ಗ್ರಾಪಂ ಚುನಾವಣೆ ಸರ್ಕಾರ ಅಂತ್ಯಕ್ಕೆ ದಿಕ್ಸೂಚಿ
Team Udayavani, Dec 13, 2020, 7:22 PM IST
ಬಂಗಾರಪೇಟೆ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತಕ್ಕೆ ಅಂತ್ಯ ಹಾಡಲು ಗ್ರಾಪಂ ಚುನಾವಣೆ ದಿಕ್ಸೂಚಿಯಾಗಿದ್ದು,ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಹೆಚ್ಚಿನ ಗ್ರಾಪಂಗಳು ಕಾಂಗ್ರೆಸ್ ವಶವಾಗುವುದು ಖಚಿತಎಂದು ಬೂದಿಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ವಿ.ನಾಗರಾಜ್ ಭವಿಷ್ಯ ನುಡಿದರು.
ತಾಲೂಕಿನ ಬೂದಿಕೋಟೆ ಬ್ಲಾಕ್ ವ್ಯಾಪ್ತಿಗೆ ಬರುವ 16 ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿಗರನ್ನು ಕಣಕ್ಕಿಳಿಸಿ ಬಳಿಕ ಮಾತನಾಡಿದ ಅವರು,ಬಿಜೆಪಿ ಸರ್ಕಾರದ ಮೇಲೆ ಯುವಕರು ಹೆಚ್ಚಿನ ಒಲವನ್ನಿಟ್ಟು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಅವರ ಕೈಗೆ ನೀಡಿದರು. ಆದರೆ ಜನರ ನಿರೀಕ್ಷೆಯಂತೆ ಕೆಲಸ ಮಾಡದೆ ಬದಲಿಗೆ ಜನವಿರೋಧಿ ಸರ್ಕಾರಗಳೆಂದು ಗುರುತಿಸಿಕೊಂಡಿದೆ ಎಂದು ದೂರಿದರು.
ಇತ್ತೀಚಿಗೆ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿ ರೈತರಿಂದ ಹಾಗೂ ಜನರಿಂದ ಮತ್ತಷ್ಟು ದೂರಉಳಿಯುವಂತಾಗಿದೆ. ಇದರಿಂದ ಯುವಕರು ಬಿಜೆಪಿ ಮೇಲಿನ ನಂಬಿಕೆ ಕಳೆದುಕೊಂಡಿದೆ. ಕ್ಷೇತ್ರದಲ್ಲಿ ಶಾಸಕ ಎಸ್. ಎನ್.ನಾರಾಯಣಸ್ವಾಮಿ ಜಿಲ್ಲೆಯಲ್ಲೇ ಮಾದರಿಯಾಗುವಂತಹ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಂಡು ಗಮನ ಸಳೆದಿರುವುದು ಕಾಂಗ್ರೆಸ್ ಪಕ್ಷಕ್ಕೆ ವರವಾಗಿದೆ ಎಂದರು.
ತಾಲೂಕಿನ ಬೂದಿಕೋಟೆ ಬ್ಲಾಕ್ ವ್ಯಾಪ್ತಿಯ16ಗ್ರಾಪಂಗಳಲ್ಲಿ16ರಲ್ಲಿಯೂ ಕಾಂಗ್ರೆಸ್ ಬೆಂಬಲಿಗರೇ ಆಯ್ಕೆಯಾಗಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆಂದರು.ಕೆ.ವಿ.ನಾಗರಾಜ್ತಮ್ಮ ಬೆಂಬಲಿಗರೊಂದಿಗೆ ಬಂದುನಾಮಪತ್ರ ಸಲ್ಲಿಸಿದರು. ಚುನಾವಣಾಧಿಕಾರಿ ಮಂಜುನಾಥ, ಆರ್. ಚಲಪತಿ,ಎಪಿಎಂಸಿ ನಿರ್ದೇಶಕಕೊಂಡಪ್ಪ ನಾಯಕ, ವೆಂಕಟೇಶಪ್ಪ, ಬಡ್ಡೇಗೌಡ, ಕೃಷ್ಣೇಗೌಡ, ಉಜಾಲ ಶಂಕರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು