ಹೆದ್ದಾರಿ ಕಾಮಗಾರಿ ಶೀಘ್ರ ಮುಗಿಸಿ


Team Udayavani, Nov 29, 2019, 3:47 PM IST

kolar-tdy-2

ಮುಳಬಾಗಿಲು: ನಗರದ ಶಾಮೀರ್‌ ಮೊಹಲ್ಲಾದಿಂದ ಬಜಾರು ರಸ್ತೆ ಮೂಲಕ ಚೊಕ್ಕದೊಡ್ಡಿ ಗೇಟ್‌ವರೆಗೂ ಅಭಿವೃದ್ಧಿ ಪಡಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 234ರ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ವಾಹನ ಸವಾರರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಈ ಹಿಂದೆ ಇದ್ದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಭೂಸ್ವಾಧೀನ ಪ್ರಕ್ರಿಯೆ ಅರ್ಧಕ್ಕೆ ಕೈಬಿಟ್ಟರಿಂದ ಒಂದೂವರೆ ವರ್ಷದಿಂದ ಹೆದ್ದಾರಿ ಕಾಮಗಾರಿ ಕುಟುಂತ ಸಾಗಿದೆ.

ಶ್ರೀನಿವಾಸಪುರದಿಂದ ಮುಳಬಾಗಿಲಿನ ಆಂಧ್ರದ ಗಡಿವರೆಗೂ ಹಾದು ಹೋಗಿರುವ 40 ಕಿ.ಮೀ. ಜಿಲ್ಲಾರಸ್ತೆಯನ್ನು ಸರ್ಕಾರ 2006ರಲ್ಲಿ ರಾಜ್ಯ ಹೆದ್ದಾರಿ 58 ಆಗಿ ಮೇಲ್ದರ್ಜೆಗೇರಿಸಿತ್ತು. ಆಗ ಲೋಕೋಪಯೋಗಿ ಅಧಿಕಾರಿಗಳು ಪಟ್ಟಣ, ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ 22.50 ಮೀಟರ್‌ ಹಾಗೂ ಇತರೆ ಸ್ಥಳಗಳಲ್ಲಿ 40 ಮೀ. ರಸ್ತೆ ಅಗಲೀಕರಣಗೊಳಿಸಲು ಮುಂದಾಗಿದ್ದರು. ಅಂದಿನ ಶಾಸಕ ಆಲಂಗೂರ್‌ ಶ್ರೀನಿವಾಸ್‌ ಸಾರ್ವಜನಿಕರ ಹಿತದೃಷ್ಟಿಯಿಂದಹೆದ್ದಾರಿಯ ಅಕ್ಕಪಕ್ಕದ ಹಳ್ಳಿಗಳು ಮತ್ತು ನಗರದ ಬಜಾರು ರಸ್ತೆಯನ್ನು 50 ಅಡಿ ಮಾತ್ರವೇ ಅಗಲೀಕರಣ ಮಾಡಿಸಿದ್ದರು. ನಂತರ 2009-10ರಲ್ಲಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿ 234 ಆಗಿ ಮೇಲ್ದರ್ಜೆಗೇರಿಸಿದ್ದರು.

ಕಾಮಗಾರಿ ಅಪೂರ್ಣ: ಈ ಹೆದ್ದಾರಿಯನ್ನು 2015ರಿಂದ ಮೂಡಿಗೆರೆಯಿಂದ ಮುಳಬಾಗಿಲುವರೆಗೂ ದ್ವಿಪಥದಲ್ಲಿ ಅಭಿವೃದ್ಧಿ ಮಾಡಲು ಕಾಮಗಾರಿ ಆರಂಭಿಸಲಾಗಿದೆ. ಅಶೋಕ್‌ ಬಿಲ್ಡ್‌ಕಾನ್‌ ಕಂಪನಿಯು ಚಿಕ್ಕಬಳ್ಳಾಪುರದಿಂದ ಮುಳಬಾಗಿಲು ತಾಲೂಕು ಚೊಕ್ಕದೊಡ್ಡಿ ಗೇಟ್‌ವರೆಗಿನ 82.821 ಕಿ.ಮೀ. ಹೆದ್ದಾರಿಯನ್ನು 219 ಕೋಟಿ ರೂ.ನಲ್ಲಿ ಅಭಿವೃದ್ಧಿ ಪಡಿಸಲು ಜೆಎಸ್‌ಆರ್‌ ಕಂಪನಿಗೆ ಉಪಗುತ್ತಿಗೆ ನೀಡಿದೆ. ಅದರಂತೆ 7 ಮೀ. ಡಾಂಬರೀಕರಣ, ಎರಡೂ ಕಡೆಗಳಲ್ಲಿ 5 ಮೀ. ಮಣ್ಣಿನ ರಸ್ತೆ, ಇಕ್ಕೆಲಗಳಲ್ಲಿ ಚರಂಡಿ ಸೇರಿ  16 ಮೀ. ಅಗಲೀಕರಣ ಮಾಡಲಾಗುತ್ತಿದೆ. 2018ರ ಒಳಗಾಗಿ ಅಭಿವೃದ್ಧಿ ಕಾಮಗಾರಿ ಮುಗಿಯಬೇಕಿತ್ತು. ಆದರೆ, ನಗರದ ಶಾಮೀರ್‌ವೊಹ ಲ್ಲಾದಿಂದ ಚೊಕ್ಕದೊಡ್ಡಿ ಗೇಟ್‌ವರೆಗೂ ಭೂಸ್ವಾಧೀನ ಸರಿಯಾಗಿ ಆಗದೇ ಅಪೂರ್ಣಗೊಂಡಿದೆ.

ಗುಂಡಿ ಬಿದ್ದು ತೊಂದರೆ: ನಗರದ ಬಜಾರ್‌ ರಸ್ತೆ ಮೂಲಕಸೊನ್ನವಾಡಿ, ಗುಮ್ಲಾಪುರ, ಚೊಕ್ಕದೊಡ್ಡಿ ಗೇಟ್‌ವರೆಗೂ ಗುತ್ತಿಗೆದಾರರು ಅಲ್ಲಲ್ಲಿ ಕಾಮಗಾರಿ ಮಾಡಿ ಅರ್ಧಕ್ಕೆ ಬಿಟ್ಟಿದ್ದಾರೆ. ಈ ಅಪೂರ್ಣಗೊಂಡಿರುವ ಕಡೆಯಲ್ಲಿ ಗುಂಡಿ ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ರಸ್ತೆ ಕಿತ್ತುಹಾಕಿ ತೊಂದರೆ: ಸೊನ್ನವಾಡಿ, ಕವತನಹಳ್ಳಿ,ಗುಮ್ಲಾಪುರ ಗ್ರಾಮಗಳ ಬಳಿ, ಈ ಹಿಂದೆ ಇದ್ದ ಅಧಿಕಾರಿಗಳು ಭೂ ಸ್ವಾಧೀನಪಡಿಸಿಕೊಳ್ಳುವಲ್ಲಿ ನಿರ್ಲಕ್ಷ್ಯವಹಿಸಿದ್ದರಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಈಗಿನ ಅಧಿಕಾರಿಗಳು ಭೂಸ್ವಾಧೀನದಲ್ಲಿ ಉಂಟಾಗಿದ್ದ ಗೊಂದಲಗಳನ್ನು ಸರಿಪಡಿಸಲು 2 ತಿಂಗಳ ಹಿಂದೆ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಮೂಲಕ ರೈತರಿಗೆ ತಿಳಿವಳಿಕೆ ನೋಟಿಸ್‌ ನೀಡಿದ್ದರೂ ಹೆದ್ದಾರಿ ಅಧಿಕಾರಿಗಳು ರಸ್ತೆ ಅಭಿವೃದ್ಧಿ ಕಾರ್ಯಕೈಗೊಳ್ಳದೇ, ಇರುವುದರಿಂದ ಗುತ್ತಿಗೆದಾರರು ಹಿಂದೆ ಇದ್ದ ಉತ್ತಮರಸ್ತೆಯನ್ನು ಕಳೆದ ವರ್ಷವೇ ಕಿತ್ತು ಹಾಕಿ ವಾಹನಗಳ ಸಂಚಾರಕ್ಕೆ ಇನ್ನಿಲ್ಲದ ತೊಂದರೆಯನ್ನುಂಟು ಮಾಡಿದ್ದಾರೆ. ಮಳೆ ಬಂದರೆ ಗುತ್ತಿಗೆದಾರರು ಸೃಷ್ಟಿ ಮಾಡಿರುವ ಹಳ್ಳಗಳಿಂದ ವಾಹನಗಳ ಓಡಾಟಕ್ಕೆ ಹರಸಾಹಸ ಪಡಬೇಕಾಗುತ್ತದೆ.

 

-ಎಂ.ನಾಗರಾಜಯ್ಯ

ಟಾಪ್ ನ್ಯೂಸ್

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.