ಎಸ್ಸೆಸ್ಸೆಲ್ಸಿ ಉರ್ದು ಮಾಧ್ಯಮ ಫ‌ಲಿತಾಂಶ ಹೆಚ್ಚಿಸಿ 


Team Udayavani, Feb 13, 2019, 7:28 AM IST

urdu.jpg

ಕೋಲಾರ: ಉರ್ದು ಮಾಧ್ಯಮದಲ್ಲಿನ ಫಲಿತಾಂಶ ಕುಸಿತ ಇಡೀ ಜಿಲ್ಲೆಯ ಒಟ್ಟಾರೆ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದ್ದು, ಇದನ್ನು ಸರಿಪಡಿಸಲು ಕ್ರಮವಹಿಸದಿದ್ದರೆ ಶಿಸ್ತು ಕ್ರಮ ಎದುರಿಸಬೇಕಾದೀತು ಎಂದು ಜಿಪಂ ಸಿಇಒ ಜಿ.ಜಗದೀಶ್‌ ಶಾಲೆಗಳ ಮುಖ್ಯ ಶಿಕ್ಷಕರಿಗೆ ಎಚ್ಚರಿಕೆ ನೀಡಿದರು. ತಮ್ಮ ಕಚೇರಿಯಲ್ಲಿ ಉರ್ದು ಪ್ರಥಮ ಭಾಷೆ ಹೊಂದಿರುವ ವಿದ್ಯಾರ್ಥಿಗಳಿಗಾಗಿ “ನನ್ನನ್ನೊಮ್ಮೆ ಗಮನಿಸಿ’ ಮಾದರಿ ಪ್ರಶ್ನೆಕೋಠಿ ಬಿಡುಗಡೆ ಮಾಡಿ  ಮಾತನಾಡಿದರು.

ಜಿಲ್ಲೆಯ ಪದವಿ ಪೂರ್ವ ಕಾಲೇಜು ಸೇರಿದಂತೆ ಪ್ರಥಮ ಭಾಷೆ ಉರ್ದು ಇರುವ 27 ಶಾಲೆ ಜಿಲ್ಲೆಯಲ್ಲಿದ್ದು, ಫಲಿತಾಂಶ ಉತ್ತಮ ಪಡಿಸುವ ನಿಟ್ಟಿನಲ್ಲಿ ಗಮನಹರಿಸುವ ಅಗತ್ಯವಿದೆ ಎಂದು ತಿಳಿಸಿದರು.ಕಳೆದ ಹಲವು ವರ್ಷಗಳ ಫಲಿತಾಂಶ ಗಮನಿಸಿದಾಗ ಪದವಿ ಪೂರ್ವ ಕಾಲೇಜುಗಳ ಫಲಿತಾಂಶ ಕಡಿಮೆ ಬಂದಿರುವುದು ಇಡೀ ಜಿಲ್ಲೆಯ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ.

ಇದನ್ನು ಸರಿಪಡಿಸಲು ಈಗಾಗಲೇ ಸ್ವತಃ ನಾನೇ ಜೂನಿಯರ್‌ ಕಾಲೇಜುಗಳ ಉಪಪ್ರಾಂಶುಪಾಲರ ಸಭೆ ನಡೆಸಿದ್ದೇನೆಂದರು. ಡಿಡಿಪಿಇ ಕೆ.ರತ್ನಯ್ಯ, ಈಗಾಗಲೇ ಜೂನಿಯರ್‌ ಕಾಲೇಜುಗಳ ಫಲಿತಾಂಶ ಕುಸಿತ ತಪ್ಪಿಸಲು ಪ್ರತಿ ಸಂಸ್ಥೆಗೂ ಓರ್ವ ನೋಡೆಲ್‌ ಅಧಿ ಕಾರಿಯನ್ನು ನೇಮಿಸಲಾಗಿದೆ. ಅಲ್ಲಿ ಕಲಿಕೆ ದೃಢೀಕರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ನಿರಂತರವಾಗಿ ಪರಿಶೀಲನೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಈಗಾಗಲೇ ವರ್ಕ್‌ಶೀಟ್‌ ಮತ್ತು ಆರು ಸೆಟ್‌ ಪ್ರಶ್ನೆಪತ್ರಿಕೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕಟ್ಟಪ್ಪಣೆ ಮಾಡಲಾಗಿದೆ. ಮಕ್ಕಳಿಗೆ ಪುಸ್ತಕ ಕೊಟ್ಟು ಬರೆಸಿದ ನಂತರ ಅದೇ ಪ್ರಶ್ನೆಪತ್ರಿಕೆ ನೋಡದೇ ಉತ್ತರಿಸಲು ಅವಕಾಶ ನೀಡುವಂತೆ ತಿಳಿಸಲಾಗಿದೆ ಎಂದು ತಿಳಿಸಿದರು.

ಪರೀಕ್ಷಾ ನೋಡೆಲ್‌ ಅ ಧಿಕಾರಿ ಎ.ಎನ್‌.ನಾಗೇಂದ್ರಪ್ರಸಾದ್‌, ಉರ್ದು ಪ್ರಥಮ ಭಾಷೆ ಇರುವ ಮಕ್ಕಳು ತೃತೀಯ ಭಾಷೆ ಕನ್ನಡದಲ್ಲೇ ಅತಿ ಹೆಚ್ಚು ಅನುತ್ತೀರ್ಣಗೊಳ್ಳುತ್ತಿದ್ದಾರೆ, ಇದು ಒಟ್ಟಾರೆ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು. ಈ ವೇಳೆ ಈ ಬಾರಿ “ನನ್ನನ್ನೊಮ್ಮೆ ಗಮನಿಸಿ’ಮಾದರಿ ಪ್ರಶ್ನೆಕೋಠಿಯನ್ನು ಉರ್ದು ಪ್ರಥಮಭಾಷೆ, ಕನ್ನಡ ತೃತೀಯ ಭಾಷೆ ಇರುವಂತೆ ಸಿದ್ಧಗೊಳಿಸಿ ಒದಗಿಸಲಾಗಿದೆ ಎಂದರು.

ಉರ್ದು ಪ್ರಥಮ ಭಾಷೆ ಇರುವ ಮಕ್ಕಳು ಈ ಬಾರಿ ತೃತೀಯ ಭಾಷೆ ಕನ್ನಡದಲ್ಲಿ ಅನುತ್ತೀರ್ಣರಾಗದಂತೆ ಕ್ರಮವಹಿಸಿ, ಅವರಿಗೆ ಮಾದರಿ ಪ್ರಶ್ನೆಕೋಠಿ ನೀಡಿ ಬರೆಸಿ ಕಲಿಕೆ ದೃಢೀಕರಣಗೊಳಿಸಿಕೊಳ್ಳಲು ಎಲ್ಲಾ ಉಪಪ್ರಾಂಶುಪಾಲರು ಮತ್ತು ಮುಖ್ಯ ಶಿಕ್ಷಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.