ಖಾಸಗಿ ಶಿಕ್ಷಣ ಸಂಸ್ಥೆ ಕಡೆಗಣನೆ
Team Udayavani, Jun 24, 2020, 6:57 AM IST
ಕೋಲಾರ: ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಸರ್ಕಾರ ಮಲತಾಯಿ ಧೋರಣೆ ಅನುಸರಿಸದೇ, ಕೂಡಲೇ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿ ಕೋಲಾರ ಅಸೋಸಿಯೇಟೆಡ್ ಮ್ಯಾನೇ ಜ್ಮೆಂಟ್ಸ್ ಆಫ್ ಸ್ಕೂಲ್ಸ್ (ಕ್ಯಾಮ್ಸ್) ಪದಾಧಿಕಾರಿಗಳು ಶಿಕ್ಷಣಾಧಿ ಕಾರಿ ಸಿ.ಆರ್.ಅಶೋಕ್ಗೆ ಮನವಿ ಸಲ್ಲಿಸಿದರು.
ನಗರದ ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕ್ಯಾಮ್ಸ್ ಪದಾಧಿಕಾರಿಗಳು, ಶಿಕ್ಷಕರ ಹೋರಾಟಕ್ಕೆ ಬೆಂಬಲ ನೀಡಿ ಮಾತನಾಡಿದ ಮಾಜಿ ಎಂಎಲ್ಸಿ ರಮೇಶ್ಬಾಬು, ಖಾಸಗಿ ಶಾಲೆಗಳು ಕೋವಿಡ್ನಿಂದಾಗಿ ಸಂಕಷ್ಟಕ್ಕೆ ಸಿಲುಕಿವೆ, ಹಲವು ವೃತ್ತಿಪರರಿಗೆ ಪರಿಹಾರಧನ ಘೋಷಿಸಿರುವ ಸರ್ಕಾರ, ಖಾಸಗಿ ಶಾಲೆಗಳ ಈ ಸಿಬ್ಬಂದಿಯನ್ನು ಕಡೆಗಣಿಸಿದೆ ಎಂದು ದೂರಿದರು.
ಕ್ಯಾಮ್ಸ್ ಜಿಲ್ಲಾಧ್ಯಕ್ಷ ಎ.ಸದಾನಂದ ಮಾತನಾಡಿ, ಶಾಲೆಯ ವಾಹನಗಳ ವಿಮೆ, ತೆರಿಗೆ, ಶಿಕ್ಷಕರಿಗೆ ಪಿಎಫ್, ಇಎಸ್ಐ, ಕಟ್ಟಡ ನಿರ್ವಹಣಾ ವೆಚ್ಚಗಳಿಂದ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದು, ಸರ್ಕಾರ ಆದಷ್ಟು ಶೀಘ್ರ 2019-20ನೇ ಸಾಲಿನ ಆರ್ಟಿಇ ಶುಲ್ಕದ ಬಾಕಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ನಗರಸಭೆ ಸದಸ್ಯ ಮುಭಾರಕ್, ಅಮರ ಜ್ಯೋತಿ ಮುನಿಯಪ್ಪ, ಸಲಹೆಗಾರರಾದ ಮುನಿಸ್ವಾಮಿ,
ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಎಸ್. ಜಗದೀಶ್, ಜಿಲ್ಲಾ ಉಪಾಧ್ಯಕ್ಷ ನಾಗಭೂಷಣ್, ಸತೀಶ್ಕುಮಾರ್, ಮುರಾಂಡಹಳ್ಳಿ ಗೋಪಾಲಪ್ಪ, ಜಮೀರ್ ಅಹಮದ್, ಶೈಲೇಶ್ಕುಮಾರ್, ಹನುಮಂತಪ್ಪ, ಮುನಿಶಾಮಿಗೌಡ, ಜಿ.ಕೆ. ಹರಿಪ್ರಸಾದ್, ವೈ.ಸಿ.ಮುನೇಗೌಡ, ಆರ್.ಅಶೋಕ್ ಕುಮಾರ್, ಜೋಸೆಫ್, ಆರ್.ಶಂಕರಪ್ಪ, ಜೆ.ಎನ್. ರಾಮಕೃಷ್ಣ, ಶಶಿಕಿರಣ್, ಚಿನ್ಮಯಾನಂದ ಅವಧೂತರು, ಸೋಮಶೇಖರ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ
Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ
Lok Sabha Election ಬಳಿಕವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು