ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಿ

20 ರಿಂದ 80 ಸಾವಿರ ರೂ.ವರೆಗೂ ಬೆಳೆ ವಿಮೆಗೆ ಅವಕಾಶ: ಜಿಲ್ಲಾಧಿಕಾರಿ ಮಂಜುನಾಥ್‌

Team Udayavani, May 4, 2019, 10:43 AM IST

kolar-tdy-5..

ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ತೋಟಗಾರಿಕೆ ಇಲಾಖೆ ಮತ್ತು ವಿಮಾ ಕಂಪನಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಡೀಸಿ ಮಂಜುನಾಥ್‌ ಮಾತನಾಡಿದರು.

ಕೋಲಾರ: ರೈತರು ತಮ್ಮ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಿದರೆ 20 ರಿಂದ 80 ಸಾವಿರ ರೂ.ವರೆಗೆ ನಷ್ಟ ಪರಿಹಾರ ಪಡೆದುಕೊಳ್ಳಲು ಅವಕಾಶವಿದೆ. ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಸಲಹೆ ನೀಡಿದರು.

ನಗರದಲ್ಲಿನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ತೋಟಗಾರಿಕೆ ಇಲಾಖೆ ಮತ್ತು ವಿಮಾ ಕಂಪನಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ವಿಮೆ ಸಂಬಂಧ ರೈತರು ತಪ್ಪದೇ ಸಮೀಪದ ಬ್ಯಾಂಕ್‌ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

2016ನೇ ಸಾಲಿನಿಂದ ವಿಮೆ ಸೌಲಭ್ಯವನ್ನು ಇಲಾಖೆಯಿಂದ ತೋಟಗಾರಿಕೆ ಬೆಳೆಗಳಿಗೆ ಕಲ್ಪಿಸಲಾಗಿದೆ. 16-17ನೇ ಸಾಲಿನಲ್ಲಿ 3599, 17-18ನೇ ಸಾಲಿನಲ್ಲಿ 1500, 18-19ನೇ ಸಾಲಿನಲ್ಲಿ 2100 ಮಂದಿ ಮಾತ್ರವೇ ನೋಂದಣಿ ಮಾಡಿಸಿಕೊಂಡು ಪರಿಹಾರ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

12 ಸಾವಿರ ರೈತರ ನೋಂದಣಿ ಗುರಿ: ಪ್ರತಿ ಹೆಕ್ಟೇರ್‌ ಬೆಳೆಗೆ ವಿಮೆ 3.5 ಸಾವಿರ ರೂ.ಗಳಿದ್ದು, ಜಿಲ್ಲೆಯಲ್ಲಿ 60 ಸಾವಿರಕ್ಕೂ ಅಧಿಕ ತೋಟಗಾರಿಕೆ ಬೆಳೆಗಾರರಿದ್ದಾರೆ. ಹೀಗಾಗಿ ತಮ್ಮ ಸಮೀಪದ ಬ್ಯಾಂಕ್‌ಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದರಿಂದ ಅನುಕೂಲವಾಗಲಿರುವುದಾಗಿ ಹೇಳಿದ ಅವರು, ಈ ಸಾಲಿನಲ್ಲಿ ಕನಿಷ್ಠ 12 ಸಾವಿರಕ್ಕೂ ಹೆಚ್ಚು ಮಂದಿಯನ್ನು ನೋಂದಣಿ ಮಾಡಿಸುವ ಗುರಿ ಹೊಂದಿರುವುದಾಗಿ ತಿಳಿಸಿದರು.

ಹವಾಮಾನ ವೈಫರೀತ್ಯಕ್ಕೆ ಸಂಬಂಧಿಸಿದಂತೆ ಬೆಳೆ ಹಾನಿಯಾದರೆ ವಿಮೆ ಯೋಜನೆಯ ಮೂಲಕ ನಷ್ಟ ಪರಿಹಾರವನ್ನು ನೀಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದಕ್ಕಾಗಿ 4 ರೀತಿಯ ವರ್ಗಗಳಲ್ಲಿ ಹಾನಿಯನ್ನು ಪರಿಗಣಿಸಲಾಗುತ್ತಿದೆ ಎಂದು ಹೇಳಿದರು.

ವಿಶೇಷವಾಗಿ ಇದರಲ್ಲಿ ಹೆಚ್ಚಾಗಿ ಮಾವು ಬೆಳೆಗೆ ಅನ್ವಯವಾಗಿದ್ದು, ಜೂನ್‌ನಿಂದ ಆಗಸ್ಟ್‌, ಸೆಪ್ಟೆಂಬರ್‌ವರೆಗೆ ಮಳೆಯ ಮೂಲಕ ಪರಿಗಣಿಸಲಾಗುವುದು, ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗೆ ರೋಗಗಳ ಮೂಲಕ, ಆ ಬಳಿಕ ಹೂಗಳು ಬಿಡುವ ಸಂದರ್ಭದಲ್ಲಿ ಆಗುವ ಸಮಸ್ಯೆ ಮತ್ತು ಏಪ್ರಿಲ್ ತಿಂಗಳವರೆಗೆ ಮತ್ತೆ ಮಳೆಯನ್ನು ಆಧರಿಸಿ ನಷ್ಟವನ್ನು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.

ಸದ್ಬಳಕೆ ಮಾಡಿಕೊಳ್ಳಿ: ನೋಂದಣಿ ಮಾಡಿಸಿಕೊಳ್ಳದವರಿಗೆ ಕೇವಲ 18 ಸಾವಿರ ರೂ. ಸಹಾಯಧನ ಮಾತ್ರವೇ ನೀಡಲಾಗುತ್ತದೆ. 3,500 ರೂ. ನೀಡಿ ನೋಂದಣಿ ಮಾಡಿಸಿದರೆ ಕನಿಷ್ಠ 20 ಸಾವಿರ ರೂ.ನಿಂದ 80 ಸಾವಿರ ರೂ.ವರೆಗೆ ವಿಮೆ ಪಡೆದುಕೊಳ್ಳಬಹುದಾಗಿದೆ. ಹೀಗಾಗಿ ಯೋಜನೆ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೋರಿದರು.

ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಮಾತನಾಡಿ, ವಿಮೆ ಯೋಜನೆಯಿಂದಾಗುವ ಸೌಲಭ್ಯಗಳನ್ನುಪವರ್‌ ಪಾಯಿಂಟ್ ಪ್ರಸೆಂಟೇಶನ್‌ ಮೂಲಕ ವಿವರಿಸಿದರು.

ಸೌಲಭ್ಯ ವಂಚನೆ: ಪ್ರಗತಿಪರ ರೈತ ನೆನುಮನಹಳ್ಳಿ ಚಂದ್ರಶೇಖರ್‌ ಮಾತನಾಡಿ, ವಿಮೆ ಯೋಜನೆಯ ಆರಂಭದಲ್ಲಿ ರೈತರಿಗೆ ಇಲ್ಲಸಲ್ಲದ ಆಸೆಗಳನ್ನು ಹೇಳುತ್ತಾರೆ. ಆನಂತರ ಸರಿಯಾದ ಸೌಲಭ್ಯಗಳನ್ನು ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಗಮನಕ್ಕೆ ತಂದರು.

ತಾರತಮ್ಯಗಳ ಮೂಲಕ ರೈತರನ್ನು ವಂಚಿಸಲಾಗುತ್ತಿದ್ದು, ಯಾವುದೇ ರೀತಿಯಲ್ಲದರೂ ಸರಿಯಾಗಿ ಪರಿಹಾರವನ್ನು ಕಲ್ಪಿಸಬೇಕು ಹಾಗೂ 3500 ರೂ. ಇರುವ ಪ್ರೀಮಿಯಂ ಹಣವನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಜಿಪಂ ಸಿಇಒ ಜಿ.ಜಗದೀಶ್‌, ಎಡಿಸಿ ಎಚ್.ಪುಷ್ಪಲತಾ ಮತ್ತಿತರರ ಅಕಾರಿಗಳು ಉಪಸ್ಥಿತರಿದ್ದರು.

ಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ:

ಕೃಷಿ ಭಾಗ್ಯ ತೋಟಗಾರಿಕೆ ಯೋಜನೆಯಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾರ್ಯಕ್ರಮಗಳಿಗೆ ಮಂಜೂರಾತಿ ದೊರೆತಿದ್ದು, ಆಸಕ್ತ ರೈತರು ಮೇ 31ರವರೆಗೆ ತೋಟಗಾರಿಕೆ ಇಲಾಖೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಕೋಲಾರ ಜಿಲ್ಲೆಗೆ ಕೃಷಿ ಭಾಗ್ಯ ಯೋಜನೆಯಡಿ ಪಾಲಿಮನೆ, ಮಳೆ ನೀರು ಸಂಗ್ರಹಣಾ ಘಟಕ, ಡೀಸಲ್, ಸೋಲಾರ್‌, ಪಂಪ್‌ ಸೆಂಟ್, ಅಧಿಕ ಮೌಲ್ಯದ ಬೆಳೆಗಳಿಗೆ ತೋಟಗಾರಿಕೆ ಇಲಾಖೆ ವತಿಯಿಂದ ಸಹಾಯಧನ ನೀಡಲಾಗುವುದು. ರೈತರು ತಾಲೂಕು ಮಟ್ಟದ ತೋಟಗಾರಿಕೆ ಇಲಾಖೆ ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಮೇ 31ರೊಳಗೆ ಮೂಲ ದಾಖಲಾತಿಗಳೊಂದಿಗೆ ಆಯಾ ತಾಲೂಕು ಮಟ್ಟದ ತೋಟಗಾರಿಕೆ ಕಚೇರಿಗೆ ಸಲ್ಲಿಸಲು ಕೋರಿದೆ ಹಾಗೂ ತಾಲೂಕು ಮಟ್ಟದ ಗುರಿಗಿಂತ ಹೆಚ್ಚಿನ ಅರ್ಹ ಅರ್ಜಿಗಳನ್ನು ಸ್ವೀಕೃತ ವಾದಲ್ಲಿ ಲಾಟರಿ ಮೂಲಕ ಗುರಿಗೆ ಅನುಗುಣವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಉಳಿದ ಅರ್ಜಿಗಳನ್ನು ಲಾಟರಿ ಮೂಲಕವೇ ಜೇಷ್ಠ ತೆಯ ಆಧಾರದ ಮೇಲೆ ಪಟ್ಟಿ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪ ನಿರ್ದೇಶಕರು, ಕೋಲಾರ ಇವರ ದೂ.ಸಂ.9448999215 ಇವರನ್ನು ತಾಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಹಾಗೂ ಸ್ಥಳೀಯ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರ, ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.