ಕೋವಿಡ್‌ನಿಂದಾದ ಶೈಕ್ಷಣಿಕ ನಷ್ಟ ತುಂಬಿ; ಕೃಷ್ಣಮೂರ್ತಿ

ಮಕ್ಕಳನ್ನು ಸಮರ್ಥವಾಗಿ ಸಿದ್ಧಗೊಳಿಸುವಲ್ಲಿ ಹಿಂದಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ

Team Udayavani, Jun 24, 2022, 5:40 PM IST

ಕೋವಿಡ್‌ನಿಂದಾದ ಶೈಕ್ಷಣಿಕ ನಷ್ಟ ತುಂಬಿ; ಕೃಷ್ಣಮೂರ್ತಿ

ಕೋಲಾರ: ಕಲಿಕಾ ಹಾಳೆಗಳನ್ನು ಬಳಸುವ ಮೂಲಕ ಕೋವಿಡ್‌ ಸಂದರ್ಭದಲ್ಲಿ ಆದ ಶೈಕ್ಷಣಿಕ ನಷ್ಟವನ್ನು ತುಂಬಿ, ಪ್ರಾಥಮಿಕ ಶಾಲೆಗಳಲ್ಲಿ ಅನೇಕ ಕಡೆ ಹಿಂದಿ ಕಲಿಕೆಗೆ ಅವಕಾಶವಿಲ್ಲ, ಪ್ರೌಢಶಾಲೆಯಲ್ಲಿ ಹೆಚ್ಚಿನ ಮತುವರ್ಜಿ ವಹಿಸಿ ಕಲಿಕಾ ದೃಢೀಕರಣ ಮಾಡಿ ಎಂದು ಜಿಲ್ಲೆಯ ಹಿಂದಿ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಸಲಹೆ ನೀಡಿದರು.

ಕೆಜಿಎಫ್‌ ನಗರದ ಭಗವಾನ್‌ ಮಹಾವೀರ್‌ ಜೈನ್‌ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಆಶ್ರಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢಶಾಲೆಗಳ ಹಿಂದಿ ಶಿಕ್ಷಕರಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಲಿಕಾ ಚೇತರಿಕೆ ಹಾಳೆಗಳನ್ನು ಬಳಸುವಂತೆ ಸೂಚಿಸಿದ ಅವರು, ಮಕ್ಕಳ ಕಲಿಕಾ ಪ್ರಗತಿಯನ್ನು ವಿಶ್ಲೇಷಿಸಿ, ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುವಂತೆ ಮಾಡುವ ಹೊಣೆಯನ್ನು ನಿರ್ವಹಿಸಿ ಎಂದು ಕಿವಿಮಾತು ಹೇಳಿದರು.

ಸುಲಭಗೊಳಿಸಲು ಪ್ರಯತ್ನಿಸಿ: ಹಿಂದಿ ಭಾಷೆ ಕಲಿಕೆಯನ್ನು ಸುಲಭಗೊಳಿಸಲು ಪ್ರಯತ್ನಿಸಿ, ಮಕ್ಕಳಿಗೆ ಪ್ರೀತಿಯಿಂದ ಕಲಿಯುವ ವಾತಾವರಣ ಸೃಷ್ಟಿಸಿ, 8ನೇ ತರಗತಿಯಲ್ಲಿ ನೀವು ವರ್ಣಮಾಲೆಯಿಂದಲೇ ಕಲಿಕೆ ಆರಂಭಿಸಬೇಕಾದ ಕಾರಣ ನಿಮಗೆ ಒತ್ತಡ ಇರುತ್ತದೆ ಆದರೆ ಅದನ್ನು ಮೀರಿ ನೀವು ಮಕ್ಕಳ ಕಲಿಕೆ ದೃಢೀಕರಣ ಮಾಡಬೇಕು ಎಂದು ತಿಳಿಸಿದರು.

ಉತ್ತಮ ಅಂಕ ಗಳಿಕೆ ಸಾಧ್ಯ: ಜಿಲ್ಲಾ ಪರೀಕ್ಷಾ ನೋಡಲ್‌ ಅಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌, ಶಾಲೆಗಳಿಗೆ ಸಂಪನ್ಮೂಲ ವ್ಯಕ್ತಿಗಳನ್ನು ಕರೆಯಿಸಿ, ಶಿಕ್ಷಕರು ಮತ್ತು ಮಕ್ಕಳಲ್ಲಿ ಭಾಷೆ ಕುರಿತಂತೆ ಕೌಶಲ್ಯ ಬೆಳೆಸಲು ತಿಳಿಸಿ, ಶಿಕ್ಷಕರು ತರಗತಿಯಲ್ಲಿ ಹಿಂದಿ ಭಾಷೆಯನ್ನೇ ಮಾತನಾಡುವ ಮೂಲಕ ಭಾಷೆ ಕಲಿಸುವ ಕೆಲಸವಾಗಬೇಕು. ಆಗ ಮಾತ್ರ ಹಿಂದಿ ವಿಷಯದಲ್ಲೂ ಉತ್ತಮ ಅಂಕ ಗಳಿಕೆ ಸಾಧ್ಯ ಎಂದು ಹೇಳಿದರು.

ಶಿಕ್ಷಣ ಇಲಾಖೆ ಅತಿ ಹೆಚ್ಚು ಶ್ರಮ: ಮಹಾವೀರ್‌ ಜೈನ್‌ ಕಾಲೇಜಿನ ಪ್ರಾಂಶುಪಾಲೆ ರೇಖಾ, ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗುಣಾತ್ಮಕತೆ ಕಾಪಾಡುವಲ್ಲಿ ಶಿಕ್ಷಣ ಇಲಾಖೆ ಅತಿ ಹೆಚ್ಚು ಶ್ರಮವಹಿಸಿದೆ. ಡಿಡಿಪಿಐ ಕೃಷ್ಣಮೂರ್ತಿ, ಪರೀಕ್ಷಾ ನೋಡಲ್‌ ಅಧಿಕಾರಿ ನಾಗೇಂದ್ರಪ್ರಸಾದ್‌ ನೇತೃತ್ವದಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳ ಕಲಿಕೆಗೆ ಪೂರಕವಾಗಿ ಒದಗಿಸಿದ ಅಧ್ಯಾಯವಾರು ಪ್ರಶ್ನೋತ್ತರ ಮಾಲಿಕೆ, ನನ್ನನ್ನೊಮ್ಮೆ ಗಮನಿಸಿ ಮತ್ತಿತರ ಸಾಧನಗಳು ಹೆಚ್ಚು ಉಪಯುಕ್ತವಾಯಿತು ಎಂದು ಹೇಳಿದರು.

ಗುಣಾತ್ಮಕ ಫ‌ಲಿತಾಂಶ: ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣಪ್ಪ, ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಹಾಗೂ ಗುಣಾತ್ಮಕ ಫಲಿತಾಂಶ ಬಂದಿದೆ. ಇದಕ್ಕೆ ಕಾರಣರಾದ ಶಿಕ್ಷಕರನ್ನು ಅಭಿನಂದಿಸಿ, ಪ್ರಾಥಮಿಕ ಶಾಲಾ ಹಂತದಲ್ಲಿ ಅನೇಕ ಶಾಲೆಗಳಲ್ಲಿ ಹಿಂದಿ ಕಲಿಕೆಗೆ ಅವಕಾಶವಿಲ್ಲದ ಕಾರಣ, ಪ್ರೌಢಶಾಲೆಗಳಲ್ಲಿ ಕಲಿಕೆ ಸ್ವಲ್ಪ ಕಷ್ಟವಾದರೂ ಮೂರು ವರ್ಷಗಳಲ್ಲಿ ಮಕ್ಕಳನ್ನು ಸಮರ್ಥವಾಗಿ ಸಿದ್ಧಗೊಳಿಸುವಲ್ಲಿ ಹಿಂದಿ ಶಿಕ್ಷಕರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಗೌರವಾಧ್ಯಕ್ಷೆ ಎಂ.ಆರ್‌.ಜಯಂತಿ, ಕಾರ್ಯದರ್ಶಿ ಎಲ್‌.ನರಸಿಂಹಮೂರ್ತಿ, ಖಜಾಂಚಿ ವೇಣುಗೋಪಾಲ್‌, ಸೋಮಶೇಖರ್‌, ಅರಾಭಿಕೊತ್ತನೂರು ಪ್ರೌಢಶಾಲೆಯ ಶಿಕ್ಷಕಿ ಸಿದ್ದೇಶ್ವರಿ, ಜಿಲ್ಲೆಯ ಎಲ್ಲಾ ಹಿಂದಿ ಶಿಕ್ಷಕರು, ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.