ಹೆದ್ದಾರಿ ರಸ್ತೆ ವಿಭಜಕ ನಾಶ: ಅಧಿಕಾರಿಗಳ ಮೌನ


Team Udayavani, Jan 26, 2022, 2:41 PM IST

ಹೆದ್ದಾರಿ ರಸ್ತೆ ವಿಭಜಕ ನಾಶ: ಅಧಿಕಾರಿಗಳ ಮೌನ

ಮುಳಬಾಗಿಲು: ಕೇಂದ್ರ ಸರ್ಕಾರ ಕೋಟ್ಯಂತರ ರೂ. ವೆಚ್ಚದಲ್ಲಿ ಜನರ ಅನುಕೂಲಕ್ಕಾಗಿ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗ್ರಾಮಸ್ಥರು ತಮ್ಮ ಗ್ರಾಮಗಳ ಗೇಟ್‌ಗಳಲ್ಲಿ ರಸ್ತೆ ದಾಟಲು ಅಕ್ರಮವಾಗಿ ಕೊರೆದು ಸೃಷ್ಟಿಸಿಕೊಂಡಿರುವ ರಸ್ತೆ ವಿಭಜಕಗಳು ಅಪಘಾತ ಸೃಷ್ಟಿಸುವ ರಸ್ತೆಗಳಾಗಿ ಪರಿವರ್ತನೆಯಾಗುತ್ತಿವೆ.

ಶುಲ್ಕ ವಸೂಲಿ: ತಾಲೂಕಿನಲ್ಲಿ ಹಾದು ಹೋಗಿರುವ ಹೆದ್ದಾರಿಯನ್ನು ಕೇಂದ್ರ ಸರ್ಕಾರ ಮೇಲ್ದಜೇಗೇರಿಸಲು ಉದ್ದೇಶಿಸಿ ಹೆದ್ದಾರಿ ಅಭಿವೃದ್ಧಿ ಅಧಿಕಾರಿಗಳು ಚುತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲು ಕ್ರಮ ಕೈಗೊಂಡಿದ್ದರು. ಅದರಂತೆ 2013ರಲ್ಲಿ ಲ್ಯಾಂಕೋಕಂಪನಿ ಹೊಸಕೋಟೆಯಿಂದ ಮುಳಬಾಗಿಲು ನಗರದ ಮದರಸಾವರೆಗೂ ನಿರ್ಮಿಸಿ ಹೆದ್ದಾರಿ ಅಭಿವೃದ್ಧಿಗಾಗಿ ವ್ಯಯವಾಗಿರುವ ಹಣವನ್ನು ವಸೂಲಿ ಮಾಡಲು ದೇವರಾಯಸಮುದ್ರ ಬಳಿ ಟೋಲ್‌ ನಿರ್ಮಿಸಿದ್ದಾರೆ.

ಅಂತೆಯೇ ಎರಡನೇ ಹಂತವಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಭಾರತಸರ್ಕಾರದ ಅನುಸಾರ ಜೆಎಸ್‌ಆರ್‌ ಟೋಲ್‌ವೇಸ್‌  ಪ್ರೈವೇಟ್‌ ಲಿಮಿಟೆಡ್‌ ಕಂಪನಿ ರಾ.ಹೆ.75ರ ಮುಳ ಬಾಗಿಲು ನಗರದ ಮದರಸಾದಿಂದ ಕರ್ನಾಟಕ ಗಡಿಭಾಗದ ವರೆಗೆ 2015ರಲ್ಲಿ ಚುತುಷ್ಪಥ ರಸ್ತೆ ನಿರ್ಮಿಸಿದ್ದು ಹೆದ್ದಾರಿ ಬಳಕೆಗಾಗಿ ಬಳಕೆದಾರ ಶುಲ್ಕಸಂಗ್ರಹಿಸಲು ಗಡಿ ರೇಖೆಯಿಂದ 500 ಮೀ ದೂರದ ಎನ್‌. ಯಲುವಹಳ್ಳಿ ಬಳಿ ಟೋಲ್‌ ಪ್ಲಾಜಾ ನಿರ್ಮಿಸಿ ಶುಲ್ಕ ವಸೂಲಿ ಮಾಡುತ್ತಿದೆ.

ಲ್ಯಾಂಕೋ ಹೊಸಕೋಟೆ ಕಂಪನಿ ಮುಳಬಾಗಿಲು ತಾಲೂಕಿನಲ್ಲಿ ತಂಬಿಹಳ್ಳಿ ಪಾಲಾರ್‌ ಸೇತುವೆಯಿಂದ ನಗರದ ಮದರಸಾವರೆಗೂ ಚತುಷ್ಪಥ ರಸ್ತೆಯುಳ್ಳಹೆದ್ದಾರಿ ನಿರ್ಮಿಸಿದೆ. ಅಂತೆಯೇ ವಿವಿಧ ಗ್ರಾಮಗಳಗೇಟ್‌ಗಳ ಬಳಿ ಗ್ರಾಮಸ್ಥರು ಒಂದು ಕಡೆಯಿಂದ ಮತ್ತೂಂದು ಕಡೆ ರಸ್ತೆ ದಾಟಲು ರಸ್ತೆ ವಿಭಜಕನಿರ್ಮಿಸಲಾಗಿದೆ. ಆದರೆ ಅದರ ನಡುವೆಯೂ ನಲ್ಲೂರು ಕ್ರಾಸ್‌, ಕಮ್ಮದಟ್ಟಿ, ಕಾಮನೂರು, ಪಂಚವಟಿಫಾರ್ಮ್, ಕುರುಬರಹಳ್ಳಿ ಗೇಟ್‌, ಜಮ್ಮನಹಳ್ಳಿ ಗೇಟ್‌ಬಳಿ ಎರಡು ಕಡೆ, ದೊಡ್ಡಮಾದೇನಹಳ್ಳಿ ಗೇಟ್‌ಗಳಲ್ಲಿಜನ ವಾಹನಗಳಲ್ಲಿ ರಸ್ತೆ ದಾಟಲು ಮಧ್ಯದಲ್ಲಿನ ರಸ್ತೆ ವಿಭಜಕವನ್ನು ಅಕ್ರಮವಾಗಿ ಕೊರೆದು ದಾರಿ ಮಾಡಿಕೊಂಡಿದ್ದಾರೆ.

ಅಕ್ರಮವಾಗಿ ಕೊರೆದ ಅಧಿಕಾರಿಗಳು: ಜೆಎಸ್‌ಆರ್‌ ಕಂಪನಿ ಮದರಸಾದಿಂದ ಕರ್ನಾಟಕ ಗಡಿಭಾಗದವರೆಗೆ ಸುಮಾರು 15 ಕಿ.ಮೀ. ರಾಷ್ಟ್ರೀಯಹೆದ್ದಾರಿ 75ರ ಚತುಷ್ಪಥ ರಸ್ತೆ ನಿರ್ಮಿಸಿದೆ. ಆದರೆಸೀಗೇನಹಳ್ಳಿ, ಅಲಾಲಸಂದ್ರ, ಎನ್‌.ವೆಂಕಟಾಪುರ,ಹಳೇಕುಪ್ಪ ಸೇರಿ ನಂಗಲಿಯಿಂದ ಮುದಿಗೆರೆ ಕ್ರಾಸ್‌ ವರೆಗೆ ವಿವಿಧ ಗ್ರಾಮಗಳ ಜನರು ರಸ್ತೆ ವಿಭಜಕವನ್ನು ಅಕ್ರಮವಾಗಿ ಕೊರೆದು ರಸ್ತೆ ದಾಟುತ್ತಿದ್ದಾರೆ.

ಸಿಮೆಂಟ್‌ ದಿಮ್ಮಿಗಳಿಂದ ಮುಚ್ಚಿದ್ದರೂ ಕೊರೆತ :  ಹೆದ್ದಾರಿಯಲ್ಲಿ 24 ಗಂಟೆ ವಾಹನ ಶರವೇಗದಿಂದ ಸಂಚರಿಸುತ್ತಿರುತ್ತವೆ. ಆದರೆ, ಹಳ್ಳಿಗಳ ಜನ ಹೆದ್ದಾರಿ ಯಲ್ಲಿ ವಿಭಜಕದ ಮೂಲಕ ಹಠಾತ್‌ ಆಗಿ ಒಂದು ಕಡೆಯಿಂದ ಮತ್ತೂಂದು ಕಡೆ ವಾಹನ ನುಗ್ಗಿಸಿದಾಗಎದುರುಗಡೆಯಿಂದ ವೇಗವಾಗಿ ಬರುವ ವಾಹನ ಒಂದಕ್ಕೊಂದು ಡಿಕ್ಕಿ ಹೊಡೆಯುತ್ತಿವೆ. ಸಾಕಷ್ಟು ಜನಮೃತಪಟ್ಟು ಮತ್ತೂ ಕೆಲವರು ಗಾಯಗೊಂಡಿರುವ ಘಟನೆಗಳು ನಡೆದಿವೆ. ಹೆಚ್ಚು ಅಪಘಾತಗಳುಉಂಟಾಗುತ್ತಿದ್ದ ದೊಡ್ಡ ಮಾದೇನಹಳ್ಳಿ, ನಲ್ಲೂರು ಕ್ರಾಸ್‌, ಕಮದಟ್ಟಿ-ಕಾಮನೂರು ಕಡೆ ಈ ಹಿಂದೆ ಕೊರೆಯಲಾಗಿದ್ದ ರಸ್ತೆ ವಿಭಜಕಗಳನ್ನು ಕಬ್ಬಿಣದ ಬ್ಯಾರಿಕೇಡ್‌ ಮತ್ತು ಸಿಮೆಂಟ್‌ ದಿಮ್ಮಿಗಳಿಂದ ಮುಚ್ಚಲಾಗಿದ್ದರೂ ಜನ ಅದರ ಪಕ್ಕದಲ್ಲಿಯೇ ಕೊರೆದು ಬೈಕ್‌ಗಳಲ್ಲಿ ಸಂಚರಿಸ್ತುದ್ದಾರೆ. ಇದರಿಂದಾಗಿ ಅಪಘಾತಗಳು ಸಂಭವಿಸುತ್ತಿವೆ.

ತಾಲೂಕಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ವಿವಿಧಗೇಟ್‌ಗಳಲ್ಲಿ ಜನ ಅಕ್ರಮವಾಗಿ ರಸ್ತೆ ವಿಭಜಕ ಕೊರೆದು ದಾರಿ ಮಾಡಿಕೊಂಡಿದ್ದಾರೆ.ಈ ದಾರಿಗಳ ಮೂಲಕ ಸಂಚರಿಸುವಾಗವೇಗವಾಗಿ ಬರುವ ವಾಹನಗಳು ಅಪಘಾತ ಕ್ಕೀಡಾಗುತ್ತಿವೆ. ಹೀಗಾಗಿ ಹೆದ್ದಾರಿ ಅಧಿಕಾರಿ ಗಳು ಕೂಡಲೇ ಕ್ರಮ ಕೈಗೊಳ್ಳಬೇಕು. -ರಾಮಚಂದ್ರ, ಟ್ಯಾಕ್ಸಿ ಚಾಲಕ

ಹೆದ್ದಾರಿಯಲ್ಲಿ ಇಂತಹ ಕೃತ್ಯಗಳಿಂದ ಉಂಟಾಗುತ್ತಿರುವ ಅಪಘಾತತಪ್ಪಿಸಲು ಹೆದ್ದಾರಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. -ಉಕೇಶ್‌ಕುಮಾರ್‌, ಪ್ರಭಾರಿ ಡೀಸಿ

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.