ಪದವಿ ಕಾಲೇಜು ವಿದ್ಯಾರ್ಥಿನಿ ಈಗ ಪುರಸಭೆ ಸದಸ್ಯೆ
ಜನಸೇವೆ ಜೊತೆಗೆ ವಕೀಲರಾಗುವ ಬಯಕೆ
Team Udayavani, Jun 1, 2019, 10:49 AM IST
ಮಾಲೂರು ವಾರ್ಡ್ ಸಂಖ್ಯೆ 27ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಯ ಸಾಧಿಸಿದ ಬಿ.ಎ.ವಿದ್ಯಾರ್ಥಿನಿ ಸುಮಿತ್ರಾ ಅವರನ್ನು ಮುಖಂಡರು ಅಭಿನಂದಿಸಿದರು.
ಮಾಲೂರು: ಪುರಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ವಿದ್ಯಾಭ್ಯಾಸದ ದಿನಗಳಲ್ಲಿಯೇ 19ರ ಕಾಲೇಜು ಪೋರಿಯೊಬ್ಬಳು ರಾಜಕೀಯಕ್ಕೆ ಇಳಿದು ಅಚ್ಚರಿ ಮೂಡಿಸಿದ್ದಾಳೆ.
ಪಟ್ಟಣದ ವಾರ್ಡ್ ಸಂಖ್ಯೆ 27ರ ಸಾಮಾನ್ಯ ಮಹಿಳಾ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು, ಜಯ ಸಾಧಿಸಿರುವ ಪಿ.ಸುಮಿತ್ರಾ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿ. ಕಳೆದ ಅವಧಿಯಲ್ಲಿ ತನ್ನ ತಂದೆ ಪಚ್ಚಪ್ಪ ಇದೇ ವಾರ್ಡ್ ನಿಂದ ಜೆಡಿಎಸ್ ಸದಸ್ಯರಾಗಿದ್ದರು. ಈ ಬಾರಿ ಮೀಸಲಾತಿ ಬದಲಾವಣೆಯಿಂದ ತಂದೆಯ ಶಿಫಾ ರಸ್ಸಿನಿಂದ ಸಿಕ್ಕ ಅವಕಾಶ ಬಳಸಿಕೊಂಡ ಸುಮಿತ್ರಾ 393 ಮತ ಪಡೆದು ಗೆಲುವು ಸಾಧಿಸಿದ್ದಾರೆ.
ವಕೀಲರಾಗುವ ಆಸೆ: ಈ ವೇಳೆಯಲ್ಲಿ ಉದಯವಾಣಿಯೊಂದಿಗೆ ಮಾತನಾಡಿದ ಪಿ.ಸುಮಿತ್ರಾ, ರಾಜಕಾರಣಕ್ಕೆ ಬರುವ ಬಗ್ಗೆ ಕನಸು ಮನಸ್ಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಪದವಿಯ ನಂತರ ಕಾನೂನು ಪದವಿಯನ್ನು ಪಡೆದು ವಕೀಲಿ ವೃತ್ತಿಯನ್ನು ಆರಂಭಿಸುವ ಮಹತ್ವದ ಕನಸ್ಸು ಹೊಂದಿದ್ದೇನೆ. ಕಾಲೇಜಿನಿಂದ ಮನೆಗೆ ಬರುವ ವೇಳೆಗೆ ತಂದೆಯವರ ಮಾತಿಗೆ ಮರು ಮಾತನಾಡದೆ ಬಿಜೆಪಿ ಬಿ ಫಾರಂನೊಂದಿಗೆ ಚುನಾವಣೆಗೆ ಸ್ಪರ್ಧಿಸಿದೆ ಎಂದು ಹೇಳಿದರು.
ಕಳೆದ ಐದು ವರ್ಷಗಳಲ್ಲಿ ತಂದೆಯವರು ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳಿಂದ ಪ್ರಭಾವಿತರಾದ ಇಂದಿರಾ ನಗರದ ವಾಸಿಗಳು ತಮ್ಮ ಮೇಲೆ ವಿಶ್ವಾಸವಿಟ್ಟು ಚುನಾವಣೆಯಲ್ಲಿ ಅಧಿಕ ಮತಗಳನ್ನು ನೀಡಿ ಗೆಲ್ಲಿಸಿದ್ದಾರೆ. ಅವರ ಅಶೋತ್ತರಗಳಿಗೆ ಚ್ಯುತಿಯಾಗದಂತೆ ಅಭಿವೃದ್ಧಿ ಮಾಡುತ್ತೇನೆ. ಜನಸೇವೆಗೆ ಸಿಕ್ಕ ಅವಕಾಶ ಬಳಕೆ ಮಾಡಿಕೊಳ್ಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಪುರಸಭಾ ಸಾಮಾನ್ಯ ಸಭೆಗಳಲ್ಲಿ ಮಹಿಳಾ ಸದಸ್ಯರು ಮಾತನಾಡುವುದಿಲ್ಲ ಎಂಬ ಮಾತಿದೆ. ಈ ಬಗ್ಗೆ ಸುಮಿತ್ರಾ ಅಭಿಪ್ರಾಯ ಸಂಗ್ರಹಿಸಿದಾಗ, ಮುಂದಿನ ಸಭೆಗಳಲ್ಲಿ ಗಮನಿಸಿ ಸಭೆಗಳಲ್ಲಿ ಗಂಭೀರವಾಗಿ ಚರ್ಚಿಸಿ ನನ್ನ ಜನತೆಗೆ ಬೇಕಾಗಿರುವ ಸೌಲಭ್ಯ ಪಡೆಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆಯಲ್ಲಿ ಮಾಜಿ ಸದಸ್ಯ ಪಚ್ಚಪ್ಪ ಮಾತನಾಡಿ, ಕ್ಷೇತ್ರದ ಜನರು ಮತ್ತು ಮುಖಂಡರ ಒತ್ತಾಯದ ಮೇರೆಗೆ ಕಿರಿಯ ಪುತ್ರಿ ಸುಮಿತ್ರಾ ಅವರನ್ನು ಕಣಕ್ಕೆ ಇಳಿಸಿದ್ದೆ. ಕಾಲೇಜು ವಿದ್ಯಾರ್ಥಿನಿಯಾದ್ರೂ ಜನರು ಹೆಚ್ಚಿನ ಮತ ನೀಡಿ ಗೆಲ್ಲಿಸಿದ್ದಾರೆ ಎಂದರು.
ಇದೇ ರೀತಿಯಲ್ಲಿ 2003 ಪುರಸಭಾ ಚುನಾವಣೆಯಲ್ಲಿ ವಾರ್ಡ್ 4ರಿಂದ ಕೋಮಲಾ ಎಂಬ ಟಿಸಿಎಚ್ ವಿದ್ಯಾರ್ಥಿನಿಯನ್ನು ಗೆಲ್ಲಿಸಿದ್ದು, ಐದು ವರ್ಷಗಳ ಅಡಳಿತದ ನಂತರ ಕೋಮಲಾ ಅವರ ಪ್ರಸ್ತುತ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು