ಬೈಕ್‌ ಸವಾರರಿಗೆ ಜಾಗೃತಿ ಮೂಡಿಸಲು ರಸ್ತೆಗಿಳಿದ ಗಣೇಶ!


Team Udayavani, Jan 25, 2020, 3:18 PM IST

kolar-tdy-1

ಕೋಲಾರ: ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲು ಶುಕ್ರವಾರ ಗಣೇಶನೇ ರಸ್ತೆಗಳಿದಿದ್ದ, ಬೈಕ್‌ ಸವಾರರಿಗೆ ಹೆಲ್ಮೆಟ್‌ ಧರಿಸುವಂತೆ ತಿಳಿ ಹೇಳಿ ಉಚಿತವಾಗಿ ವಿತರಣೆಯೂ ಮಾಡಿದ. ಹೌದು,

ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಬೆಳ್ಳೂರು ಗ್ರಾಮದ ಬಳಿಯ ಫ್ಲೈಓವರ್‌ ಹತ್ತಿರ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಡಿ, ಗಣೇಶನ ವೇಷತೊಟ್ಟಿದ್ದ ವ್ಯಕ್ತಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ತೊಡಿಸಿ, ಗುಲಾಬಿ ಹೂ ನೀಡಿ, ತಪ್ಪದೇ ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲನೆ ಮಾಡುವಂತೆ ಮನವಿ ಮಾಡಿದರು.

ನಿಯಮ ಪಾಲಿಸುತ್ತೇನೆಂದ ವೈದ್ಯೆ: ಇದೇ ವೇಳೆ ಮಹಿಳೆಯೊಬ್ಬರನ್ನು ತಡೆದು ಹೆಲ್ಮೆಟ್‌ ನೀಡಿ, ಹೂ ಕೊಟ್ಟು ಸಂಚಾರ ನಿಯಮ ಪಾಲನೆ ಮಾಡುವಂತೆ ಗಣೇಶ ವೇಷಧಾರಿ ಮನವಿ ಮಾಡಿದ್ದಕ್ಕೆ ಭಾವುಕರಾದ ಮಹಿಳಾ ಸವಾರೊಬ್ಬರು, ನಾನು ವೈದ್ಯೆಯಾಗಿ ಹೆಲ್ಮೆಟ್‌ ಹಾಕದಿರೋದು ನನಗೇ ಬೇಜಾರಾಗುತ್ತಿದೆ. ಇನ್ಮುಂದೆ ಕಡ್ಡಾಯವಾಗಿ ಹಾಕುತ್ತೇನೆ, ಇತರರೂ ಹೆಲ್ಮೆಟ್‌ ಧರಿಸಿ ಸಂಚಾರ ವಾಹನ ಸವಾರಿ ಮಾಡುವಂತೆ ಕಿವಿಮಾತು ಹೇಳಿದ್ದು ವಿಶೇಷವಾಗಿತ್ತು. ಇದೇವೇಳೆ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಅಡ್ವಿಕ್‌ ಹೈಟೆಕ್‌ ಲಿ.ನಿಂದ ಉಚಿತವಾಗಿ ವಾಹನ ಸವಾರರಿಗೆ ಹೆಲ್ಮೆಟ್‌ ವಿತರಿಸಲಾಯಿತು.

ಗುಲಾಬಿ ಜೊತೆ ಹೆಲ್ಮೆಟ್‌: ಗಣೇಶನ ವೇಷಧಾರಿಯನ್ನು ಕಂಡು ಕೆಲ ದ್ವಿಚಕ್ರ ವಾಹನ ಸವಾರರು ಅಚ್ಚರಿಗೊಂಡು, ಸಂಚಾರ ನಿಯಮ ಪಾಲಿಸುವ ಪ್ರತಿಜ್ಞೆಯನ್ನೂ ಮಾಡಿದರು. ಇದೇವೇಳೆ ಕಂಪನಿ ನೌಕರರು ಬೆಂಗಳೂರಿಗೆ ತೆರಳುವ ಕೆಲ ದ್ವಿಚಕ್ರ ವಾಹನ ಸವಾರರನ್ನು ತಡೆದು ನಿಲ್ಲಿಸಿ, ಹೆಲ್ಮೆಟ್‌ ಹಾಕಲು ಮಾಹಿತಿ ನೀಡಿ, ಗುಲಾಬಿ ಹೂ ಕೊಟ್ಟು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸುವಂತೆ ಮನವಿ ಮಾಡಿದರು.

10ಕ್ಕೂ ಹೆಚ್ಚು ಹೆಲ್ಮೆಟ್‌ ವಿತರಣೆ: ಕಾರ್ಯಕ್ರಮಕ್ಕೆ ವೇಮಗಲ್‌ ಪೊಲೀಸ್‌ ಠಾಣೆ ಎಎಸ್‌ಐ ವೆಂಕಟಪತಿ ಚಾಲನೆ ನೀಡಿದರು. ಸ್ಥಳೀಯ ನಾಯಕ ನವೀನ್‌ ಕುಮಾರ್‌ ಸಹ ಸಾಥ್‌ ನೀಡಿದರು. ರಸ್ತೆಯಲ್ಲಿ ಸಾಗುವ ವಾಹನಗಳನ್ನು ನಿಲ್ಲಿಸಿ, 10ಕ್ಕೂ ಹೆಚ್ಚು ಹೆಲ್ಮೆಟ್‌ಗಳನ್ನು ನೀಡಿ ರಸ್ತೆ ಸುರಕ್ಷತೆ ನಿಯಮಗಳನ್ನು ಪಾಲಿಸುವಂತೆ ಅವರೂ ಸಹ ವಾಹನ ಸವಾರರಿಗೆ ಮನವಿ ಮಾಡಿದರು. ಎಲ್ಲೆಡೆ ಯಮನ ವೇಷಧಾರಿಯಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸಿದ್ರೆ ಕೋಲಾರದಲ್ಲಿ ಗಣೇಶನ ವೇಷಧಾರಿಯಿಂದ ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.

ಈ ವೇಳೆ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿ ಕೆ.ಪಿ.ಮಾನಸ್‌, ನೌಕರರು ಮತ್ತು ವೇಮಗಲ್‌ ಪೊಲೀಸ್‌ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.