ್ರಕ್ರಿಯೆ ಮುಂದುವರೆದು ಪ್ರಸ್ತುತ ದೊಡ್ಡಕಡತೂರು ಗ್ರಾಮದ ಸರ್ವೆ ನಂಬರ್‌ 94ರಲ್ಲಿ 6.20 ಎಕರೆ, ಲಿಂಗಾಪುರದ ಸರ್ವೆ ನಂಬರ್‌ 49ರಲ್ಲಿ 5.20 ಎಕರೆ, ಚವ್ವೆನಹಳ್ಳಿ ಸರ್ವೆನಂಬರ್‌10ರಲ್ಲಿ 1ಎಕರೆ ಭೂಮಿ ಸೇರಿ 16 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ. ಭೂಮಿಯನ್ನು ನಿವೇಶನಗಳಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿ ಆರಂಭವಾಗಿದ್ದು ಮುಂದಿನ 15ದಿನಗಳಲ್ಲಿ ನಿವೇಶನಗಳನ್ನು ಅಭಿವೃದ್ಧಿ ಪಡಿಸಿ ಅರ್ಹರಿಗೆ ಉಚಿತವಾಗಿ ನೀಡುವುದಾಗಿ ಶಾಸಕ ನಂಜೇಗೌಡ ತಿಳಿಸಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.