ಮಳೆ ಬಂದರೆ ರಸ್ತೆಯಲ್ಲಿ ನರಕ ದರ್ಶನ
Team Udayavani, Oct 15, 2022, 3:03 PM IST
ಬಂಗಾರಪೇಟೆ: ಪಟ್ಟಣದಲ್ಲಿ ಪುರಸಭೆ ತೀವ್ರ ನಿರ್ಲಕ್ಷ್ಯತೆಯಿಂದ ಮಳೆ ನೀರು ಚರಂಡಿಗಳಲ್ಲಿ ಹರಿಯದೇ ರಸ್ತೆ ಮೇಲೆ ಹರಿಯುತ್ತಿರುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ ಯಾಗುತ್ತಿದ್ದರೂ ಕೇಳುವವರೇ ಇಲ್ಲ ದಂತಾಗಿದೆ.
ಪಟ್ಟಣದಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಯ ಮೇಲೆ ನೀರು ಹರಿಯುವ ಪರಿಸ್ಥಿತಿ ಎದುರಾಗಿದೆ. ಪುರಸಭೆ ವ್ಯಾಪ್ತಿಯಲ್ಲಿ 27 ವಾರ್ಡುಗಳಿದ್ದು, ಒಳಚರಂಡಿ ವ್ಯವಸ್ಥೆ ಸೂಕ್ತವಾಗಿಲ್ಲ. ಒಳಚರಂಡಿಯಿದ್ದರೂ ಹೂಳು ತುಂಬಿ ಹಾಳಾಗಿದೆ. ಇದರಿಂದ ಗುರುವಾರ ರಾತ್ರಿ ಸುರಿದ ಮಳೆಯಿಂದ ನೀರು ರಸ್ತೆಯ ಮೇಲೆ ಹರಿದು ಬಸ್ ನಿಲ್ದಾಣದ ಬಳಿ ಅಂಗಡಿ ಮಳಿಗೆಗಳಿಗೆ ನುಗ್ಗಿದೆ. ಪುರಸಭೆಯಿಂದ ಕನಿಷ್ಠ 2 ವರ್ಷಕ್ಕೂ ಚರಂಡಿಗಳಲ್ಲಿ ಹೂಳು ತೆಗೆಯುತ್ತಿಲ್ಲ ಇದರಿಂದ ಅವಾಂತರ ಸೃಷ್ಟಿಯಾಗಿದೆ.
ಪಟ್ಟಣದ ಬಹುತೇಕ ವಾರ್ಡ್ಗಳಲ್ಲಿ ರಸ್ತೆಗಳು ತೀವ್ರವಾಗಿ ಹದೆಗೆಟ್ಟಿವೆ. ಅಲ್ಲಲ್ಲಿ ಕಾಮಗಾರಿಗಳನ್ನು ಪ್ರಾರಂಭ ಮಾಡಿ ಅರ್ಧಕ್ಕೆ ನಿಂತಿವೆ. ಕೆಲವು ಕಡೆ ಮಳೇ ನೀರು ಸರಾಗವಾಗಿ ಹರಿದು ಹೋಗದೇ ರಸ್ತೆಯ ಮೇಲೆ ಮಿನಿ ಗುಂಡಿಗಳು ನಿರ್ಮಾಣವಾಗಿದೆ. ಚರಂಡಿ ನಿರ್ಮಾಣ ಮಾಡದೇ ಹಾಗೇ ಬಿಟ್ಟಿರುವ ಕಾರಣ ಸಾರ್ವಜನಿಕರ ಸಂಚಾರಕ್ಕೆ ತೊಡಕಾಗಿದೆ. ಪುರಸಭೆ ಆಡಳಿತ ಮಂಡಳಿ ಆಡಳಿತ ವೈಫಲ್ಯದಿಂದ ಕೂಡಿದ್ದು, ನಾಲ್ಕು ತಿಂಗಳಾದರೂ ಸಭೆ ಕೆರಯುತ್ತಿಲ್ಲ. ಪಟ್ಟಣದಲ್ಲಿ ಆಕಸ್ಮಿಕವಾಗಿ ಎದುರಾಗುವ ಸಮಸ್ಯೆಗೆ ಕ್ರಮವಹಿಸುತ್ತಿಲ್ಲ. ಹೀಗಾಗಿ ಪಟ್ಟಣದಲ್ಲಿ ಸಮಸ್ಯೆಗಳು ಹೆಚ್ಚಿವೆ ಎಂದು ಸಾರ್ವಜನಿಕರು ದೂರಿದ್ದಾರೆ.
ಪಟ್ಟಣದ ಪುರಸಭೆ ವ್ಯಾಪ್ತಿಯ ಬಸ್ ನಿಲ್ದಾಣದ ಕಾರೋನೇಷನ್ ರಸ್ತೆಯಲ್ಲಿ ಗುರುವಾರ ರಾತ್ರಿ ಸುರಿದ ಮಳೆ ಯಿಂದಾಗಿ ಚರಂಡಿಗಳಲ್ಲಿ ನೀರು ಹರಿದಿದ್ದು, ತುರ್ತು ಕ್ರಮ ಕೈಗೊಳ್ಳಲಾಗುವುದು. ಚರಂಡಿಗಳಲ್ಲಿ ಹೂಳು ತುಂಬಿರುವುದರಿಂದ ರಸ್ತೆ ಮೇಲೆ ಮಳೆ ನೀರು ಹರಿದಿದೆ. ಪುರಸಭೆ ಆಡಳಿತ ಗಮನಕ್ಕೆ ತಂದು ಚರಂಡಿಗಳಲ್ಲಿ ತುಂಬಿರುವ ಹೂಳನ್ನು ತೆಗೆಯಲಾಗುವುದು. – ಜಿ.ಎನ್.ಚಲಪತಿ, ಮುಖ್ಯಾಧಿಕಾರಿ, ಪುರಸಭೆ
ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಕಾರೋನೇಷನ್ ರಸ್ತೆಯಲ್ಲಿ ನೀರು ಹರಿಯದೇ ರಸ್ತೆ ಮೇಲೆ ಹರಿದು ಜನಸಾಮಾನ್ಯರಿಗೆ ತೊಂದರೆಯಾಗಿರುವುದು ನನ್ನ ಗಮನಕ್ಕೆ ಬಂದಿಲ್ಲ. ಈ ಕೂಡಲೇ ಅಧಿಕಾರಿ ಸಿಬ್ಬಂದಿಯನ್ನು ಈ ಸ್ಥಳಕ್ಕೆ ಕಳುಹಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು. – ಫರ್ಜಾನಾ ಸುಹೇಲ್, ಅಧ್ಯಕ್ಷರು, ಪುರಸಭೆ.
– ಎಂ.ಸಿ.ಮಂಜುನಾಥ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ