ಜೆಡಿಎಸ್‌ಗೆ ಅಧಿಕಾರ ನೀಡಿದರೆ ಸೌಲಭ್ಯಕ್ಕೆ ಆದ್ಯತೆ


Team Udayavani, Apr 25, 2022, 2:51 PM IST

Untitled-1

ಬೇತಮಂಗಲ: ಮುಂಬರುವ 2023ರ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಸಂಪೂರ್ಣ ಅಧಿಕಾರ ನೀಡಿ, ಕುಮಾರಸ್ವಾಮಿ ಅವರ ಕೈ ಬಲಪಡಿಸಿದರೆ ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಮೂಲ ಸೌಲಭ್ಯಕ್ಕೆ ಆದ್ಯತೆ ನೀಡಲಾಗುತ್ತದೆ ಎಂದು ಎಂಎಲ್‌ಸಿ ಇಂಚರ ಗೋವಿಂದ ರಾಜು ಹೇಳಿದರು.

ಪಟ್ಟಣದ ಬಳಿಯ ಬಡಮಾಕನಹಳ್ಳಿ ಗ್ರಾಮದಲ್ಲಿ ಬೇತಮಂಗಲ ಗ್ರಾಮಾಂತರ ಅಧ್ಯಕ್ಷ ರಮೇಶ್‌ ಬಾಬು ನೇತೃತ್ವದಲ್ಲಿ ಜನತಾ ಜಲಧಾರೆ ಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ರಾಜ್ಯದ ಪ್ರತಿ ಹಳ್ಳಿಗೂ ನೀರು ಕಲ್ಪಿಸುವ ಉದ್ದೇಶವನ್ನು ಮಾಜಿ ಸಿಎಂ ಕುಮಾರಸ್ವಾಮಿ ಹೊಂದಿದ್ದು, ಜಲ ಸಂಪನ್ಮೂಲಗಳನ್ನು ಕಾರ್ಯರೂಪಕ್ಕೆ ಕಾನೂನಾತ್ಮಕವಾಗಿ ನದಿಗಳ ಜೋಡಣೆ, ನದಿ ನಾಲೆಗಳ ಪುನಶ್ವೇತನಗೊಳಿಸಲು ಪ್ರತಿ ವರ್ಷಕ್ಕೆ 2.50 ಲಕ್ಷ ಕೋಟಿ ರೂ., ಹಣ ಮೀಸಲಿಡಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌-ಬಿಜೆಪಿ ಎರಡೂ ಪಕ್ಷಗಳಿಗೂ ಬದ್ಧತೆಯಿಲ್ಲ. ಕೇವಲ ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತವೆ. ಆದರೆ, ರೈತರ, ಬಡವರ ಪರ ಕಾಳಜಿಯುಳ್ಳ ಪಕ್ಷ ಜೆಡಿಎಸ್‌ ಆಗಿದೆ. ಮುಂಭರುವ 2023ರ ಚುನಾವಣೆಯಲ್ಲಿ ಸಂಪೂರ್ಣ ಬೆಂಬಲ ನೀಡಬೇಕು. ಮೈತ್ರಿ ಸರ್ಕಾರದ ಅವಧಿಯಲ್ಲಿ 20 ಸಾವಿರ ಕೋಟಿ ರೂ., ರೈತರ ಸಾಲಮನ್ನಾ ಮಾಡಿದ್ದಾರೆ ಎಂದು ತಿಳಿಸಿದರು.

ನೀರಿನ ಯೋಜನೆ ಅನುಷ್ಠಾನಕ್ಕೆ ಯಾತ್ರೆ: ಸಮಾಜ ಸೇವಕ ಹಾಗೂ ಜೆಡಿಎಸ್‌ ಮುಖಂಡ ಸಿಎಂಆರ್‌ ಶ್ರೀನಾಥ್‌ ಮಾತನಾಡಿ, ರಾಜ್ಯದ ಜನರಿಗೆ ಶುದ್ಧ ಕುಡಿಯುವ ನೀರು ಪೊರೈಸುವ ಯೋಜನೆ ಅನುಷ್ಠಾನಗೊಳಿಸಲು 180 ವಿಧಾನ ಸಭಾ ಕ್ಷೇತ್ರಗಳಲ್ಲಿ ಜನತಾ ಜಲಧಾರೆ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಕುಮಾರ ಸ್ವಾಮಿ ಅವರಿಗೆ ಮಾತ್ರ ಜನರ ಕಷ್ಟ-ಸುಖದ ಬಗ್ಗೆ ಗೊತ್ತಿದೆ. ಕಾರ್ಯಕರ್ತರು ಸಂಘಟಿತರಾಗಿ, ಕುಮಾರಸ್ವಾಮಿ ಕೈ ಬಲಪಡಿಸಿದರೆ ಮಾತ್ರ ಸಂವೃದ್ಧಿ ಸರ್ಕಾರ ರಚನೆಯಾಗಲಿದೆ. ಕೆಜಿಎಫ್ ಕ್ಷೇತ್ರಕ್ಕೆ ಶೀಘ್ರದಲ್ಲೇ ಹೊಸ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಚರ್ಚೆ ಮಾಡುತ್ತೇವೆ ಎಂದರು.

ಬಡಮಾಕನಹಳ್ಳಿಯಿಂದ ಬೇತಮಂಗಲ, ಗುಟ್ಟಹಳ್ಳಿ, ಸುಂದರಪಾಳ್ಯ, ರಾಮಸಾಗರ, ಕ್ಯಾಸಂಬಳ್ಳಿ ಮೂಲಕ ಕೆಜಿಎಫ್ ನಗರ ನಂತರ ಬಂಗಾರಪೇಟೆಗೆ ಜನತಾ ಜಲಧಾರೆ ಯಾತ್ರೆ ಸೇರಿತು. ಬಡಮಾಕನಹಳ್ಳಿಯಿಂದ ಇಡೀ ಕೆಜಿಎಫ್ ತಾಲೂಕಿನ ಜಲಧಾರೆ ಯಾತ್ರೆಯಲ್ಲಿ ಬೈಕ್‌ ರ್ಯಾಲಿ ನಡೆದಿದ್ದು, ಎಲ್ಲರ ಗಮನ ಸೆಳೆಯಿತು.

ಜೆಡಿಎಸ್‌ ಮುಖಂಡರಾದ ವಕ್ಕಲೇರಿ ರಾಮು, ಕಾರ್ಯದರ್ಶಿ ನಟರಾಜ್‌, ಸುರೇಶ್‌, ಕೆಜಿಎಫ್ ಘಟಕ ಅಧ್ಯಕ್ಷ ದಯಾನಂದ್‌, ಗ್ರಾಮಾಂತರ ಅಧ್ಯಕ್ಷ ರಮೇಶ್‌ ಬಾಬು, ಮುಖಂಡರಾದ ಯೋಗೇಶ್‌, ಸುರೇಂದ್ರ, ಆನಂದ್‌, ಕಾರಿ ರವಿ, ಶ್ರೀನಾಥ್‌, ಪ್ರವೀಣ್‌, ವಿಕ್ಕಿ, ಮಧು, ಚಲಪತಿ, ಚೌಡಪ್ಪ, ತಿಮ್ಮರಾಜು, ಎಂಜಿನಿಯರ್‌ ಭರತ್‌ ಹಾಗೂ ಕಾರ್ಯಕರ್ತರು, ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.