ಅಧ್ಯಕ್ಷ ಮಾಡದಿದ್ರೆ ರಾಜೀನಾಮೆ ಕೊಡ್ತೇನೆ!

ಕಾಂಗ್ರೆಸ್‌ ತೃತೀಯ ರಂಗಕ್ಕೆ ಶಾಸಕ ಕೆ.ವೈ.ನಂಜೇಗೌಡ ಸಡ್ಡು

Team Udayavani, May 26, 2019, 1:27 PM IST

kolar-tdy-3..

ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಕೆ.ಎಚ್.ಮುನಿಯಪ್ಪರನ್ನು ಸೋಲಿಸಿದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಗುಂಪಿಗೆ ಸಡ್ಡು ಹೊಡೆದು ಕೋಚಿಮುಲ್ ಅಧ್ಯಕ್ಷರಾಗಿ ಪುನರಾಯ್ಕೆಯಾಗುವಲ್ಲಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಯಶಸ್ವಿಯಾಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ತಮ್ಮ ಬಣಕ್ಕೆ ಬೆಂಬಲ ವ್ಯಕ್ತಪಡಿಸದೆ ಕೆ.ಎಚ್.ಮುನಿಯಪ್ಪ ಪರವಾಗಿ ನಿಂತರೆಂಬ ಕಾರಣಕ್ಕೆ ಅವಿಭಜಿತ ಕೋಲಾರ ಜಿಲ್ಲೆಯ ಬಹುತೇಕ ಶಾಸಕ, ಮಾಜಿ ಶಾಸಕರು ಕೆ.ವೈ.ನಂಜೇಗೌಡರನ್ನು ಕೋಚಿಮುಲ್ ಅಧ್ಯಕ್ಷರನ್ನಾಗಿಸಲು ವಿರೋಧ ವ್ಯಕ್ತಪಡಿಸಿದ್ದರು.

ಲೋಕಸಭಾ ಚುನಾವಣೆಯಲ್ಲಿ ಕೆ.ಎಚ್.ಮುನಿಯಪ್ಪರಿಗೆ ಸೋಲುಂಟಾದ ಹಿನ್ನೆಲೆಯಲ್ಲಿ ಅವರನ್ನು ಕೋಚಿಮುಲ್ ಅಧ್ಯಕ್ಷ ಸ್ಥಾನದ ಚಟುವಟಿಕೆಯಲ್ಲಿ ಮೂಲೆಗುಂಪು ಮಾಡಿ, ತಮ್ಮ ಬಣದ ಒಬ್ಬರಿಗೆ ಕೋಚಿಮುಲ್ ಅಧ್ಯಕ್ಷ ಪಟ್ಟ ಕಟ್ಟಬೇಕೆಂಬುದು ತೃತೀಯ ಬಣದ ಲೆಕ್ಕಾಚಾರವಾಗಿತ್ತು.

ತೃತೀಯ ರಂಗದ ಮುಖಂಡರ ಮಾತಿಗೆ ಕಿವಿಗೊಟ್ಟಿದ್ದ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎನ್‌.ಎಚ್.ಶಿವಶಂಕರರೆಡ್ಡಿಯವರಿಗೂ ಮಾಲೂರು ಶಾಸಕ ಕೆ.ವೈ.ನಂಜೇಗೌಡರನ್ನು ಕೋಚಿಮುಲ್ ಅಧ್ಯಕ್ಷರಾಗಿಸುವ ಬಗ್ಗೆ ಅರೆ ಮನಸ್ಸಿತ್ತು. ಆದರೆ, ಅಧ್ಯಕ್ಷ ಚುನಾವಣೆಗೆ ಮುನ್ನಾ ದಿನವೇ ಬೆಂಗಳೂರಿನಲ್ಲಿ ನಡೆದ ರಾಜಕೀಯ ಚಟುವಟಿಕೆಗಳಲ್ಲಿ ಕೆ.ಎಚ್.ಮುನಿಯಪ್ಪರ ಗುಂಪು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ವರಿಷ್ಠರ ಜೊತೆಯಲ್ಲಿ ನಡೆಸಿದ ಮಾತುಕತೆಯಲ್ಲಿ ಕೆ.ವೈ.ನಂಜೇಗೌಡರನ್ನೇ ಆಯ್ಕೆ ಮಾಡಬೇಕೆಂಬ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮಾಡುವಲ್ಲಿ ಸಫ‌ಲವಾಗಿದ್ದರು.

ಆದರೂ, ಶನಿವಾರ ಕೋಲಾರದಲ್ಲಿ ನಡೆದ ಬೆಳವಣಿಗೆಯಲ್ಲಿ ಕೆ.ವೈ.ನಂಜೇಗೌಡರ ವಿರುದ್ಧ ಬಂಡಾಯದ ಅಭ್ಯರ್ಥಿಯಾಗಿ ತೃತೀಯ ರಂಗದ ಬೆಂಬಲದಿಂದ ವಡಗೂರು ಹರೀಶ್‌ ನಾಮಪತ್ರ ಸಲ್ಲಿಸುತ್ತಾರೆಂಬ ಬಗ್ಗೆ ವದಂತಿಗಳು ಹರಡಿದ್ದವು. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಬಹುತೇಕ ಶಾಸಕ ಮಾಜಿ ಶಾಸಕರಿಗೆ ಕೆ.ವೈ.ನಂಜೇಗೌಡರ ಕೋಚಿಮುಲ್ ಅಧ್ಯಕ್ಷರಾಗುವ ಬಗ್ಗೆ ವಿರೋಧ ಇದ್ದಿದ್ದರಿಂದ ನಂಜೇಗೌಡರ ಆಯ್ಕೆ ಜಟಿಲವಾಗುತ್ತದೆಯೆಂಬ ಭಾವನೆ ಮೂಡಿತ್ತು.

ಈ ಬಾರಿ ಚಿಕ್ಕಬಳ್ಳಾಪುರ ಭಾಗದವರಿಗೆ ಕೋಚಿಮುಲ್ ಅಧ್ಯಕ್ಷ ಸ್ಥಾನ ನೀಡಬೇಕೆಂಬ ಬಗ್ಗೆಯೂ ಪ್ರಸ್ತಾಪನೆಗಳು ಕೇಳಿ ಬಂದಿದ್ದವು. ಇದಕ್ಕಾಗಿಯೇ ಕೆ.ಎಚ್.ಮುನಿಯಪ್ಪರನ್ನು ಸೋಲಿಸಿದ್ದ ತಂಡ ಭಾರೀ ಉತ್ಸಾಹದಿಂದಲೇ ಕೆ.ವೈ.ನಂಜೇಗೌಡರಿಗೆ ಕೋಚಿಮುಲ್ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಮುಖಭಂಗ ಮಾಡಬೇಕೆಂದು ತಂತ್ರಗಾರಿಕೆ ನಡೆಸಿತ್ತು. ಇದಕ್ಕಾಗಿ ತೃತೀಯ ರಂಗದ ನಾಯಕರೊಬ್ಬರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೊತೆ ಮಾತುಕತೆ ನಡೆಸಿದ್ದರು. ಆದರೆ, ಲೋಕಸಭಾ ಚುನಾವಣೆಯ ಹೀನಾಯ ಸೋಲಿನ ನಂತರ ಸರ್ಕಾರ ಉಳಿಸಿಕೊಳ್ಳುವುದೇ ಸಮಸ್ಯೆಯಾಗಿದ್ದು, ಶಾಸಕರಾಗಿರುವ ಕೆ.ವೈ.ನಂಜೇಗೌಡರಿಗೆ ಅವಕಾಶ ತಪ್ಪಿಸುವುದು ಸಾಧ್ಯವೇ ಇಲ್ಲವೆಂಬ ಉತ್ತರ ಎರಡೂ ಪಕ್ಷದ ಹೈಕಮಾಂಡ್‌ನಿಂದ ಕೇಳಿ ಬಂದಿದೆ. ಈ ಕುರಿತು ಸಾಕಷ್ಟು ಒತ್ತಡ ಹೇರಿದ್ದರೂ ಪ್ರಯೋಜನವಾಗಿಲ್ಲ.

ರಾಜೀನಾಮೆ ಬೆದರಿಕೆ: ಇದರ ಜೊತೆಗೆ ಮಾಲೂರು ಶಾಸಕ ಕೆ.ವೈ.ನಂಜೇಗೌಡರು ಕೋಚಿಮುಲ್ನಲ್ಲಿ ಈಗಾಗಲೇ ಘೋಷಣೆಯಾಗಿರುವ ಮೆಗಾಡೇರಿ ಮತ್ತಿತರ ಯೋಜನೆಗಳನ್ನು ಪೂರ್ಣಗೊಳಿಸಲು ತಾವೇ ಅಧ್ಯಕ್ಷರಾಗಬೇಕು ಎಂದು ಪ್ರತಿಪಾ ದಿಸಿದ್ದಾರೆ. ಒಂದು ಹಂತದಲ್ಲಿ ತಮಗೆ ಕೋಚಿಮುಲ್ ಅಧ್ಯಕ್ಷರಾಗಲು ಅವಕಾಶ ಕಲ್ಪಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿಯೇ ಬೆದರಿಕೆ ಹಾಕಿದ್ದರೆನ್ನಲಾಗಿದೆ.

ಇವೆಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಶಾಸಕರನ್ನು ಹಿಡಿದಿಟ್ಟುಕೊಳ್ಳುವುದು ಅಗತ್ಯವಾಗಿದ್ದರಿಂದ ತೃತೀಯ ರಂಗದ ಮುಖಂಡರ ಮಾತಿಗೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿವಿಗೊಟ್ಟಿಲ್ಲ. ಇದರಿಂದ ತೃತೀಯ ರಂಗವು ನಿರಾಸೆಗೊಳಗಾಗಿದೆ. ಅಂತಿಮವಾಗಿ ತೃತೀಯ ರಂಗದ ನಾಯಕರೊಬ್ಬರು ಕೋಲಾರದಲ್ಲಿ ಕಾಯುತ್ತಿದ್ದ ಮುಖಂಡರಿಗೆ ಕರೆ ದೂರವಾಣಿ ಮಾಡಿ ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೇಲೆ ಸಾಕಷ್ಟು ಅಪವಾದಗಳ ಹೊರೆ ಬಿದ್ದಿದೆ. ಇಂತ ಸಮಯದಲ್ಲಿ ಶಾಸಕರಾಗಿರುವ ಕೆ.ವೈ.ನಂಜೇಗೌಡರನ್ನು ವಿರೋಧಿಸುವುದರಿಂದ ಮತ್ತಷ್ಟು ಸಮಸ್ಯೆಗಳು ಉದ್ಭವವಾಗಲಿದೆ. ಹೈಕಮಾಂಡ್‌ ನಿರ್ಧಾರದಂತೆ ಕೆ.ವೈ.ನಂಜೇಗೌಡರು ಅಧ್ಯಕ್ಷರಾಗಲು ಅವಕಾಶ ಕಲ್ಪಿಸುವುದಷ್ಟೇ ಉಳಿದಿರುವ ದಾರಿ ಎಂದಿದ್ದಾರೆ.ಇದಾದ ನಂತರ, ನಿರಾಸೆಗೆ ಮುಳುಗಿದ ತೃತೀಯ ರಂಗದ ಹಾಲಿ ಮಾಜಿ ಶಾಸಕರು, ಉಸ್ತುವಾರಿ ಸಚಿವರುಗಳು ಕೆ.ವೈ.ನಂಜೇಗೌಡರಿಗೆ ಜೈ ಎಂದಿದ್ದಾರೆ.ಇವೆಲ್ಲಾ ಬೆಳವಣಿಗೆಗಳ ನಂತರ ಕೆ.ವೈ.ನಂಜೇಗೌಡ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಅವಿರೋಧ ಆಯ್ಕೆಯೆಂದು ಸಾರಲಾಯಿತು. ಕೆ.ವೈ.ನಂಜೇಗೌಡರೇ ಅಧ್ಯಕ್ಷರಾಗುತ್ತಾರೆಂಬ ಕಾರಣದಿಂದ ಕೋಚಿಮುಲ್ ಸಮೀಪ ಬೆಂಬಲಿಗರು ಜೈಕಾರಗಳನ್ನು ಕೂ ಗುತ್ತಾ ನಂಜೇಗೌಡರ ಪುನರಾಯ್ಕೆಯನ್ನು ಸ್ವಾಗತಿಸಿದರು.

● ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.