ಕನಿಷ್ಠ ವೇತನ ನೀಡದಿದ್ದರೆ ಗ್ರಾಪಂ ಕೆಲಸ ಬಹಿಷ್ಕಾರ


Team Udayavani, Sep 5, 2017, 5:13 PM IST

kol-2.jpg

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ನೌಕರರಿಗೆ ಸರ್ಕಾರದ ಆದೇಶದಂತೆ ಕನಿಷ್ಠ ವೇತನ ನೀಡುವಂತೆ ಹಾಗು ನೌಕರರ ಬಡ್ತಿ ನೀಡಲು ಪಿಯುಸಿ ಬದಲು ಎಸ್ಸೆಸ್ಸೆಲ್ಸಿ ಪರಿಗಣಿಸುವಂತೆ ಒತ್ತಾಯಿಸಿ ಜಿಲ್ಲೆಯ ಗ್ರಾಪಂ ನೌಕರರು, ರಾಜ್ಯ ಗ್ರಾಪಂ ನೌಕರರ ಸಂಘದ (ಸಿಐಟಿಯು) ನೇತೃತ್ವದಲ್ಲಿ ನೂರಾರು ಜಿಪಂ ಚಲೋ ನಡೆಸಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಜಮಾಯಿಸಿದ ಗ್ರಾಪಂ ನೌಕರರು ನಗರದ ಮುಖ್ಯ ಬೀದಿಗಳಲ್ಲಿ ಬೃಹತ್‌ ಪ್ರತಿಭಟನಾ ರ್ಯಾಲಿ ಮೂಲಕ ನಗರದ ಹೊರ ವಲಯದ ಅಣಕನೂರು ಸಮೀಪ ಇರುವ ಜಿಲ್ಲಾಡಳಿತ ಭವನದವರೆಗೂ ಕಾಲ್ನಡಿಗೆ ಮೂಲಕ ಆಗಮಿಸಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಘೋಷಣೆ ಕೂಗಿದರು. ಗ್ರಾಪಂ ನೌಕರರಿಗೆ ಕನಿಷ್ಠ ವೇತನ ಕೊಡದಿದ್ದರೆ ಕೆಲಸ, ಕಾರ್ಯಕ್ಕೆ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದರು.

ಸಿಎಂ ಆದೇಶ ಪಾಲಿಸಿ: ಗ್ರಾಪಂ ನೌಕರರಿಗೆ ಕನಿಷ್ಠ ವೇತನ ನೀಡುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ
ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರ ಹಾಗೂ ಇಲಾಖೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಸೂಚಿಸಿದ್ದಾರೆ.ಆದರೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು ಮುಖ್ಯಮಂತ್ರಿಗಳ ಆದೇಶವನ್ನು ಜಾರಿಗೆ ತರಲು ಮೀನಮೇಷ ಎಣಿಸುತ್ತಿದ್ದಾರೆಂದು ಪ್ರತಿಭಟನಾನಿರತ ಗ್ರಾಪಂ ನೌಕರರು ಕಿಡಿಕಾರಿದರು.

ವೇತನ ಬಾಕಿ: ಕನಿಷ್ಠ ಕೂಲಿ ಕಾಯ್ದೆ ಅನ್ವಯ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಸ್ವತ್ಛತೆಯಲ್ಲಿ ತೊಡಗಿರುವ ನೌಕರರಿಗೆ 13,600 ರೂ, ಗುಮಾಸ್ತ, ಜವಾನರಿಗೆ ಕನಿಷ್ಠ 10,000 ರೂ. ಜಲಗಾರರಿಗೆ 11,350 ರೂ. ಹಾಗೂ ಕರ ವಸೂಲಿಗಾರರಿಗೆ 13,350 ರೂ. ನೀಡಬೇಕೆಂದು ಸರ್ಕಾರ ಆದೇಶಿಸಿದೆ.ಆದರೆ, ಇದುವರೆಗೂ ಗ್ರಾಪಂಗಳು ತನ್ನ ನೌಕರರಿಗೆ ಕನಿಷ್ಠ ವೇತನ ಕೊಡದೇ ವಂಚಿಸುತ್ತಿವೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳ ಶಿಕ್ಷಣ, ಆರೋಗ್ಯ ಮತ್ತಿತರ ಚಟುವಟಿಕೆಗಳಿಗೆ ಗ್ರಾಪಂಗಳು ನೀಡುವ ಅರೆಬರೆ ವೇತನ ಸಾಲುತ್ತಿಲ್ಲ. ಜಿಲ್ಲೆಯ ಹಲವು ಗ್ರಾಪಂಗಳಲ್ಲಿ ನೌಕರರಿಗೆ ನಾಲ್ಕೈದು ತಿಂಗಳ ವೇತನ ಬಾಕಿ ಇದೆ ಎಂದು ದೂರಿದರು.

ಕನಿಷ್ಠ ಕೂಲಿ ಕೊಡದಿದ್ದರೆ ಕೆಲಸ ಬಹಿಷ್ಕಾರ: ಸರ್ಕಾರದ ಆದೇಶದಂತೆ ಸಾಮಾನ ಕೆಲಸಕ್ಕೆ ಸಮಾನ ವೇತನ ಕೊಡದಿದ್ದರೆ ಕೆಲಸ ಕಾರ್ಯಗಳನ್ನು ಬಹಿಷ್ಕಾರಿಸಿ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳುವುದಾಗಿ ಪ್ರತಿಭಟನಾನಿರತ ಗ್ರಾಪಂ ನೌಕರರು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು. ಸರ್ಕಾರ ಆದೇಶ ನೀಡಿದ್ದರೂ ಬಹಳಷ್ಟು ನೌಕರರಿಗೆ ಜಿಪಂ ಇನ್ನೂ ಅನುಮೋದನೆ ನೀಡಿಲ್ಲ. ಕೂಡಲೇ ನಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಸಭೆ ನಡೆಸಿ ಚರ್ಚೆ ನಡೆಸಬೇಕೆಂದು ಸಂಘದ ಮುಖಂಡರು ಜಿಲ್ಲಾ ಪಂಚಾಯಿತಿ ಅಧಿಕಾರಿಗಳನ್ನು ಆಗ್ರಹಿಸಿದರು.

ಉಪ ಕಾರ್ಯದರ್ಶಿಗೆ ಮನವಿ ಸಲ್ಲಿಕೆ: ಪ್ರತಿಭಟನಾನಿರತ ಸ್ಥಳಕ್ಕೆ ಆಗಮಿಸಿದ ಜಿಪಂ ಉಪ ಕಾರ್ಯದರ್ಶಿ ಡಾ.ಸಿ.ಸಿದ್ದರಾಮಯ್ಯಗೆ ಗ್ರಾಪಂ ನೌಕರರ ಸಂಘದ ಮುಖಂಡರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರ ನೌಕರರ ಸಂಘದ ಜಿಲ್ಲಾಧ್ಯಕ್ಷ ಗೋವಿಂದರೆಡ್ಡಿ, ಉಪಾಧ್ಯಕ್ಷ ಬಿ.ಎನ್‌. ಮುನಿಕೃಷ್ಣಪ್ಪ, ಕಾರ್ಯದರ್ಶಿ ಪಾಪಣ್ಣ, ಚಿಂತಾಮಣಿ ತಾಲೂಕು ಅಧ್ಯಕ್ಷ ಕೋನಪಲ್ಲಿ ನಾಗರಾಜ್‌, ಮುನಿವೆಂಕಟರೆಡ್ಡಿ, ಗೌರಿಬಿದನೂರಿನ ನರಸಿಂಹಮೂರ್ತಿ, ತಿಪ್ಪಣ್ಣ, ಶಿಡ್ಲಘಟ್ಟದ ಸುದರ್ಶನ್‌, ಬಾಗೇಪಲ್ಲಿ ತಾಲೂಕಿನ ವೆಂಕಟರಾಮಯ್ಯ, ಬಾಬುರೆಡ್ಡಿ ಸೇರಿದಂತೆ ಸೇರಿದಂತೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಜವಾನರು, ಗುಮಾಸ್ತರು, ಕರವಸೂಲಿಗಾರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.