ಮಾವು ವಹಿವಾಟು ವೇಳೆ ಕೋವಿಡ್ ತಡೆಗೆ ಕ್ರಮಕೈಗೊಳ್ಳಿ
Team Udayavani, Apr 25, 2020, 12:12 PM IST
ಸಾಂದರ್ಭಿಕ ಚಿತ್ರ
ಶ್ರೀನಿವಾಸಪುರ: ಮೇ ಮೊದಲ ಅಥವಾ ಎರಡನೇ ವಾರ ಮಾವು ವಹಿವಾಟು ಆರಂಭಿಸಲಾಗುತ್ತಿದ್ದು, ಕೋವಿಡ್ ಸೋಂಕು ಹರಡದಂತೆ ಮಂಡಿ ಮಾಲಿಕರು ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಕುರಿತು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಚರ್ಚೆ ನಡೆಸಿದರು. ಪಟ್ಟಣದ ಎಪಿಎಂಸಿ ಸಭಾಂಗಣದಲ್ಲಿ ಮಂಡಿ ಮಾಲಿಕರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿದ ತಹಶೀಲ್ದಾರ್ ಎಸ್. ಎಂ.ಶ್ರೀನಿವಾಸ್, ಮಾವು ವಹಿವಾಟು ವೇಳೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಮಾಲಿಕರು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಂಡಿಯ ಕೆಲಸಕ್ಕೆ ಜಿಲ್ಲೆಯ ಕಾರ್ಮಿಕರನ್ನೇ ಬಳಸಿಕೊಳ್ಳಬೇಕು, ಮಂಡಿಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಆಧಾರ್ ಹೊಂದಿರಬೇಕು. ಆರೋಗ್ಯ ಪರೀಕ್ಷೆ ನಡೆಸಿದ ನಂತರ, ಸೋಂಕು ಇಲ್ಲದ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು ಎಂದು ತಿಳಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಎಪಿಎಂಸಿ ಕಾರ್ಯದರ್ಶಿ ವೇಣು, ಎಲ್ಲಾ ಮಂಡಿಗಳವರು ಈ
ನಿಯಮಗಳನ್ನು ಪಾಲಿಸದಿದ್ದಲ್ಲಿ ಅಂತವರ ಮಂಡಿಗಳ ಪರವಾನಗಿ ರದ್ದು ಮಾಡಲಾಗುತ್ತದೆ ಎಂದು ಹೇಳುತ್ತಿದ್ದಂತೆ ಕೆಲವು ಮಂದಿ ಆಕ್ಷೇಪ ವ್ಯಕ್ತಪಡಿಸಿದರು.
ಎಪಿಎಂಸಿ ಅಧ್ಯಕ್ಷ ಎನ್.ರಾಜೇಂದ್ರಪ್ರಸಾದ್ ಮಾತನಾಡಿ, ಪ್ರಾಂಗಣದ ಎರಡು ಕಡೆ ಸೋಂಕು ನಿರೋಧಕ ಸುರಂಗ ಮಾರ್ಗ ನಿರ್ಮಿಸಿ ಮಾರು ಕಟ್ಟೆಗೆ ಬರುವ ವಾಹನಗಳ ಚಾಲಕರು ಹಾಗೂ ಇತರರನ್ನು ಸುರಂಗ ಮೂಲಕ ಒಳಗಡೆ ಬಿಡಲಾ ಗುತ್ತದೆ. ಅದೇ ರೀತಿ ಮಾವಿನಕಾಯಿ ಹೊತ್ತು ತರುವ ವಾಹನಗಳ ಮೇಲೆ ಔಷಧಿ ಸಿಂಪಡಣೆ ಮಾಡಲಾಗುತ್ತದೆ.
ಕೋವಿಡ್ ಹಿನ್ನೆಲೆಯಲ್ಲಿ ಕೆಲವು ನಿಯಮ ಪಾಲಿಸಬೇಕೆಂದು ಮನವಿ ಮಾಡಿ ದರು. ಎಪಿಎಂಸಿ ಅಧಿಕಾರಿಗಳು, ತೋಟ ಗಾರಿಕೆ, ತಾಲೂಕು ಪಂಚಾಯ್ತಿ, ಕಂದಾಯ, ಆರೋಗ್ಯ ಇಲಾಖೆ, ಪುರಸಭೆ, ಇತರೆ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು