ನಿಷೇಧಾಜ್ಞೆ ನಡುವೆ ಜೈಲು ಭರೋ ಚಳವಳಿಗೆ ಯತ್ನ


Team Udayavani, Apr 21, 2021, 2:46 PM IST

incident held at kolara

ಕೋಲಾರ: ನಿಷೇಧಾಜ್ಞೆಯ ನಡುವೆಯೂ ಜೈಲ್‌ಭರೋ ಚಳವಳಿ ನಡೆಸಲು ಮುಂದಾದ ಸಾರಿಗೆನೌಕರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿ,ಗುಂಪನ್ನು ಚದುರಿಸಿದ ಘಟನೆ ಇಲ್ಲಿನ ಗ್ರಾಮಾಂತರ ಠಾಣೆ ಮುಂಭಾಗ ನಡೆಯಿತು.

ಮಂಗಳವಾರ ಜೈಲು ಭರೋ ಚಳವಳಿಗೆ ಮುಂದಾದಸಾರಿಗೆ ನೌಕರರು, ಇಲ್ಲಿನ ಗ್ರಾಮಾಂತರ ಠಾಣೆಯಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದಾಗಿ ಸ್ವಲ್ಪಹೊತ್ತು ಉದ್ರಿಕ್ತ ವಾತಾವರಣ ಉಂಟಾಗಿತ್ತು. ಈಸಂಬಂಧ 32 ಸಾರಿಗೆ ನೌಕರರನ್ನು ಬಂಧಿಸಿದ್ದು, ಎಲ್ಲರಮೇಲೂ ಕೇಸು ದಾಖಲು ಮಾಡಿಕೊಳ್ಳಲಾಗಿದೆ. ಲಾಠಿಪ್ರಹಾರದಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗುಂಪು ಚದುರಿಸಲು ಲಾಠಿ ಚಾರ್ಜ್‌: ಸಾರಿಗೆ ನೌಕರರುತಮ್ಮ ಹಲವಾರು ಬೇಡಿಕೆಗಳನ್ನಿಟ್ಟುಕೊಂಡು ಕಳೆದ 14ದಿವಸಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದು, ಮಂಗಳವಾರ ಜೈಲ್‌ ಭರೋ ಚಳುವಳಿಯನ್ನು ಹಮ್ಮಿಕೊಳ್ಳಲಾಗಿತ್ತು. ನೌಕರರು ಪ್ರತಿಭಟನೆ ನಡೆಸಲು ಅವಕಾಶಇರುವುದಿಲ್ಲ. ಈಗಾಗಲೇ 144 ಸೆಕ್ಷನ್‌ ರೀತಿಯಲ್ಲಿನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರೂ,ಗ್ರಾಮಾಂತರ ಪೊಲೀಸ್‌ ಠಾಣೆ ಎದುರು ನೌಕರರುಜಗ್ಗದೆ ಘೋಷಣೆಗಳನ್ನು ಕೂಗಿದ್ದರಿಂದ ಗುಂಪನ್ನುಚದುರಿಸಲು ಪೋಲಿಸರು ಲಾಠಿ ಪ್ರಹಾರ ನಡೆಸಿದರು.

ಸಂಗೊಂಡಹಳ್ಳಿ ಬಳಿ ನೌಕರರ ಗುಂಪು: ನಗರದಕೆಎಸ್‌ಆರ್‌ಟಿಸಿ ಡಿಪೋ ಮುಂದೆ ನೌಕರರು ಪ್ರತಿಭಟನೆನಡೆಸುತ್ತಾರೆ ಎಂದು ಪೊಲೀಸರುಜಮಾವಣೆಗೊಂಡಿದ್ದರು. ಇದನ್ನು ಕಂಡ ಸಾರಿಗೆ ಸಂಸ್ಥೆನೌಕರರು ಚಿಕ್ಕಬಳ್ಳಾಪುರ ರಸ್ತೆಯ ಸಂಗೊಂಡಹಳ್ಳಿ ಬಳಿನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು.

ಮಾತಿನ ಚಕಮಕಿ: ವಿಷಯ ತಿಳಿದ ಪೊಲೀಸರು ಸ್ಥಳಕ್ಕೆಧಾವಿಸಿ ಪ್ರತಿಭಟನೆ ಮಾಡಲು ಅವಕಾಶವಿಲ್ಲ. ಎಲ್ಲರೂಮನೆಗೆ ಹೋಗಿ ಎಂದು ಎಚ್ಚರಿಕೆ ನೀಡಿದರು. ಇದಕ್ಕೆಒಪ್ಪದ ನೌಕರರು ಪ್ರತಿಭಟನೆ ನಡೆಸಲು ಮುಂದಾದರು,ಆಗ ಪೊಲೀಸರು 20 ಮಂದಿ ನೌಕರರನ್ನು ಬಂಧಿಸಿಜೀಪುಗಳನ್ನು ಗ್ರಾಮಾಂತರ ಪೊಲೀಸ್‌ ಠಾಣೆಗೆಕರೆತಂದರು.

ಈ ವೇಳೆ ಪೊಲೀಸರು ಮತ್ತು ನೌಕರರನಡುವೆ ಮಾತಿನ ಚಕಮಕಿ ನಡೆಯಿತು, ಪೊಲೀಸರುಗುಂಪನ್ನು ಚದುರಿಸಿದರು.

ನೌಕರರ ಬಿಡುಗಡೆಗೆ ಒತ್ತಾಯ: ನಂತರಬಂಧನಕ್ಕೊಳಗಾಗಿರುವ ನೌಕರರನ್ನು ಕೂಡಲೇ ಬಿಡುಗಡೆಮಾಡಬೇಕು ಎಂದು ಒತ್ತಾಯಿಸಿ, ಗ್ರಾಮಾಂತರಪೊಲೀಸ್‌ ಠಾಣೆ ಬಳಿ ಸಾರಿಗೆ ಸಂಸ್ಥೆಯ ನೂರಾರುನೌಕರರು ಜಮಾವಣೆಗೊಂಡರು. ನಾವು ನಮ್ಮಬೇಡಿಕೆಗಳ ಈಡೇರಿಕೆಗೋಸ್ಕರ ಪ್ರತಿಭಟನೆನಡೆಸುತ್ತಿದ್ದೇವೆ. ನಮ್ಮ ಬೇಡಿಕೆಗಳು ನ್ಯಾಯಯುತವಾಗಿವೆಎಂದು ಒತ್ತಾಯಿಸುತ್ತಾ ಘೋಷಣೆಗಳನ್ನು ಕೂಗಿದರು.ಇದೇ ವೇಳೆ ಪೊಲೀಸರೂ ಮೈಕ್‌ಗಳ ಮೂಲಕ ಸೆಕ್ಷನ್‌144 ಜಾರಿಗೊಳಿಸಲಾಗಿದೆ. ನೌಕರರು 4 ಮಂದಿಗಿಂತಹೆಚ್ಚಿಗೆ ಸೇರುವ ಹಾಗಿಲ್ಲ.

ಹೆಚ್ಚು ಜನ ಸೇರಿದರೆ ಕಾನೂನಿನರೀತಿಯಲ್ಲಿ ಕ್ರಮ ಜರುಗಿಸಬೇಕಾಗುತ್ತದೆ ಎಂಬ ಎಚ್ಚರಿಕೆನೀಡಿದರೂ ನೌಕರರು ಜಾಗಬಿಟ್ಟು ಕದಲಲಿಲ್ಲ.ನೌಕರರನ್ನು ಅಲ್ಲಿಂದ ಹೊರಡುವಂತೆ ತಳ್ಳಿದರೂಅವರು ಹಿಂದಕ್ಕೆ ಹೋಗಲಿಲ್ಲ, ಪೊಲೀಸ್‌ ಠಾಣೆ ಕಡೆಗೆನುಗ್ಗಿ ಬರುತ್ತಿದ್ದರು. ಈ ವೇಳೆ ನೌಕರರಿಗೂ ಪೋಲಿಸರನಡುವೆ ಮಾತಿನ ಚಕಮಕಿ ಉಂಟಾಯಿತಲ್ಲದೆ ನೂಕುನುಗ್ಗಲು ಉಂಟಾಗಿ ಉದ್ರಿಕ್ತ ವಾತಾವರಣಕ್ಕೆಕಾರಣವಾಯಿತು.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೋಲಿಸರುಹರಸಾಹಸಪಟ್ಟರು, ಈ ವೇಳೆ ಗುಂಪನ್ನು ಚದುರಿಸಲುಪೋಲಿಸರು ಲಾಠಿ ಪ್ರಹಾರ ನಡೆಸಿದರು.ನೌಕರರುಅಲ್ಲಿಂದ ಜಾಗ ಖಾಲಿ ಮಾಡಿದರು ಆಗ ಪರಿಸ್ಥಿತಿ ತಿಳಿಯಾಯಿತು. ಈ ಸಂಬಂಧ ಪೊಲೀಸರು 32 ಮಂದಿನೌಕರರ ಮೇಲೆ ಕೇಸು ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.