ದಲಿತ ಸಮ್ಮೇಳನ ಮೂಲಕ ತ್ರಿಕರಣ ಶುದ್ಧಿ ಸಾಧನೆ

ತಡವಾಗಿಯಾದ್ರೂ ಎಚ್ಚೆತ್ತುಕೊಂಡ ಕಸಾಪ: ಸಾಹಿತಿ ಸಿದ್ದಯ್ಯ ಬಣ್ಣನೆ

Team Udayavani, Aug 18, 2019, 3:55 PM IST

kolar-tdy-1

ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದ ವೇದಿಕೆಯಲ್ಲಿ ದಲಿತ ಸಾಹಿತ್ಯದ ಐದು ಸಂಪುಟಗಳನ್ನು ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ಮತ್ತು ಸಿದ್ದಲಿಂಗಯ್ಯ ಇತರರು ಬಿಡುಗಡೆ ಮಾಡಿದರು.

ಕೋಲಾರ: ದಲಿತ ಸಾಹಿತ್ಯ ಸಮ್ಮೇಳನ ಆಯೋಜಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತು ಬಸವಣ್ಣ ಅವರ ಹಾದಿಯಲ್ಲಿ ತ್ರಿಕರಣ (ಕಾಯ, ವಾಚ, ಮನಸ್ಸು) ಶುದ್ಧಿ ಸಾಧಿಸಿದೆ, ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಕಾರ್ಯಗತಗೊಳಿಸಿದೆ ಎಂದು ಹಿರಿಯ ಸಾಹಿತಿ ಕೆ.ಬಿ.ಸಿದ್ದಯ್ಯ ಅಭಿಪ್ರಾಯಪಟ್ಟರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಿದ್ದ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಅವರು, ದಲಿತ ಸಾಹಿತ್ಯ ಸಂಪುಟಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಬುಡಕಟ್ಟು, ಮಹಿಳೆ ಮತ್ತು ದಲಿತರು ಮತ್ತವರ ವಿಚಾರಗಳನ್ನೊಳಗೊಳ್ಳದ ಯಾವುದೇ ಸಮ್ಮೇಳನ ಅರ್ಥಪೂರ್ಣವಲ್ಲ, ಇದೀಗ ತಡವಾಗಿಯಾದರೂ ಎಚ್ಚೆತ್ತುಕೊಂಡಿರುವ ಕಸಾಪಕ್ಕೆ ದಲಿತ ಸಮ್ಮೇಳನದ ಮೂಲಕ ಬಹಳ ದೊಡ್ಡ ವಿವೇಕ ಬಂದಿದೆ ಎಂದು ಬಣ್ಣಿಸಿದರು.

ಯುವಕರಿಗೆ ಹೆಚ್ಚಿನ ಆದ್ಯತೆ: ದಲಿತ ಸಾಹಿತ್ಯ ಸಮ್ಮೇಳನ ಕಸಾಪದ ಘನತೆಯನ್ನು ಹೆಚ್ಚಿಸಿದೆ ಮತ್ತು ಕನ್ನಡ ಚಿಂತನೆಯ ಮೆರುಗು ಹೆಚ್ಚಿಸಿದೆಯೆಂದು ಹೇಳಿದ ಅವರು, ಮುಂದಿನ ದಿನಗಳಲ್ಲಿ ಕಸಾಪ ಅಖೀಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸುವಂತಾಗಲಿ, ಆಗ ಮಹಿಳೆಯರು ಮತ್ತು ಯುವಕರಿಗೆ ಹೆಚ್ಚಿನ ಆದ್ಯತೆಯನ್ನು ನೀಡುವಂತಾಗಲಿ ಎಂದು ಆಶಿಸಿದರು.

ಮರುಚಿಂತನೆಗೆ ಪ್ರೇರಣೆ: ಅಕ್ಷರವನ್ನು ದಲಿತ ಮತ್ತು ಮಹಿಳೆಯರಿಂದ ದೂರ ಇಡಲಾಗಿತ್ತು, ಆದರೆ, ದಲಿತ ಮತ್ತು ಸ್ತ್ರೀಯರು ಮುಟ್ಟಿನ ನಂತರವಷ್ಟೇ ಅಕ್ಷರಗಳಿಗೆ ಬಿಡುಗಡೆ ಬಂತು ಎಂದು ಹೇಳಿದ ಅವರು, ಆದರೆ, ಅಕ್ಷರಸ್ಥರ ಆಪಾಯಗಳನ್ನು ವಿಮರ್ಶಿಸಬೇಕಾದ ಕಾಲಘಟ್ಟ ಇದಾಗಿದೆ, ದಲಿತ ರಾಜಕಾರಣ ಮತ್ತು ಅಕ್ಷರಸ್ಥರ ಅಪಾಯಗಳ ದಲಿತ ಸಾಹಿತ್ಯ ಸಮ್ಮೇಳನ ಮರು ಚಿಂತನೆಗೆ ಪ್ರೇರೇಪಿಸಲಿ ಎಂದರು.

ಕಟ್ಟುಪಾಡು: ದಲಿತ ಪದಕ್ಕೆ ಜಾತಿ ಲೇಪನವಿದ್ದು, ಆ ಪದವು ಸಮಸ್ತ ದುಃಖೀತರನ್ನು ಪ್ರತಿಬಿಂಬಿಸಿದರೆ, ಜಗತ್ತಿನ ಎಲ್ಲಾ ದುಃಖೀತರೂ ದಲಿತರೆಂದು ಪರಿಗಣಿಸಿದರೆ, ಆ ಪದಕ್ಕೆ ಜಾಗತಿಕ ಮಹತ್ವ ಬರುತ್ತದೆ, ಪ್ರಾದೇಶಿಕ ಹಾಗೂ ಜಾತಿಯ ಕಟ್ಟುಪಾಡುಗಳನ್ನು ಕಳಚಿಕೊಳ್ಳುತ್ತದೆ ಎಂದು ವಿವರಿಸಿದರು.

ಉಳಿದ ಸಂಪುಟಗಳ ಶೀಘ್ರ ಬಿಡುಗಡೆ: ದಲಿತ ಸಾಹಿತ್ಯ ಸಂಪುಟದ ಸಣ್ಣ ಕಥೆಗಳು, ಕಾವ್ಯ, ಜಾನಪದ, ಮಾನವೀಯ ಪ್ರಕಾರಗಳು ಸೇರಿದಂತೆ ಐದು ಸಂಪುಟಗಳನ್ನು ಬಿಡುಗಡೆ ಮಾಡಲಾಯಿತು. ಇದೇ ರೀತಿಯ ಉಳಿದ ಐದು ಸಂಪುಟಗಳನ್ನು ಕೆಲವೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಕಸಾಪ ಅಧ್ಯಕ್ಷ ಮನುಬಳಿಗಾರ್‌ ತಿಳಿಸಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.