ಮೂಲ ಸೌಕರ್ಯ ಕಲ್ಪಿಸಲು ಒತ್ತಾಯ


Team Udayavani, Sep 30, 2019, 3:41 PM IST

kolar-tdy-2

ಮುಳಬಾಗಿಲು: ವಿವೇಕಾನಂದ ನಗರದ ಕಾಲೋನಿಗೆ ಕುಡಿಯುವ ನೀರು, ವಿದ್ಯುತ್‌, ರಸ್ತೆ, ಸಮುದಾಯ ಭವನ, ಸ್ಮಶಾನಕ್ಕೆ ಜಮೀನು ಮೀಸಲು ಸೇರಿ ಮೂಲ ಸೌಕರ್ಯ ಕಲ್ಪಿಸಬೇಕೆಂದು ದಲಿತ ಸಂಘರ್ಷ ಸಮಿತಿ ಮತ್ತು ಪರಶುರಾಮ ಸೇನೆ ಕಾರ್ಯಕರ್ತರು ಅಬಕಾರಿ ಸಚಿವ ಎಚ್‌.ನಾಗೇಶ್‌ಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪರಶುರಾಮಸೇನೆ ಸ್ಥಾಪಕ ಅಧ್ಯಕ್ಷ ಕೀಲುಹೊಳಲಿ ಸತೀಶ್‌, ನಗರದ ಹೊರವಲಯದ ವೀರಭದ್ರ ನಗರದ ಸರ್ವೆ ನಂಬರ್‌ 85ರಲ್ಲಿ 48 ನಿರಾಶ್ರಿತರಿಗೆ ನಿವೇಶನ ನೀಡಲಾಗಿದೆ. ಆದರೆ, ಮೂಲ ಸೌಕರ್ಯ ಒದಗಿಸಿಲ್ಲ ಎಂದರು.

ಲೇಔಟ್‌ ನೀಲನಕ್ಷೆಯಂತೆ ರಸ್ತೆ ಸಂಪರ್ಕ ಒದಗಿಸಿಕೊಡಬೇಕು, ಗುಣ ಮಟ್ಟದ ಕಾಮಗಾರಿ ನಡೆಸಿ ವಿದ್ಯುತ್‌ ಸಂಪರ್ಕ ಕಲ್ಪಿಸಿಕೊಡಬೇಕು, ಹಕ್ಕುಪತ್ರ ಗಳನ್ನು ನೀಡುವ ವೇಳೆ ಕೆಲವು ಹೆಸರುಗಳು ತಪ್ಪಾಗಿ ಬಂದಿದ್ದು, ಅವುಗಳನ್ನು ಸರಿಪಡಿಸಿ ತಿದ್ದುಪಡಿ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.  ದಸಂಸ (ಸಂಯೋಜಕ) ಜಿಲ್ಲಾ ಸಂಘಟನಾ ಸಂಯೋಜಕ ಮೆಕಾನಿಕ್‌ ಶ್ರೀನಿವಾಸ್‌ ಮಾತನಾಡಿ, ನಿವೇಶನದ ಪಕ್ಕದಲ್ಲಿ ಸರ್ಕಾರಿ ಜಮೀನನನ್ನು ಸ್ಮಶಾನಕ್ಕೆ ನೀಡುವಂತೆ ಮನವಿ ಮಾಡಿದರು.

ಗುಜ್ಜಮಾರಂಡಹಳ್ಳಿ ಜಗದೀಶ್‌, ಪರಶುರಾಮ ಸೇನೆಯ ಗಣೇಶಪಾಳ್ಯ ಕಿಟ್ಟಿ, ಮಧು, ಬಾಚಮಾಕನಹಳ್ಳಿ ವಿಜಿ, ಹರೀಶ್‌, ಬಲ್ಲ ಸೋಮ, ಪೂಲ್‌ ಅಶ್ವತ್ಥ್, ದಸಂಸ ಜಿಲ್ಲಾ ಸಮಿತಿಯ ಕೆ.ಆರ್‌. ಮುನಿಯಪ್ಪ, ಎಚ್‌.ವೆಂಕಟರಾಮಪ್ಪ, ತಾಲೂಕು ಸಂಚಾಲಕ ಎನ್‌. ವೆಂಕಟರಾಮಪ್ಪ, ಸಲಹಾ ಸಮಿತಿಯ ಎಂ.ಸುಬ್ರಮಣ್ಯಂ, ತಾಲೂಕು ಸಂಘಟನಾ ಸಂಚಾಲಕ ಬಿ.ಎಸ್‌. ಮುನಿಶಾಮಿ, ಎಂ.ರಾಜಪ್ಪ, ಜಿ.ಗಂಗಾಧರ್‌, ಕುಪ್ಪಣ್ಣ, ಟಿ.ಎಂ.ಕೃಷ್ಣಪ್ಪ, ಎಸ್‌.ರಾಜಣ್ಣ, ಎನ್‌.ವೆಂಕಟೇಶ್‌, ಬಿ.ಆರ್‌.ಮಂಜು, ಮುನಿರತ್ನಂ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.