ಮೀನುಗಾರಿಕೆಗೆ ವಿಫುಲ ಅವಕಾಶ
Team Udayavani, Jul 27, 2020, 8:46 AM IST
ಕೋಲಾರ: ಜಿಲ್ಲೆಯ ಕೆರೆಗಳಿಗೆ ಕೆ.ಸಿ. ವ್ಯಾಲಿ ನೀರು ಭರ್ತಿಯಾಗುತ್ತಿರುವುದರಿಂದ ಮೀನುಗಾರಿಕೆಗೆ ವಿಫುಲ ಅವಕಾಶಗಳಿವೆ ಎಂದು ಇಲಾಖೆಯ ನಿರ್ದೇಶಕ ಆರ್. ರಾಮಕೃಷ್ಣ ತಿಳಿಸಿದರು.
ಜುಲೈ ಅಂತ್ಯಕ್ಕೆ ಸೇವೆಯಿಂದ ನಿವೃತ್ತರಾಗುತ್ತಿರುವ ಕಾರಣ, ನಗರದ ಮೀನುಗಾರಿಕೆ ಇಲಾಖೆ ಆವರಣದಲ್ಲಿ ಸಿಬ್ಬಂದಿ ಹಾಗೂ ಮೀನು ಕೃಷಿಕರು ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಕೃಷಿಯಲ್ಲಿ ಲಾಭಗಳಿಸಲು ಸೋತಿರುವ ರೈತರು, ಒಳನಾಡು ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡು ಜೀವನೋಪಾಯ ಕಂಡುಕೊಳ್ಳಬಹುದಾಗಿದೆ. ಗ್ರಾಮೀಣ ನಿರುದ್ಯೋಗಿ ಗಳು, ರೈತರು ಮೀನುಗಾರಿಕೆ ಇಲಾಖೆಯ ಮಾರ್ಗ ದರ್ಶನ ಹಾಗೂ ಸೌಲಭ್ಯ ಪಡೆದು, ಮೀನು ಸಾಕಾಣಿಕೆ ಯಲ್ಲಿ ತೊಡಗಿಸಿಕೊಂಡು ಆರ್ಥಿಕ ವಾಗಿ ಸಬಲರಾಗುವಂತೆ ಸಲಹೆ ನೀಡಿದರು. ಜಿಲ್ಲೆಯಲ್ಲಿ ಇಲಾಖೆಯಿಂದ ಮೀನುಮರಿ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬೇತಮಂಗಲ ಹಾಗೂ ಮಾರ್ಕಂ ಡಯ್ಯ ಜಲಾಶಯದ ಮೀನುಮರಿ ಉತ್ಪಾದನಾ ಕೇಂದ್ರಗಳ ಅಭಿವೃದ್ಧಿ ಸೇರಿ ಜಿಲ್ಲೆಯ ಮೀನುಗಾರಿಕೆ ಇಲಾಖೆಯ ಪ್ರಗತಿ ಕಾರ್ಯಗಳಿಗೆ 10 ಕೋಟಿ ರೂ. ಬಿಡು ಗಡೆ ಮಾಡಲಾಗಿದೆ ಎಂದು ನಿರ್ದೇಶಕ ತಿಳಿಸಿದರು.
ಬೆಂಗಳೂರು ವಿಭಾಗೀಯ ಮೀನುಗಾರರ ಸಹಕಾರ ಒಕ್ಕೂಟದ ಉಪಾಧ್ಯಕ್ಷರಾದ ಅ.ಮು.ಲಕ್ಷ್ಮೀನಾರಾಯಣ ಮಾತನಾಡಿದರು. ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಿಕ್ಕಣ್ಣ, ಸಹಾಯಕ ನಿರ್ದೇಶಕ ಡಿ. ಶಿವ ಶಂಕರ್, ವಿ.ಸಿ.ಪೆದ್ದಣ್ಣ, ಮುನೆಯ್ಯ, ನಾಗೇಂದ್ರಬಾಬು, ಲೋಕೇಶ್, ಕೋಲಾರ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ.ನಂಜಪ್ಪ, ನಿರ್ದೇಶಕ ಕೋ.ನಾ.ಮಂಜು ನಾಥ್, ಇಲಾಖೆಯ ನೌಕರರಾದ ವಿಜಯಲಕ್ಷ್ಮೀ, ಆರ್. ಸುದೀಪ್, ಸಾರಥಿ, ಶಂಕರಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ