ಶ್ರದ್ಧಾಭಕ್ತಿಯ ದ್ರೌಪದಮ್ಮ ಹೂವಿನ ಕರಗ


Team Udayavani, May 11, 2019, 11:05 AM IST

k-2

ಮಾಸ್ತಿ: ಗ್ರಾಮದಲ್ಲಿ ಗುರುವಾರ ರಾತ್ರಿ ಪ್ರಸಿದ್ಧ ಧರ್ಮರಾಯ, ದ್ರೌಪದಮ್ಮ ಹೂವಿನ ಕರಗ ಮಹೋತ್ಸವ ಸಾವಿರಾರು ಭಕ್ತ ಸಮೂಹದ ನಡುವೆ ಶ್ರದ್ಧಾಭಕ್ತಿಯಿಂದ ನೆರವೇರಿತು.

ಗ್ರಾಮದಲ್ಲಿ 35 ವರ್ಷಗಳಿಂದ ವಹ್ನಿಕುಲ ಕ್ಷತ್ರಿಯ ಸಮಾಜದವರು ಕರಗ ಮಹೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ದೇವಾಲಯ ಜೀರ್ಣೋದ್ಧಾರ ಸಂಘದಿಂದ ಗುರುವಾರ ಮಧ್ಯ ರಾತ್ರಿ 12.30 ರಿಂದ ಶುಕ್ರವಾರ ಬೆಳಗ್ಗೆ 10 ಗಂಟೆವರೆಗೂ ಹೂವಿನ ಕರಗ ಮಹೋತ್ಸವ ನಡೆಯಿತು.

ಗುರುವಾರ ರಾತ್ರಿ ಹಲಗು ಸೇವೆ ಮುಗಿದ ನಂತರ ರಾತ್ರಿ ನಡೆದ ಕರಗಕ್ಕೆ ಸುಗಂಧ ಬೀರುವ ಮಲ್ಲಿಗೆ ಹೂವುಗಳಿಂದ ಸಿಂಗರಿಸಲಾಗಿತ್ತು. ಕರಗದ ಪೂಜಾರಿ ನಾರಾಯಣಸ್ವಾಮಿ ಕರಗ ಹೊತ್ತು ಮಧ್ಯರಾತ್ರಿ 12.30ಕ್ಕೆ ದೇವಾಲಯದಿಂದ ಮೊಣಕಾಲಿನಲ್ಲೇ ಕುಣಿಯುತ್ತಾ ಹೊರ ಬಂದರು. ಕರಗ ಹೊತ್ತ ಪೂಜಾರಿ ಬಲಗೈನಲ್ಲಿ ಕತ್ತಿ, ಎಡಗೈನಲ್ಲಿ ದಂಡ ಹಿಡಿದು, ಪೂಜಾರಿ ಗಂಟೆ ಸದ್ದು, ವೀರ ಕುಮಾರರ ಗೋವಿಂದ-ಗೋವಿಂದ ಎಂಬ ನಾಮಸ್ಮರಣೆ, ತಮಟೆ, ಮಂಗಳ ವಾದ್ಯಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದರು.

ಮಲ್ಲಿಗೆ ಹೂ ಚೆಲ್ಲಿ ಸ್ವಾಗತ: ಕರಗದ ಪ್ರಯುಕ್ತ ಗ್ರಾಮದ ಮಹಿಳೆಯರು ತಮ್ಮ ಮನೆಯ ಅಂಗಳವನ್ನು ನೀರಿನಿಂದ ಸ್ವಚ್ಛಗೊಳಿಸಿ ಬಣ್ಣ ಬಣ್ಣಗಳಿಂದ ರಂಗೋಲಿ ಬಿಡಿಸಿ ಕರಗವನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಕರಗಕ್ಕೆ ಮಲ್ಲಿಗೆ ಹೂವುಗಳನ್ನು ಚೆಲ್ಲಿ ಶ್ರದ್ಧಾ ಭಕ್ತಿಯಿಂದ ಪೂಜೆ ಸಲ್ಲಿಸಿ, ಹರಕೆ ತೀರಿಸಿದರು.

ತಮಿಳುನಾಡಿನಿಂದ ಭಕ್ತರು ಆಗಮನ: ಗ್ರಾಮದಲ್ಲಿ ಪ್ರತಿ ಮನೆಗಳಿಗೂ ತೆರಳಿ ಪೂಜೆ, ಮುಡಿಪು ಸ್ವೀಕರಿಸಿದ ಕರಗ ಪೂಜಾರಿ ಶುಕ್ರವಾರ ಬೆಳಗ್ಗೆ 10 ಗಂಟೆಗೆ ದೇವಾಲಯ ಪ್ರದಕ್ಷಣೆ ಹಾಕಿ, ಅಗ್ನಿಕುಂಡ ಪ್ರವೇಶಿಸಿದ ನಂತರ ದೇವಾಲಯ ಸೇರಿತು. ನಂತರ ವೀರಕುಮಾರರು ಅರಿಶಿಣ ನೀರನ್ನು ಎರಚಿಕೊಳ್ಳುವ ಮೂಲಕ ವಸಂತೋತ್ಸವ ಆಚರಿಸಿಕೊಂಡರು. ಕರಗ ವೀಕ್ಷಿಸಲು ಜಿಲ್ಲೆ, ನೆರೆಯ ತಮಿಳುನಾಡಿನ ಹಲವು ಗ್ರಾಮಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು.

ಹಲಗು ಸೇವೆ: ಕರಗದ ಪ್ರಯುಕ್ತ ಮಾಸ್ತಿ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಲಗು ಸೇವೆ ನಡೆಯಿತು. ಪೋತುಲ ರಾಜನ ವೀರಾ ವೇಷ ಹಾಗೂ ವೀರಕುಮಾರರು ಕತ್ತಿಗಳಿಂದ ತಮ್ಮ ಎದೆಗೆ ಹೊಡೆದುಕೊಳ್ಳುವುದು ಮೈ ನವಿರೇಳುವಂತೆ ಮಾಡಿತು.

ಶಾಸಕ ಕೆ.ವೈ.ನಂಜೇಗೌಡ, ಜಿಪಂ ಸದಸ್ಯ ಎಚ್.ವಿ.ಶ್ರೀನಿವಾಸ್‌ ಕರಗ ಹೊತ್ತ ನಾರಾಯಣಸ್ವಾಮಿಗೆ ಚಿನ್ನದ ಉಂಗುರ ಕೊಡುಗೆ ನೀಡಿದರು. ರಾಜ್ಯ ತಿಗಳ ಸಮಾಜದ ಸಂಘದ ಖಜಾಂಜಿ ಹೂಡಿ ವಿಜಯ್‌ಕುಮಾರ್‌, ಜಿಲ್ಲಾಧ್ಯಕ್ಷ ಉದಯ್‌ಕುಮಾರ್‌, ಗೌರವಾಧ್ಯಕ್ಷ ಎಂ.ಪಲ್ಲವಿ ಮಣಿ, ಕಾರ್ಯದರ್ಶಿ ಪಾಲ್ಗುಣ, ವಹ್ನಿಕುಲ ಕ್ಷತ್ರಿಯ ಸಂಘದ ಅಧ್ಯಕ್ಷ ಜಯರಾಜ್‌, ತಾಪಂ ಮಾಜಿ ಅಧ್ಯಕ್ಷ ಚಂದ್ರಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಟಿ.ಮುನಿಯಪ್ಪ, ಪುರಸಭಾ ಸದಸ್ಯ ಲಕ್ಷ್ಮೀನಾರಾಯಣ್‌, ಕೆಡಿಪಿ ಸದಸ್ಯ ವಿಜಯನರಸಿಂಹ, ಮುಖಂಡ ಆರ್‌.ಪ್ರಭಾಕರ್‌, ದೇವಾಲಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಎಂ.ಎನ್‌.ಪೆರುಮಾಳಪ್ಪ, ಉಪಾಧ್ಯಕ್ಷ ಈರಪ್ಪ, ಖಜಾಂಚಿ ಎಂ.ಸಿ.ವಿ.ಚಂದ್ರಪ್ಪ, ಕಾರ್ಯದರ್ಶಿಗಳಾದ ಎಂ.ನಾರಾಯಣಸ್ವಾಮಿ, ರಾಮಚಂದ್ರ, ಕುಲದ ಗೌಡರಾದ ಅಬ್ಬಪ್ಪ, ಮಂಜುನಾಥ್‌, ಯಜಮಾನ ವೆಂಕಟೇಶಪ್ಪ, ಕೋಲ್ಕಾರ್‌ ಗೋವಿಂದಪ್ಪ, ಭಾರತ ಪೂಜಾರಿ ಮುನಿಸ್ವಾಮಿ, ಗ್ರಾಪಂ ಅಧ್ಯಕ್ಷೆ ಸುಗುಣಮ್ಮ ಶ್ರೀನಿವಾಸ್‌, ಉಪಾಧ್ಯಕ್ಷ ಎಚ್.ವಿ.ಸತೀಶ್‌, ಸದಸ್ಯರು, ಹೋಬಳಿ, ತಾಲೂಕಿನ ಮುಖಂಡರು, ವಹ್ನಿಕುಲಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.