ಫ‌ಲಿತಾಂಶಕ್ಕೆ ಹೈ ತಡೆ, 28 ಸದಸ್ಯರು ಹಾಜರ್‌

ಕೋಲಾರ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ

Team Udayavani, Nov 2, 2020, 2:46 PM IST

ಫ‌ಲಿತಾಂಶಕ್ಕೆ ಹೈ ತಡೆ, 28 ಸದಸ್ಯರು ಹಾಜರ್‌

ಕೋಲಾರ: ಹೈಕೋರ್ಟ್‌ನಿಂದ ಫ‌ಲಿತಾಂಶಕ್ಕೆ ತಡೆ ಹಿನ್ನೆಲೆಯಲ್ಲಿ ಭಾನುವಾರ ಕೋಲಾರ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ಸುಸೂತ್ರವಾಗಿ ನಡೆಯಿತು. ಒಟ್ಟು 35 ಸದಸ್ಯರು, ಶಾಸಕ, ಸಂಸದ,ವಿಧಾನಪರಿಷತ್‌ ಸದಸ್ಯ ಸೇರಿ 38 ಸದಸ್ಯ ಬಲದ ನಗರಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಹತ್ತು ಮಂದಿ ಗೈರು ಹಾಜರಾಗಿದ್ದು, 28 ಸದಸ್ಯ ಬಲದೊಂದಿಗೆ ಚುನಾವಣಾ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್‌ ಕಡೆಯಿಂದ ಶ್ವೇತಾ ಶಬರೀಶ್‌, ಉಪಾಧ್ಯಕ್ಷ ಸ್ಥಾನಕ್ಕೆ ಪ್ರವೀಣ್‌ಗೌಡ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್‌ ಬಣದಿಂದ ಅಧ್ಯಕ್ಷ ಸ್ಥಾನಕ್ಕೆ ಅಜ್ರನಸ್ರಿನ್‌, ಉಪಾಧ್ಯಕ್ಷ ಸ್ಥಾನಕ್ಕೆ ಪಕ್ಷೇತರ ಮಂಜುನಾಥ್‌ ನಾಮಪತ್ರ ಸಲ್ಲಿಸಿದ್ದರು.

ಮ್ಯಾಜಿಕ್‌ ಸಂಖ್ಯೆ 15: ಚುನಾವಣೆಗೂ ಮುನ್ನ ಯಾರಿಗೂ ಬಹುಮತವಿರಲಿಲ್ಲ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಗೆಲ್ಲಲು ಒಟ್ಟು 38 ಸದಸ್ಯರ ಪೈಕಿಕನಿಷ್ಠ 20 ಸದಸ್ಯರ ಬೆಂಬಲ ಪಡೆಯುವ ಅಗತ್ಯವಿತ್ತು. ಆದರೆ, ಚುನಾವಣಾ ಪ್ರಕ್ರಿಯೆಗೆ ಹಾಜರಾದವರ ಸಂಖ್ಯೆ ಕೇವಲ 28 ಆಗಿದ್ದರಿಂದ ಗೆಲುವಿನ ಮ್ಯಾಜಿಕ್‌ ಸಂಖ್ಯೆ 15 ಕ್ಕೆ ಕುಸಿಯುವಂತಾಗಿತ್ತು.

ಚುನಾವಣೆಗೂ ಮುನ್ನ ಕಾಂಗ್ರೆಸ್‌ 12, ಜೆಡಿಎಸ್‌ 8, ಬಿಜೆಪಿ 3, ಎಸ್‌ಡಿಪಿಐ 4 ಮತ್ತು ಪಕ್ಷೇತರರು 8 ಮಂದಿ ಸದಸ್ಯ ಬಲ ಹೊಂದಿದ್ದರು. ಇವರೊಂದಿಗೆ ಶಾಸಕ ಕೆ.ಶ್ರೀನಿವಾಸಗೌಡ, ಸಂಸದ ಎಸ್‌. ಮುನಿಸ್ವಾಮಿ, ವಿಧಾನಪರಿಷತ್‌ ಸದಸ್ಯ ಗೋವಿಂದರಾಜು ಅವರಿಗೂ ಮತದಾನದ ಹಕ್ಕಿತ್ತು.

ಸಂಸದ ಗೈರು: ಚುನಾವಣಾ ಪ್ರಕ್ರಿಯೆಯಲ್ಲಿ ಕಾಂಗ್ರೆಸ್‌ 12 ಸದಸ್ಯರ ಪೈಕಿ 7 ಮಂದಿ ಹಾಜರಾಗಿ 5 ಮಂದಿ ಗೈರು ಹಾಜರಾಗಿದ್ದರು. ಜೆಡಿಎಸ್‌ನ 8 ಮಂದಿ ಹಾಜರಾತಿ ತೋರಿದ್ದರು. ಬಿಜೆಪಿಯ 3 ಸದಸ್ಯರ ಪೈಕಿ ಒಬ್ಬರು ಮತದಾನದಲ್ಲಿ ಪಾಲ್ಗೊಂಡಿದ್ದರು. ಶಾಸಕ ಕೆ.ಶ್ರೀನಿವಾಸಗೌಡ, ವಿಧಾನಪರಿಷತ್‌ ಸದಸ್ಯ ಗೋವಿಂದರಾಜು ಹಾಜರಾಗಿದ್ದರೆ, ಸಂಸದ ಎಸ್‌.ಮುನಿಸ್ವಾಮಿ ಗೈರು ಹಾಜರಾಗಿದ್ದರು. ಬಿಜೆಪಿಯ ಮೂವರು ಸದಸ್ಯರ ಪೈಕಿ ಹತ್ತನೇ ವಾರ್ಡ್‌ನ ರಂಗಮ್ಮ ಮಾತ್ರವೇ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಸಂಸದ ಎಸ್‌.ಮುನಿಸ್ವಾಮಿ ಎಸ್‌ಡಿಪಿಐ ಬೆಂಬಲಿಸುವ ಪಕ್ಷದ ಅಭ್ಯರ್ಥಿಗಳಿಗೆ ತಮ್ಮ ಪಕ್ಷ ಬೆಂಬಲ ನೀಡುವುದಿಲ್ಲವೆಂದು ಘೋಷಿಸಿದ್ದರು. ಇನ್ನಿಬ್ಬರು ಬಿಜೆಪಿ ಸದಸ್ಯರು ಚುನಾವಣೆ ಪ್ರಕ್ರಿಯೆಯಿಂದ ಹೊರಗಿದ್ದರು. ಎಸ್‌ಡಿಪಿಐ ನಾಲ್ಕು ಸದಸ್ಯ ಬಲವನ್ನು ಹೊಂದಿತ್ತಾದರೂ, ಇಲ್ಲೂ ಒಡಕುಂಟಾಗಿ ಕೇವಲ ಇಬ್ಬರು ಸದಸ್ಯರು ಮಾತ್ರವೇ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಚುನಾವಣಾ ಪ್ರಕ್ರಿಯೆಗೂ ಮುನ್ನ ಜೆಡಿಎಸ್‌ ಹೊರತುಪಡಿಸಿ ಬೇರಾವುದೇ ಪಕ್ಷವು ತನ್ನ ಸದಸ್ಯರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫ‌ಲವಾಗಿದ್ದು, ಕೋಲಾರ ನಗರಸಭೆ ಚುನಾವಣಾ ಹಾಜರಾತಿಯ ಮೂಲಕ ಬಹಿರಂಗವಾಯಿತು.

ಚುನಾವಣಾಧಿಕಾರಿಯಾಗಿ ಉಪ ವಿಭಾಗಾಧಿಕಾರಿ ಸೋಮಶೇಖರ್‌ ಕಾರ್ಯನಿರ್ವಹಿಸಿದ್ದು, ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಿರ್ವಹಿ ಸಲಾಗಿದ್ದು, ಫ‌ಲಿತಾಂಶವನ್ನು ಹೈಕೋರ್ಟ್‌ ಸೂಚನೆ ಮೇರೆಗೆ ತಡೆ ಹಿಡಿಯಲಾಗಿದೆ ಎಂದು ಘೋಷಿಸಿದರು.

ಪೊಲೀಸ್‌ ಬಂದೋಬಸ್ತ್: ಹೈಕೋರ್ಟ್‌ ಆದೇಶದ ಹಿನ್ನೆಲೆ ಫ‌ಲಿತಾಂಶಕ್ಕೆ ತಡೆ ಇರುವುದರ ನಡುವೆಯೂ ಚುನಾವಣೆ ನಡೆಸಲು ಅನುಮತಿ ಸಿಕ್ಕಿದ್ದರಿಂದಾಗಿ ಪೊಲೀಸರು ಬಿಗಿ ಬಂದೋಬಸ್ತ್ ನಡೆಸಿದರು. ಅಪರ ಎಸ್ಪಿ ಜಾಹ್ನವಿ ನೇತೃತ್ವದಲ್ಲಿ ಪೊಲೀಸರ ಸರ್ಪಗಾವಲು ಹಾಕಿದ್ದು, ನಗರಸಭಾ ಸದಸ್ಯರು, ಸಿಬ್ಬಂದಿ ಹೊರತುಪಡಿಸಿ ಯಾರನ್ನು ಒಳಗೆ ಬಿಡಲಿಲ್ಲ.

ಉಚ್ಚಾಟನೆ ಸೂಚನೆ  :  ಕಾಂಗ್ರೆಸ್‌ನ 31 ನೇ ವಾರ್ಡ್‌ನ ಅಪ್ಸರ್‌, 33 ನೇ ವಾರ್ಡ್‌ನ ನಾಜಿಯಾ ಕೋಂ ಬಾಬಾ ಜಾನ್‌, 34ನೇ ವಾರ್ಡ್‌ನ ಮುಬೀನ್‌ತಾಜ್‌ ಕೋಂ ಶಫಿ ಇವರು ವಿಪ್‌ ಉಲ್ಲಂಘಿಸಿ ಅನಧಿಕೃತವಾಗಿ ಗೈರು ಹಾಜರಾಗಿದ್ದರಿಂದ ಪಕ್ಷದಿಂದ ಉಚ್ಛಾಟನೆ ಮಾಡಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ ತಿಳಿಸಿದ್ದಾರೆ.

ಪ್ರಸಾದ್‌ ಬಾಬು ಗೈರು :  ಕಾಂಗ್ರೆಸ್‌ನ 26 ನೇ ವಾರ್ಡ್‌ನ ಸದಸ್ಯೆ ಭಾಗ್ಯಮ್ಮ ಮೀಸಲಾತಿ ನಿಗದಿ ವಿಚಾರವಾಗಿ ಆಕ್ಷೇಪ ವ್ಯಕ್ತಪಡಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಮತ್ತೂಬ್ಬ ಸದಸ್ಯ ಪ್ರಸಾದ್‌ ಬಾಬು ಆಸ್ಪತ್ರೆಗೆ ದಾಖಲಾಗಿರುವುದರಿಂದ ಚುನಾವಣೆಗೆ ಗೈರು ಹಾಜರಾಗಿದ್ದರು.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.