ಹಾಲಿನ ಖರೀದಿ ದರ ಹೆಚ್ಚಿಸದಿದ್ದರೆ ಕೆಎಂಎಫ್ ಮುತ್ತಿಗೆ


Team Udayavani, Oct 16, 2022, 3:29 PM IST

ಹಾಲಿನ ಖರೀದಿ ದರ ಹೆಚ್ಚಿಸದಿದ್ದರೆ ಕೆಎಂಎಫ್ ಮುತ್ತಿಗೆ

ಕೋಲಾರ: ರಾಜ್ಯ ಸರಕಾರ ಹಾಲು ಉತ್ಪಾದಕರ ಹಿತದೃಷ್ಟಿಯಿಂದ ಹಾಲಿನ ಖರೀದಿ ದರ ಹೆಚ್ಚಳ ಮಾಡದೇ ಹೋದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಹಾಗೂ ಕೆಎಂಎಫ್‌ ಮುಂದೆ ಜಿಲ್ಲೆಯ ರೈತರೊಂದಿಗೆ ಬೃಹತ್‌ ಪ್ರತಿಭಟನೆಯ ಮೂಲಕ ಮುತ್ತಿಗೆ ಹಾಕಲಾಗುತ್ತದೆ ಎಂದು ಕೋಮುಲ್‌ ನಿರ್ದೇಶಕ ವಡಗೂರು ಡಿ.ವಿ ಹರೀಶ್‌ ತಿಳಿಸಿದರು.

ತಾಲೂಕಿನ ವಕ್ಕಲೇರಿ ಹೋಬಳಿಯ ಜಂಗಾಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಒಕ್ಕೂಟದಿಂದ ಈಗಾಗಲೇ ಲೀಟರಿಗೆ 27 ರೂ. ನೀಡುತ್ತಿದ್ದು, ಖರೀದಿ ದರ ಹೆಚ್ಚಿಸಲು ಸರ್ಕಾರ ಮತ್ತು ಕೆಎಂಎಫ್‌ ಅನುಮತಿಗಾಗಿ ಪ್ರಸ್ತಾವನೆ ಕಳಿಸಿದ್ದರೂ ಕಾರಣಾಂತರಗಳಿಂದ ಸಿಎಂ ಅನುಮೋದನೆ ನೀಡಿಲ್ಲ ಕೂಡಲೇ ಖರೀದಿ ದರ 6 ರೂ. ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ಕೊರೊನಾ ವೇಳೆ ಹಾಲಿನ ಉತ್ಪಾದನೆ ಹೆಚ್ಚಿದ್ದರೂ ಸರಿಯಾದ ರೀತಿಯಲ್ಲಿ ಬಳಕೆ ಯಾಗದೇ ಸುಮಾರು 35 ಕೋಟಿ ನಷ್ಟ ಅನುಭವಿಸಲಾಯಿತು. ಇದರ ಮಧ್ಯೆ ಕೋಚಿಮುಲ್‌ ಒಕ್ಕೂಟದಿಂದ ಉತ್ಪಾದಕರಿಗೆ ಸಿಗಬೇಕಾದ ಸಾಕಷ್ಟು ಸೌಲಭ್ಯಗಳನ್ನು ನೀಡ ಲಾಗಿದೆ. ರಾಜಕೀಯ ಲಾಭಗಳಿಗಾಗಿ ಒಕ್ಕೂಟವನ್ನು ವಿಭಜನೆಗೆ ತಡೆಯಾಜ್ಞೆ ತಂದಿದ್ದರೂ ಇತ್ತೀಚೆಗೆ ಕೋಚಿಮುಲ್‌ ವಿಭಜನೆಯಾಗಿದ್ದು, ಆಡಳಿತದ ದೃಷ್ಟಿಯಿಂದ ಒಳ್ಳೆಯದಾಗಿದೆ. ಒಕ್ಕೂಟದಿಂದ ಉತ್ಪಾದಕರಿಗೆ ಹಾಗೂ ಸಂಘಗಳಿಗೆ ಸಿಗಬೇಕಾಗ ಸೌಲಭ್ಯಗಳನ್ನು ಪ್ರಮಾಣಿಕವಾಗಿ ಕೊಡಿಸುತ್ತೇನೆ ಪಶು ಆಹಾರಗಳನ್ನು ಕಡಿಮೆ ದರದಲ್ಲಿ ಉತ್ಪಾದಕರಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎಂದರು.

ಧರ್ಮಸ್ಥಳ ಸಂಸ್ಥೆ ತಾಲೂಕು ನಿರ್ದೇಶಕ ಸಿದ್ದಗಂಗಯ್ಯ ಮಾತನಾಡಿ, ಧರ್ಮಸ್ಥಳದ ಸಂಘದಿಂದ ರಾಜ್ಯಾದ್ಯಂತ ರೈತರನ್ನು ಮಹಿಳೆ ಯರನ್ನು ಸಂಘಟಿಸಿ ಆರ್ಥಿಕ ಸೌಲಭ್ಯಗಳನ್ನು ಒದಗಿಸುವ ಕಾರ್ಯಕ್ರಮಗಳನ್ನು ರೂಪಿಸಿ ಕೊಂಡು ಬಂದಿದೆ. ಜತೆಗೆ ಹಾಲು ಉತ್ಪಾದಕರ ಬೆಳವಣಿಗೆಗೆ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದಾರೆ. ಹಾಲು ಉತ್ಪಾದಕರ ಏಳಿಗೆಗಾಗಿ ರಾಜ್ಯದಲ್ಲಿ 27 ಕೋಟಿ ರೂ. ಹಾಗೂ ಜಿಲ್ಲೆಯಲ್ಲಿ 71 ಹಾಲು ಉತ್ಪಾದಕರ ಸಂಘ ಗಳಿಗೆ 65 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ. ಧರ್ಮಸ್ಥಳ ಸಂಘವನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕವಾಗಿ ಮುಂದೆ ಬರಬೇಕಾಗಿದೆ ಎಂದು ಹೇಳಿದರು.

ಜಂಗಾಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬಿ.ಶ್ರೀನಿವಾಸ್‌ ಅಧ್ಯಕ್ಷೆ ವಹಿಸಿದ್ದರು. ಕೋಮುಲ್‌ ವಿಸ್ತಾರಣಾಧಿಕಾರಿ ರಾಮಾಂಜಿನಪ್ಪ, ಭರತ್‌ ಕುಮಾರ್‌ ಶ್ರೀನಿವಾಸ್‌, ರಾಜುಬಾಬು, ನಾಗಪ್ಪ, ಕೃಷ್ಣಪ್ಪ, ಶ್ರೀನಿವಾಸ್‌, ಗೋಪಾಲ್‌, ಸಂಘದ ಕಾರ್ಯದರ್ಶಿ ನಂಜುಂಡಪ್ಪ ಇತರರಿದ್ದರು.

ಟಾಪ್ ನ್ಯೂಸ್

arrest

ತಂಬುತಡ್ಕದಲ್ಲಿ ಜೂಜಾಟ: ಆರು ಮಂದಿಯ ಬಂಧನ

arrest 3

ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

DOCTOR

ಅಸ್ವಸ್ಥ ಮಹಿಳೆಯ ರಕ್ಷಣೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

accident 2

ಉದ್ಯಾವರ : ಅಪರಿಚಿತ ವಾಹನ ಢಿಕ್ಕಿ : ವ್ಯಕ್ತಿ ಗಂಭೀರ

accuident

ಹಾಲ್ಕಲ್‌ ಬಳಿ ಬಸ್‌ ಮಗುಚಿ ಬಿದ್ದು, ಓರ್ವ ಪ್ರಯಾಣಿಕ ಸಾವು, ಐದು ಮಂದಿಗೆ ಗಂಭೀರ ಗಾಯ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-20

ಕೋಲಾರ: ಸಿದ್ದು ಸ್ಪರ್ಧೆ ಘೋಷಣೆಗೆ ಏ.5ರ ಗಡುವು

ಏ.5ಕ್ಕೆ ಕೋಲಾರಕ್ಕೆ ರಾಹುಲ್‌ ಗಾಂಧಿ

ಕೋಲಾರಕ್ಕೆ ಏ.5 ರಂದು ರಾಹುಲ್‌, ಕಾಂಗ್ರೆಸ್‌ ಶಕ್ತಿ ಪ್ರದರ್ಶನ

tdy-16

ಸಿದ್ದು ಬೆಂಬಲಿಗರ ಪಾಳೆಯದಲ್ಲಿ ನೀರವ ಮೌನ

tdy-15

ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ

tdy-18

ರಾಜ್ಯದ ಸಮಗ್ರ ಅಭಿವೃದ್ಧಿ ಎಚ್‌ಡಿಕೆ ಪಣ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

arrest

ತಂಬುತಡ್ಕದಲ್ಲಿ ಜೂಜಾಟ: ಆರು ಮಂದಿಯ ಬಂಧನ

arrest 3

ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

DOCTOR

ಅಸ್ವಸ್ಥ ಮಹಿಳೆಯ ರಕ್ಷಣೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ವಿವಿಧ ರಾಜಕೀಯ ಪಕ್ಷಗಳ ಜತೆ ಮುಖ್ಯ ಚುನಾವಣಾಧಿಕಾರಿ ಸಭೆ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ

ಹಾವೇರಿ: ಕಾಂಗ್ರೆಸ್‌ಗೆ ಬಂಡಾಯದ ಬಿಸಿ