ಕಲಬುರಗಿ ಸಾಹಿತ್ಯ ಸಮ್ಮೇಳನ ದಿನಾಂಕ ಸೆ.29ರಂದು ನಿರ್ಧಾರ
Team Udayavani, Aug 18, 2019, 5:28 PM IST
ಕೋಲಾರ: ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಮುಂದಿನ ತಿಂಗಳು ಸೆಪ್ಟೆಂಬರ್ 29ರಂದು ನಡೆಯಲಿರುವ ಕಸಾಪ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರವಾಗಲಿದೆ.
ರವಿವಾರ ಕೋಲಾರದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಕಸಾಪ ಕೇಂದ್ರ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ನಡೆದ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಕಲಬುರಗಿಯಲ್ಲಿ ನಿಗದಿಯಾಗಿರುವ ಸಮ್ಮೇಳನದ ಕುರಿತಾಗಿ ಚರ್ಚಿಸಲಾಯಿತು.
ಚರ್ಚೆಯ ನಂತರ ಸಮ್ಮೇಳನದ ದಿನಾಂಕ ಬರುವ ಸೆಪ್ಟೆಂಬರ್ 29ರಂದು ಚಾಮರಾಜನಗರದಲ್ಲಿ ನಡೆಯಲಿರುವ ಕಸಾಪ ಮುಂದಿನ ಕಾರ್ಯಕಾರಿಣಿ ಸಭೆಯಲ್ಲಿ ಒಮ್ಮತದಿಂದ ಅಂತಿಮಗೊಳಿಸಲು ನಿರ್ಧರಿಸಲಾಯಿತು.
ಚಾಮರಾಜ ನಗರದಲ್ಲಿ ನಡೆಯಲಿರುವ ಕಸಾಪ ಕಾರ್ಯಕಾರಣಿಯಲ್ಲಿ ಸಮ್ಮೇಳನದ ದಿನಾಂಕ ಪ್ರಕಟಗೊಂಡ ನಂತರ ಕಲಬುರಗಿ ಸಾಹಿತ್ಯ ಸಮ್ಮೇಳನದ ಕಾರ್ಯ ಚಟುವಟಿಕೆಗಳು ಆರಂಭವಾಗಲಿವೆ.
85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡರಿಂದ ಮೂರು ಪೂರ್ವಭಾವಿ ಸಭೆಗಳು ನಡೆಯಬೇಕಿತ್ತು ಮತ್ತು ಸ್ವಾಗತ ಸಮಿತಿ ರಚನೆಯಾಗಿರಬೇಕಿತ್ತು. ಆದರೆ ರಾಜ್ಯ ರಾಜಕಾರಣದಲ್ಲಿ ರಾಜಕೀಯ ಸ್ಥಿತ್ಯಂತರಗಳು ನಡೆದ ಕಾರಣ ಮತ್ತು ಇತ್ತೀಚೆಗೆ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿರುವ ಕಾರಣ ಇದಕ್ಕೆ ಹಿನ್ನಡೆಯಾಗಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ