ಗೃಹಿಣಿ ನೇಣಿಗೆ ಶರಣು: ವರದಕ್ಷಿಣೆ ಕಿರುಕುಳ ಆರೋಪ
Team Udayavani, May 17, 2019, 3:06 PM IST
ಕೆಜಿಎಫ್: ಮದುವೆಯಾಗಿ 3 ವರ್ಷ ಗಳಲ್ಲಿಯೇ ಗಂಡನ ಮನೆಯಲ್ಲಿ ನೀಡು ತ್ತಿದ್ದ ವರದಕ್ಷಿಣ ಕಾಟ ತಾಳಲಾರದೆ ಮಹಿಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೂರಮಾಕನ ಹಳ್ಳಿಯಲ್ಲಿ ಬುಧವಾರ ನಡೆದಿದೆ.
ನಂದಿನಿ ಬಾಯಿ (26) ಮೃತ ಪಟ್ಟಿರುವ ದುರ್ದೈವಿ. ತಟ್ಟನಹಳ್ಳಿ ಗ್ರಾಮದ ನಿವಾಸಿ ಏಕಾಂಬರ್ ಸಿಂಗ್ ಎಂಬುವರೊಂದಿಗೆ ಕಳೆದ 2 ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು. ಮದುವೆ ಸಮಯದಲ್ಲಿ ವರದಕ್ಷಿಣೆ ಯಾಗಿ 15 ಲಕ್ಷ ರೂ., ಮೌಲ್ಯದ ಚಿನ್ನದ ಒಡವೆ, 5 ಲಕ್ಷ ರೂ.,ನಗದು ಮತ್ತು ಗೃಹೋಪಯೋಗಿ ವಸ್ತುಗಳು ನೀಡ ಲಾಗಿತ್ತು. ಮದುವೆಯನ್ನು ಬಂಗಾರ ಪೇಟೆ ವಿಬಿಆರ್ ಕಲ್ಯಾಣ ಮಂಟಪದಲ್ಲಿ ವಿಜೃಂಭಣೆಯಿಂದ ಮಾಡಲಾಗಿತ್ತು.
ಮದುವೆಯಾದ ಆರಂಭದಲ್ಲಿ ಗಂಡ ಹೆಂಡತಿ ಬೆಂಗಳೂರಿನ ಪೀಣ್ಯ 2ನೇ ಹಂತದಲ್ಲಿ ಮನೆ ಮಾಡಿಕೊಂಡು ಸಂಸಾರ ನಡೆಸಿಕೊಂಡು ಬರುತ್ತಿದ್ದರು. ಆದರೆ ಇತ್ತೀಚೆಗೆ ಗಂಡ ಏಕಾಂಬರ್ ಪತ್ನಿ ನಂದಿನಿ ಬಳಿ ತವರು ಮನೆಯಿಂದ ಹೆಚ್ಚಿನ ವರದಕ್ಷಿಣೆ ತರುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕಿರುಕುಳ ತಾಳಲಾರದೆ ನಂದಿನಿ ತಾಲೂಕಿನ ಬೂರಮಾಕನಹಳ್ಳಿ ಗ್ರಾಮದ ತವರು ಮನೆಗೆ ಹೋಗಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ನಮ್ಮ ಮಗಳ ಸಾವಿಗೆ ಅಳಿಯ ಏಕಾಂಬರ್ರ ತಾಯಿ ಚಿನ್ನಮ್ಮ, ತಂದೆ ಅನಂತರಾಂ ಸಿಂಗ್, ಭಾವ ಹನುಮಾನ್ ಸಿಂಗ್, ನಾದಿನಿಯರಾದ ಗೀತಾಬಾಯಿ, ಸರಸ್ವತಿ ಬಾಯಿ, ಪಾರ್ವತಿ ಬಾಯಿ ಕಾರಣ ಎಂದು ಮೃತ ನಂದಿನಿ ತಂದೆ ಕನಕಸಿಂಗ್ ಬೆಮೆಲ್ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಮೆಲ್ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
MUST WATCH
ಹೊಸ ಸೇರ್ಪಡೆ
Arrested: ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…