ಕೋಚ್‌ ಫ್ಯಾಕ್ಟರಿ ಬಗ್ಗೆ ಗಂಧ-ಗಾಳಿ ಗೊತ್ತಿಲ್ಲ


Team Udayavani, Feb 13, 2020, 3:00 AM IST

coach-factory

ಕೋಲಾರ: ಕೋಲಾರ, ರೈಲ್ವೆ ಕೋಚ್‌ ಫ್ಯಾಕ್ಟರಿ ವಿಚಾರದಲ್ಲಿ ಸಂಸದ ಎಸ್‌.ಮುನಿಸ್ವಾಮಿ ಮತ್ತು ಶಾಸಕ ಕೆ.ಶ್ರೀನಿವಾಸಗೌಡರಿಗೆ ಗಂಧ-ಗಾಳಿ ಗೊತ್ತಿಲ್ಲದೆ, ಕೇಂದ್ರ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ ವಿರುದ್ಧ ವೈಯುಕ್ತಿಕ ಹೇಳಿಕೆ ನೀಡುತ್ತಿರುವುದನ್ನು ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ಸೀತಿ ಹೊಸೂರು ಎನ್‌.ಮುರಳಿಗೌಡ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಸದ ಎಸ್‌.ಮುನಿಸ್ವಾಮಿ ಸಂಸದರಾಗಿದ್ದರೂ ಇನ್ನೂ ಬಿಬಿಎಂಪಿ ಗುಂಗಿನಿಂದ ಹೊರಬರದೆ ರೈಲ್ವೆ ಕೋಚ್‌ ಫ್ಯಾಕ್ಟರಿ ವಿಚಾರದಲ್ಲಿ ತಿಳಿವಳಿಕೆ ಇಲ್ಲದೆ ಮಾತನಾಡುತ್ತಿದ್ದಾರೆ.

ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ್‌ಅಂಗಡಿ ಅವರು, ಯಾವುದೇ ಕಾರಣಕ್ಕೂ ಶ್ರೀನಿವಾಸಪುರದಲ್ಲಿ ರೈಲ್ವೆ ಕೋಚ್‌ ಫ್ಯಾಕ್ಟರಿ ನಿರ್ಮಾಣದಿಂದ ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲ, ಮೊದಲಿಗೆ ವರ್ಕ್‌ಶಾಪ್‌ ನಂತರ ರೈಲ್ವೆ ಕೋಚ್‌ ಫ್ಯಾಕ್ಟರಿ ಮಾಡುವುದಾಗಿ ಹೇಳಿಕೆಯನ್ನು ಕೊಟ್ಟಿದ್ದಾರೆ. ಆದರೆ, ಬಿಜೆಪಿ ಸಚಿವರ ಮಾತನ್ನು ನಂಬದ ಸಂಸದ ಎಸ್‌.ಮುನಿಸ್ವಾಮಿ ಯಾವುದೇ ಕಾರಣಕ್ಕೂ ರೈಲ್ವೆ ಕೋಚ್‌ ಫ್ಯಾಕ್ಟರಿ ಆಗೋದಿಲ್ಲ ಎಂದು ಹೇಳಿಕೆ ಕೊಡುವ ಮೂಲಕ ಅಭಿವೃದ್ಧಿಗೆ ವಿರೋಧಿಯಾಗಿದ್ದಾರೆ.

ವೈಯಕ್ತಿಕ ಸಾಧನೆ ಏನೂ ಇಲ್ಲ: ರೈಲ್ವೆ ಕೋಚ್‌ ಫ್ಯಾಕ್ಟರಿ ಯೋಜನೆ ಮುಂದಿಟ್ಟುಕೊಂಡು ಕೆ.ಎಚ್‌.ಮುನಿಯಪ್ಪ ಅವರು ರಿಯಲ್‌ ಎಸ್ಟೇಟ್‌ ಮಾಡುತ್ತಿದ್ದಾರೆ ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿಕೆ ನೀಡಿರುವುದು ಅವರ ಸಣ್ಣತನ ತೋರಿಸುತ್ತದೆ. ಬಿಬಿಎಂಪಿ ಸದಸ್ಯರಾಗಿ ಕಾಡುಗೋಡಿ ಕ್ಷೇತ್ರದ ವ್ಯಾಪ್ತಿಯಲ್ಲಿ ರಿಯಲ್‌ ಎಸ್ಟೇಟ್‌ ಕೆಲಸವನ್ನು ಮಾಡಿಕೊಂಡಿದ್ದ ವ್ಯಕ್ತಿ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕೆಲವು ಮುಖಂಡರ ತಪ್ಪು ನಿರ್ಧಾರದಿಂದ ಸಂಸದರಾಗಿದ್ದಾರೆಯೇ ವಿನಃ, ಅವರ ವೈಯುಕ್ತಿಕ ಸಾಧನೆ ಏನು ಇಲ್ಲ ಅನ್ನೋದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಡೀಸಿ ವರ್ಗಾವಣೆಗೆ ಒತ್ತಡ: ನಾನು ಅಭಿವೃದ್ಧಿ ಪರ ಎಂದು ಬೆನ್ನು ತಟ್ಟಿಕೊಳ್ಳುತ್ತಿರುವ ಸಂಸದ ಎಸ್‌.ಮುನಿಸ್ವಾಮಿ ಅವರು ಜಿಲ್ಲಾಧಿಕಾರಿ ಜೆ. ಮಂಜುನಾಥ್‌, ಜಿಲ್ಲಾ ರಕ್ಷಣಾಧಿಕಾರಿ ಅವರನ್ನು ವರ್ಗಾವಣೆ ಮಾಡಿಸುವುದಕ್ಕೆ ಮುಂದಾಗಿದ್ದು, ಈಗಾಗಲೆ ಬಹುತೇಕ ಶಾಸಕರು ಜಿಲ್ಲಾಧಿಕಾರಿ ಮಂಜುನಾಥ ಅವರ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸುತ್ತಿರುವಾಗ ಸಂಸದ ಎಸ್‌. ಮುನಿಸ್ವಾಮಿ ಮಾತ್ರ ವರ್ಗಾವಣೆ ಮಾಡಿಸಲೇಬೇಕೆಂದು ಮುಖ್ಯಮಂತ್ರಿ ಮೇಲೆ ಒತ್ತಡ ಹಾಕುತ್ತಿರುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ. ಇನ್ನೂ ಶಾಸಕ ಕೆ.ಶ್ರೀನಿವಾಸಗೌಡರು ಹಿರಿಯರು, ಅವರಿಗೆ ಕೆ.ಎಚ್‌.ಮುನಿಯಪ್ಪ ಅವರನ್ನು ನಾನೇ ಸೋಲಿಸಿದ್ದು ಅಂತೇಳಿಕೊಂಡು ಓಡಾಡುವುದು ದೊಡ್ಡ ಕೆಲಸವಾಗಿದೆ. ಆದರೆ, ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಆಗುತ್ತಿಲ್ಲ ಅನ್ನೋದನ್ನು ಮರೆತು ಮಾತನಾಡುತ್ತಿದ್ದಾರೆ.

ರಾಜಕೀಯ ಹೇಳಿಕೆ ಕೊಟ್ಟಿಲ್ಲ: ಕೆ.ಎಚ್‌.ಮುನಿಯಪ್ಪ ಅವರು ಎಲ್ಲಿಯೋ ಕೂಡ ರೈಲ್ವೆ ವರ್ಕ್‌ಶಾಪ್‌ ಬೇಡ ಎಂದು ಹೇಳಿಲ್ಲ, ಇದರ ಜೊತೆಗೆ ರೈಲ್ವೆ ಕೋಚ್‌ ಫ್ಯಾಕ್ಟರಿ ಆದರೆ, ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಆದ್ಯತೆ ಸಿಗುತ್ತದೆ. ಅದಕ್ಕಾಗಿ ಈ ಯೋಜನೆಯನ್ನು ಉಳಿಸಿಕೊಳ್ಳುವುದಕ್ಕೆ ಹೋರಾಟ ಮಾಡುವುದಾಗಿ ಹೇಳಿದ್ದಾರೆಯೇ ಹೊರತು? ಅವರ ರಾಜಕೀಯಕ್ಕಾಗಿ ಈ ಹೇಳಿಕೆಯನ್ನು ಕೊಟ್ಟಿಲ್ಲ.

ವಾಸ್ತಾವ ಅರಿತು ಮಾತನಾಡಿ: ಶಾಸಕ ಕೆ.ಶ್ರೀನಿವಾಸಗೌಡರು ಶಾಸಕರಾಗಿ ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂಬುದನ್ನು ಜನರ ಮುಂದೆ ಹೇಳಬೇಕು, ಇತ್ತೀಚಿನ ದಿನಗಳಲ್ಲಿ ತಾನು ಏನು ಮಾತನಾಡುತ್ತಿದ್ದೇನೆ ಎಂಬುದರ ಬಗ್ಗೆ ಅರಿವಿಲ್ಲದೆ ಬಾಯಿಗೆ ಬಂದಂತೆ ಹೇಳಿಕೆ ಕೊಡುತ್ತಿದ್ದಾರೆ. ಇನ್ನಾದರೂ ಅಭಿವೃದ್ಧಿ ವಿಚಾರದಲ್ಲಿ ವಾಸ್ತುವಾಂಶವನ್ನು ಅರಿತು ಮಾತನಾಡಲಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.