ಅಕ್ರಮ ಮನೆ, ಅಡಿಪಾಯ ತೆರವು


Team Udayavani, Jan 15, 2020, 5:25 PM IST

kolar-tdy-1

ಟೇಕಲ್‌: ವ್ಯಾಪ್ತಿಯ ಕೆ.ಜಿ.ಹಳ್ಳಿ ಗ್ರಾಮದ ಸರ್ವೆ ನಂ. 73ರಲ್ಲಿನ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಹಾಕಿದ್ದ ಪಾಯ ಮತ್ತು ನಿರ್ಮಾಣದಲ್ಲಿನ ಮನೆಗಳನ್ನು ಉಪವಿಭಾಗಾಧಿಕಾರಿ ಸೋಮಶೇಖರ್‌ ಸಮ್ಮುಖದಲ್ಲಿ ತೆರವು ಮಾಡಲಾಯಿತು. ಎರಡು ದಿನಗಳ ಹಿಂದೆ ತಹಶೀಲ್ದಾರ್‌ನಾಗವೇಣಿ ಹಾಗೂ ಇಒ ಕೃಷ್ಣಪ್ಪ ಸ್ಥಳಕ್ಕೆ ಬಂದು ಅಕ್ರಮವಾಗಿ ಮನೆ ಕಟ್ಟಿಕೊಳ್ಳುತ್ತಿದ್ದವರಿಗೆ ಎಚ್ಚರಿಕೆ ನೀಡಿದ್ದರು.

ಸರ್ಕಾರಿ ಜಾಗದಲ್ಲಿ ಮನೆಕಟ್ಟಿ ಕೊಳ್ಳಬಾರದು, ಒಂದು ವೇಳೆ ಕಟ್ಟಿದರೆ ನೆಲಸಮಗೊಳಿಸುವುದಾಗಿ ಹೇಳಿದ್ದರು. ಆದರೂ ಕೆಲವರು ಅಧಿಕಾರಿಗಳ ಮಾತಿಗೆ ಬೆಲೆ ಕೊಡದೆ, ರಾತ್ರೋರಾತ್ರಿ ಮನೆ ಕಟ್ಟಲು ಪ್ರಾರಂಭಿಸಿದ್ದರು. ಹೀಗಾಗಿ ಮಂಗಳವಾರ ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ, ತಹಶೀಲ್ದಾರ್‌ ನಾಗವೇಣಿ ನೇತೃತ್ವದಲ್ಲಿ ತೆರವು ಮಾಡಲಾಯಿತು.

ದಾಖಲೆಗಳು ಪರಿಶೀಲನೆ: ತೆರವು ಕಾರ್ಯಾಚರಣೆ ವೇಳೆ ಮನೆ ಕಟ್ಟಲು ಆರಂಭಿಸಿದ್ದ ಕೆಲವರು ಪಂಚಾಯ್ತಿ ನೀಡಿರುವ ದಾಖಲೆ ತೋರಿಸಿದರು. ಆಗ ಸ್ಥಳದಲ್ಲಿದ್ದ ಪಿಡಿಒ ಶಾಲಿನಿ ಮತ್ತು ತಾಪಂ ಇಒ ಕೃಷ್ಣಪ್ಪ ಪರಿಶೀಲನೆ ನಡೆಸಿದರು. ದಾಖಲೆಗಳು ಸರಿಯಿಲ್ಲ ಎಂಬುದು ತಿಳಿದು ಬಂದಿದ್ದರಿಂದ ನಿರ್ಮಿಸಿದ್ದ ಅಡಿಪಾಯ ಹಾಗೂ ಮನೆ ಗಳನ್ನು ನೆಲಸಮ ಗೊಳಿಸಲಾಯಿತು.

ಅರ್ಹರ ಪಟ್ಟಿ ತಯಾರಿಸಿ: ಉಪ ವಿಭಾಗಾಧಿಕಾರಿ ಸೋಮಶೇಖರ್‌ ಮಾತನಾಡಿ, ಸರ್ವೆ ನಂಬರ್‌ 73ರಲ್ಲಿ ಪಾಯ ಹಾಕಿಕೊಂಡಿರುವವರು, ಪಕ್ಕಮನೆ ಕಟ್ಟಿಕೊಂಡಿರುವವರು, ಗುಡಿಸ ಲಲ್ಲಿ ವಾಸಿಸುತ್ತಿರುವವರು, ನಿವೇಶನ ರಹಿತರೆ, ವಸತಿ ಹೀನರೆ ಅಥವಾ 94 ಸಿನಲ್ಲಿ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ದಾರೆಯೇ ಎಂಬ ದಾಖಲೆಗಳನ್ನು ಸಂಗ್ರ ಹಿಸಿ, ಅರ್ಹತೆ ಇರುವ ಫ‌ಲಾನುಭವಿಗಳ ಪಟ್ಟಿ ತಯಾರಿಸಿ, ಗ್ರಾಮ ಪಂಚಾಯ್ತಿಗೆ ನೀಡುವಂತೆ ಜನರಿಗೆ ತಿಳಿಸಿದರು.

ಪಿಡಿಒ, ಸರ್ವೆಯರ್‌ ವಿರುದ್ಧ ದೂರು: ಸರ್ವೆಯರ್‌ ಸರ್ಕಾರಿ ಜಮೀನನ್ನು ಗಾಮಠಾಣೆ ಜಮೀನು ಎಂದು ನಮೂದಿಸಿರುವುದು, ಕೆಲವು ದಾಖಲೆ ಗಳಲ್ಲಿ ಕಂಡು ಬಂದಿದ್ದರಿಂದ ಅವರ ವಿರುದ್ಧವೂ ಕೇಸು ದಾಖಲಿಸುವಂತೆ ತಾಪಂ ಇಒಗೆ ಸೂಚಿಸಿದರು. ಈ ಸರ್ವೆ ನಂಬರಿನಲ್ಲಿ ಈ ಸ್ವತ್ತು ಮಾಡಿಕೊಟ್ಟಿರುವ ಪಿಡಿಒ ವಿರುದ್ಧವು ದೂರು ದಾಖಲಿಸಿ ಕ್ರಮ ಜರುಗಿಸುವಂತೆ ತಿಳಿಸಿದರು.

ಅನುಮಾನ: ಇಒ ಕೃಷ್ಣಪ್ಪನವರು ಇದಕ್ಕೂ ಮುಂಚೆ ಕೆ.ಜಿ.ಹಳ್ಳಿ ಗ್ರಾ.ಪಂ. ಕಚೇರಿಯಲ್ಲಿ ಕೆ.ಜಿ.ಹಳ್ಳಿ ಗ್ರಾಮದ ಖಾತೆ ಪುಸ್ತಕಗಳನ್ನು ಪರಿಶೀಲಿಸಿದಾಗ ಬಹುತೇಕ ಲೋಪದೋಷಗಳು ಕಂಡು ಬಂದಿವೆ. ಕ್ರಮ ಸಂಖ್ಯೆಗಳಲ್ಲಿ ಅನೇಕ ವ್ಯತ್ಯಾಸವಾಗಿದೆ. ಸ್ವತ್ತಿನ ಬಾಬಿನಲ್ಲಿ ಕೆಲವು ಕಡೆ ಕ್ರಮ ಸಂಖ್ಯೆಗಳ ಹೆಸರಿಗೂ ತಾಳೆಯಾಗುತ್ತಿಲ್ಲ ಮತ್ತು ಮನೆ ನಿರ್ಮಿ ಸಿದ ಜಾಗದಲ್ಲಿ ಫ‌ಲಾನು ಭವಿಗಳು ಹಾಜರು ಪಡಿಸಿದ ನಮೂನೆ 9, 10 ದಾಖಲೆಗಳು ಪಂಚಾಯ್ತಿ ಖಾತೆ ಪುಸ್ತಕ ದಲ್ಲಿ ಕೈಬಿಟ್ಟಿರುತ್ತದೆ. ಇದರಿಂದ ಅಕ್ರಮ ವಾಗಿದೆ ಎಂಬುದು ಅನುಮಾನಕ್ಕೆ ಎಡೆಮಾಡಿದೆ. ಈ ಸ್ವತ್ತು ಮಾಡಿರುವುದು ಸಹ ಅವುಗಳಲ್ಲಿ ಅಕ್ರಮವಾಗಿದೆ ಎಂದು ವಿವರಿಸಿದರು.

ತಹಶೀಲ್ದಾರ್‌ ನಾಗವೇಣಿ ಮಾತನಾಡಿ, ಈ ಸರ್ವೆ ನಂಬರಿನಲ್ಲಿ ಸರ್ಕಾರಿಇಲಾಖೆಗಳ ಕೆಲವು ಕಚೇರಿಗಳಿಗೆ ಜಾಗಮೀಸಲಾಗಿದ್ದು, ಅವುಗಳಿಗೆ ಸರ್ವೆ ಕಾರ್ಯದಲ್ಲಿ ಹದ್ದುಬಸ್ತು ಪೂರ್ಣಗೊಂಡ ನಂತರ ಖಾಲಿಜಾಗ ಉಳಿದರೆ ಅರ್ಹ ಕಡುಬಡವರಿಗೆ ಗ್ರಾ.ಪಂ. ಶಿಫಾರಸು ಮಾಡಿದ ಫ‌ಲಾನುಭವಿಗಳಿಗೆ ಆದ್ಯತೆ ಮೇರೆಗೆ ನಿವೇಶನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ನೆರೆದಿದ್ದವರಿಗೆ ತಿಳಿಸಿದರು.

ಕಾರ್ಯಾ ಚರಣೆಯಲ್ಲಿ ಸರ್ಕಲ್‌ ಇನ್ಸ್‌ ಪೆಕ್ಟರ್‌ ನಾಗರಾಜ್‌, ಮಾಸ್ತಿ ಪಿಎಸ್‌ಐ ವಸಂತಕುಮಾರ್‌, ತಾಪಂ ಸದಸ್ಯೆ ಕಾಂತಮ್ಮ, ಆರ್‌.ಐ ಮುನಿಸ್ವಾಮಿಶೆಟ್ಟಿ, ವಿಎಗಳಾದ ಸುಧಾ ಮಣಿ, ರಘು, ಪವನ್‌, ಗುರುದತ್‌, ವಿನಯ್‌, ಉಮೇಶ್‌, ರಾಹುಲ್‌ ಜೊತೆಗಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.