ಕಸ ಚೆಲ್ಲಿದರೆ 5 ಸಾವಿರವರೆಗೆ ದಂಡ ವಿಧಿಸಿ

ಮಾಲಿಕರಿಗೆ ಎಚ್ಚರಿಕೆ, ಪುರಸಭೆ ಅಧಿಕಾರಿಗಳಿಗೆ ಶಾಸಕ ನಾರಾಯಣಸ್ವಾಮಿ ಖಡಕ್‌ ಸೂಚನೆ

Team Udayavani, Jul 5, 2019, 11:18 AM IST

kolar-tdy-2..

ಬಂಗಾರಪೇಟೆ ಪಟ್ಟಣದ ಮುಖ್ಯ ಬಜಾರ್‌ ರಸ್ತೆಯಲ್ಲಿ ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಪರಿಶೀಲನೆ ನಡೆಸಿದರು. ಪುರಸಭೆ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಂಗಡಿ ಮಾಲಿಕರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಬಂಗಾರಪೇಟೆ: ಪಟ್ಟಣದ ಬಜಾರ್‌ ರಸ್ತೆಯಲ್ಲಿರುವ ಅಂಗಡಿಗಳ ಮಾಲಿಕರಿಗೆ ರಸ್ತೆಗೆ ಕಸ ಸುರಿಯದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ, ಮಾಲಿಕರು ನಿಯಮ ಪಾಲಿಸುತ್ತಿಲ್ಲ. ಇದು ಮುಂದುವರಿದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಮತ್ತು ದಂಡ ವಿಧಿಸಲಾಗುವುದು ಎಂದು ಶಾಸಕ ಎಸ್‌.ಎನ್‌. ನಾರಾಯಣಸ್ವಾಮಿ ಸೂಚನೆ ನೀಡಿದರು.

ಗುರುವಾರ ಬೆಳಗ್ಗೆ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿರೊಂದಿಗೆ ಬಜಾರ್‌ ರಸ್ತೆಗೆ ಆಗಮಿಸಿದ ಶಾಸಕರು, ಪಟ್ಟಣದ ಮುಖ್ಯ ಬಜಾರ್‌ ರಸ್ತೆಯಲ್ಲಿ ಪ್ರತಿಯೊಂದು ಅಂಗಡಿಗಳ ಮಾಲಿಕರು ತಮ್ಮ ಅಂಗಡಿಯೊಳಗಿನ ಕಸ ರಸ್ತೆ ಹಾಕಿದ್ದಾರೆ. ಪ್ರತಿ ದಿನ ಪುರಸಭೆಯಿಂದ ಕಸವನ್ನು ತೆಗೆದುಕೊಂಡು ಹೋಗಲು ವಾಹನ ಬರುತ್ತಿದ್ದರೂ ಎಚ್ಚೆತ್ತುಕೊಳ್ಳದೇ ರಸ್ತೆಗೆ ಕಸ ಹಾಕುತ್ತಿರುವುದಕ್ಕೆ ತೀವ್ರ ಗರಂ ಆಗಿದ್ದರು.

ಮುಖ್ಯ ಬಜಾರ್‌ ರಸ್ತೆಯ ಉದ್ದಕ್ಕೂ ಎಲ್ಲಾ ಅಂಗಡಿಗಳೇ ಇದ್ದು, ಪ್ರತಿಯೊಂದು ಅಂಗಡಿಯ ಮುಂದೆ ಕಸ ಸುರಿದರೆ ತುಂಬಲು ಪೌರಕಾರ್ಮಿಕರಿಗಾಗಿ ಕಾಯಬೇಕು. ಬದಲಿಗೆ ಡಬ್ಬಿಯನ್ನು ಇಟ್ಟುಕೊಂಡು ಪುರಸಭೆ ವಾಹನಕ್ಕೆ ಸುರಿದರೆ ಸ್ವಚ್ಛವೂ ಉಳಿಯುತ್ತದೆ. ಹೀಗೆ ಬೇಜವಾಬ್ದಾರಿಯಿಂದ ನಡೆದುಕೊಳ್ಳಬಾರದು ಎಂದು ಅಸಮಧಾನ ವ್ಯಕ್ತಪಡಿಸಿದರು.

ಮುಖ್ಯವಾಗಿ ಟೀ ಅಂಗಡಿಗಳಲ್ಲಿ ಟೀ ಕುಡಿದ ಬಳಿಕ ಗ್ಲಾಸ್‌ಗಳನ್ನು ರಸ್ತೆಗೆ ಹಾಕದೇ, ಒಂದು ಕಾಟನ್‌ ಬಾಕ್ಸ್‌ ಇಟ್ಟು ಅದರಲ್ಲಿ ಹಾಕಬೇಕು. ಪುರಸಭೆ ಅಧಿಕಾರಿ ಸಿಬ್ಬಂದಿ ಎಷ್ಟೇ ಅರಿವು ಮೂಡಿಸದರೂ ಜನರು ಹಾಗೂ ಅಂಗಡಿಗಳ ಮಾಲಿಕರು ಎಚ್ಚೆತ್ತುಕೊಂಡಿಲ್ಲ. ಇನ್ನು ಮುಂದೆ ಕಸವನ್ನು ಬೇಕಾಬಿಟ್ಟಿ ಕಸ ರಸ್ತೆಗೆ ಸುರಿದರೆ ಅಂತಹ ಅಂಗಡಿಗಳ ಒಳಗೆ ಕಸ ಹಾಕಿ. ತಮ್ಮ ಮನೆಯಲ್ಲಿ ಈ ರೀತಿ ಕಸ ಹಾಕಿಕೊಳ್ಳುತ್ತಾರೆಯೇ ? ಇನ್ನು ಮುಂದೆ ಪುರಸಭೆ ವ್ಯಾಪ್ತಿಯ ರಸ್ತೆಯಲ್ಲಿ ಕಸ ಹಾಕುವಂತಿಲ್ಲ, ಮನೆಗಳು, ಅಂಗಡಿಗಳು, ಹೋಟೆಲ್ಗಳು, ತರಕಾರಿ ಅಂಗಡಿಗಳು ಸೇರಿದಂತೆ ರಸ್ತೆಗೆ ಕಸ ಸುರಿದರೆ 5 ಸಾವಿರವರೆಗೂ ದಂಡ ವಿಧಿಸಿ ಎಂದು ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಟ್ಟಣದ ಎಲ್ಲಾ ರಸ್ತೆಗಳಲ್ಲಿ ಅನಧಿಕೃತ ಶೀಟ್‌ಗಳನ್ನು ಹಾಕಿರುವುದರಿಂದ ಪುರಸಭೆ ಅಧಿಕಾರಿ ಸಿಬ್ಬಂದಿ ತೆರವುಗೊಳಿಸಲಿದ್ದಾರೆ. ಇದಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಕೆ.ಚಂದ್ರಾರೆಡ್ಡಿ ಮಾತನಾಡಿ, ಪಟ್ಟಣದಲ್ಲಿ ಪ್ರತಿ ಯೊಂದು ರಸ್ತೆಯ ಉದ್ದಕ್ಕೂ ಅಂಗಡಿಗಳ ಮುಂದೆ ಅನಧಿಕೃತವಾಗಿ ಅಳವಡಿಸಿಕೊಂಡಿರುವ ಕ್ರಮ ಶೀಟ್‌ಗಳನ್ನು ಹಾಗೂ ಅಂಗಡಿಗಳ ಮುಂದೆ ರಸ್ತೆಗೆ ಹೊಂದಿಕೊಂಡಂತೆ ಅಕ್ರಮವಾಗಿ ನಿರ್ಮಾಣ ಮಾಡಿಕೊಂಡಿರುವ ಅಂಗಡಿಗಳನ್ನು ಸಂಪೂರ್ಣವಾಗಿ ತೆಗೆಯಬೇಕು. ಒತ್ತಡಕ್ಕೂ ಮಣಿಯದೇ ನೇರವಾಗಿ ತೆರವುಗೊಳಿಸಿ ಪಟ್ಟಣವನ್ನು ಪ್ರಾಫಿಕ್‌ ಹಾಗೂ ಕಸ ಮುಕ್ತ ನಗರವನ್ನಾಗಿ ಮಾಡಲು ಎಲ್ಲರೂ ಸಹಕಾರ ನೀಡಬೇಕಾಗಿದೆ ಎಂದರು. ಪುರಸಭೆ ಸದಸ್ಯ ಪ್ರಶಾಂತ್‌, ಆರೋಗ್ಯ ನಿರೀಕ್ಷಕ ಗೋವಿಂದ ರಾಜು, ಪೌರಕಾರ್ಮಿಕರು ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.