‘ಕರ್ನಾಟಕ ಒನ್‌’ ಕೇಂದ್ರ ಶೀಘ್ರ ಆರಂಭ

ನಾಮಫ‌ಲಕವಿದ್ರೂ ಒಂದೂವರೆ ವರ್ಷದಿಂದ ಸೇವೆಗಳು ಜನರಿಗೆ ಮರೀಚಿಕೆ

Team Udayavani, Jul 1, 2019, 11:19 AM IST

kolar-tdy-1..

ಕೋಲಾರ ನಗರದಲ್ಲಿ ಕರ್ನಾಟಕ ಒನ್‌ಸೇವೆಗೆ ಸಜ್ಜುಗೊಳಿಸುತ್ತಿರುವ ತೊಟ್ಟಿಬಾವಿ ನೀರು ಸರಬರಾಜು ಕೇಂದ್ರದ ಕಟ್ಟಡ.

ಕೋಲಾರ: ಅಂತೂ ಇಂತೂ ಕರ್ನಾಟಕ ಒನ್‌ ಸೇವೆಯನ್ನು ನಗರದ ಜನತೆಗೆ ಕಲ್ಪಿಸಲು ಜಿಲ್ಲಾಡಳಿತ ಮತ್ತು ನಗರಸಭೆ ಮುಂದಾಗಿದೆ.

ಒಂದೂವರೆ ವರ್ಷದ ಹಿಂದೆಯೇ ಜಿಲ್ಲಾಧಿಕಾರಿಗಳ ನಿವಾಸದ ಮುಂಭಾಗದ ತೊಟ್ಟಿ ಬಾವಿ ನೀರು ಪೂರೈಕೆ ಕೇಂದ್ರದ ಕಟ್ಟಡವೊಂದನ್ನು ‘ಕರ್ನಾಟಕ ಒನ್‌’ ಸೇವೆಗಳಿಗಾಗಿ ಪುನಶ್ಚೇಚನಗೊಳಿಸಿ ಸಿದ್ಧಪಡಿಸಲಾಗಿತ್ತು. ಆದರೆ, ಒಂದೂವರೆ ವರ್ಷಗಳಿಂದಲೂ ಕಟ್ಟಡ ಮುಂಭಾಗ ನಾಮಫ‌ಲಕ ಅಳವಡಿಸಲಾಯಿತಾದರೂ, ಯಾವುದೇ ಸೇವೆ ಜನತೆಗೆ ಲಭ್ಯವಾಗಲಿಲ್ಲ. ಈ ಕುರಿತು ಪತ್ರಿಕೆಗಳಲ್ಲಿ ವಿಶೇಷ ವರದಿಗಳು ಪ್ರಕಟವಾದರೂ ಜಿಲ್ಲಾಡಳಿತ ಮತ್ತು ನಗರಸಭೆ ಎಚ್ಚೆತ್ತುಕೊಂಡಿರಲಿಲ್ಲ.

ಮಧ್ಯದಲ್ಲಿ ಎದುರಾಗಿದ್ದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಿಂದ ಕರ್ನಾಟಕ ಒನ್‌ ಸೇವೆ ಕೋಲಾರ ಜನತೆಗೆ ಸಿಗುವಲ್ಲಿ ವಿಳಂಬವಾಗುತ್ತಿದೆ ಎಂಬ ನೆಪವನ್ನು ಹೇಳಲಾಗುತ್ತಿತ್ತು. ಆದರೆ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಸಾರ್ವಜನಿಕರಿಗೆ ಸಿಗುವಂತೆ ಮಾಡಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಕೊನೆಗೆ ಕೇಂದ್ರದ ಸೇವೆ ಜನತೆಗೆ ನೀಡಲು ಸ್ಥಳೀಯ ಆಡಳಿತ ಮುಂದಾಗಿದೆ.

ಸಲಕರಣೆಗಳ ಅಳವಡಿಕೆ: ಕರ್ನಾಟಕ ಒನ್‌ ಸೇವೆಯನ್ನು ಜುಲೈ 1 ರಿಂದ ಕೋಲಾರ ನಗರದ ಜನತೆಗೆ ಸಿಗುವಂತೆ ಮಾಡಲು ಅಧಿಕಾರಿಗಳ ತಂಡವೊಂದು ಒಂದು ವಾರದಿಂದಲೂ ಕಾರ್ಯೋನ್ಮುಖವಾಗಿದೆ.

ಕರ್ನಾಟಕ ಒನ್‌ ಕೇಂದ್ರಕ್ಕೆ ನಿಗದಿಪಡಿಸಿರುವ ಕೇಂದ್ರಕ್ಕೆ ಅಗತ್ಯವಿರುವ ಪೀಠೊಪಕರಣ, ಕಂಪ್ಯೂಟರ್‌ ಇತ್ಯಾದಿ ಸೇವೆ ಅಳವಡಿಸಲಾಗುತ್ತಿದೆ.

ಸಂಪರ್ಕ ಸೇವೆ ಅಳವಡಿಕೆ: ಕಟ್ಟಡ ಇರುವ ತೊಟ್ಟಿಬಾವಿ ಕೇಂದ್ರದ ಆವರಣವನ್ನು ಜೆಸಿಬಿ ಯಂತ್ರಗಳ ಮೂಲಕ ಸ್ವಚ್ಛಗೊಳಿಸಲಾಗುತ್ತಿದೆ. ಆದರೆ, ಕೇಂದ್ರ ಆರಂಭದ ಕುರಿತು ಯಾವುದೇ ಅಧಿಕೃತ ಪ್ರಕಟಣೆ ಜಿಲ್ಲಾಡಳಿತ ಹಾಗೂ ನಗರಸಭೆಯಿಂದ ಹೊರ ಬಿದ್ದಿಲ್ಲದಿರುವುದು ಅನುಮಾನಕ್ಕೆ ಎಡೆ ಮಾಡಿದೆ. ಆದರೂ, ಕೇಂದ್ರದ ಬೀಗ ತೆರೆದು ಕಂಪ್ಯೂಟರ್‌, ಇಂಟರ್‌ನೆಟ್ ಸೇವೆ, ಪೀಠೊಪಕರಣಗಳ ವ್ಯವಸ್ಥೆ ಇತ್ಯಾದಿ ಸೇವೆಗಳನ್ನು ಮಾಡಲಾಗುತ್ತಿರುವುದರಿಂದ ಕರ್ನಾಟಕ ಒನ್‌ಸೇವೆ ಶೀಘ್ರವೇ ಕೋಲಾರ ಜನತೆಗೆ ಸಿಗುತ್ತದೆಯೆಂದು ನಿರೀಕ್ಷಿಸಲಾಗುತ್ತಿದೆ.

ಇತ್ಯಾದಿ ಸೇವೆಗಳು: ಈಗಾಗಲೇ ಬೆಂಗಳೂರು ಸೇರಿ ವಿವಿಧ ಮಹಾನಗರ ಪಾಲಿಕೆ ಹಾಗೂ ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ಕರ್ನಾಟಕ ಒನ್‌ ಸೇವೆಯು ಆರಂಭವಾಗಿದ್ದು, ಈ ಕೇಂದ್ರದಲ್ಲಿ ಆಧಾರ್‌, ಪಡಿತರ ಚೀಟಿ, ಪಾಸ್‌ಪೋರ್ಟ್‌, ನಗರಸಭೆ ತೆರಿಗೆ ಪಾವತಿ, ಮೊಬೈಲ್ ರೀಚಾರ್ಜ್‌, ಕಂದಾಯ ಇಲಾಖೆಯ ಸೇವೆಗಳು, ಜಾತಿ, ಆದಾಯ ಪ್ರಮಾಣ ಪತ್ರಗಳ ಪಡೆಯುವಿಕೆ, ಇತ್ಯಾದಿ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.

ಸೇವಾ ನಾಮಫ‌ಲಕ ಸಿದ್ಧ: ಈಗಾಗಲೇ ಕೋಲಾರ ಕೇಂದ್ರದಲ್ಲಿ ಯಾವ್ಯಾವ ಸೇವೆ ನೀಡಲಾಗುತ್ತದೆಯೆಂಬ ಕುರಿತು ಮಾಹಿತಿ ಫ‌ಲಕವನ್ನು ಸಿದ್ಧಪಡಿಸಲಾಗುತ್ತಿದ್ದು, ಕೇಂದ್ರದಲ್ಲಿ ಅಳವಡಿಸಲಾಗಿದೆ. ಆದರೆ, ಕರ್ನಾಟಕ ಒನ್‌ ಸೇವೆ ಆರಂಭ ಕುರಿತಂತೆ ಅಧಿಕಾರಿಗಳು ಗುಟ್ಟಾಗಿಟ್ಟಿರುವ ರಹಸ್ಯವೇನು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಕರ್ನಾಟಕ ಒನ್‌ ಕೇಂದ್ರದಲ್ಲಿ ಹಾಲಿ ವ್ಯವಸ್ಥೆ ಮಾಡುತ್ತಿರುವ ವ್ಯಕ್ತಿಗಳು ತಮ್ಮದೇನಿದ್ದರೂ ತಾಂತ್ರಿಕ ಸೌಲಭ್ಯಗಳನ್ನು ಕಲ್ಪಿಸುವುದು ಮಾತ್ರವೇ ಆಗಿದ್ದು, ಹೆಚ್ಚಿನ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದಲೇ ಪಡೆದುಕೊಳ್ಳಬೇಕೆಂದು ಸೂಚಿಸುತ್ತಿದ್ದಾರೆ.

ಆದರೂ, ಕರ್ನಾಟಕ ಒನ್‌ ಸೇವೆ ಜಿಲ್ಲಾ ಕೇಂದ್ರದಲ್ಲಿ ಆರಂಭವಾಗಿ ಸಾರ್ವಜನಿಕರಿಗೆ ಸೇವೆ ಶೀಘ್ರವೇ ಪೂರ್ಣ ಪ್ರಮಾಣದಲ್ಲಿ ಸಿಗುವಂತಾಗಲಿ ಎಂದು ಜನರು ಆಶಿಸಿದ್ದಾರೆ.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.