ಮಾಲೂರು ಕೆರೆಗಳಿಗೂ ಕೆ.ಸಿ. ವ್ಯಾಲಿ ನೀರು ಭಾಗ್ಯ

ನೀರು ಹರಿಸುವ ಕಾರ್ಯಕ್ಕೆ ಶಾಸಕ ನಂಜೇಗೌಡ ಚಾಲನೆ

Team Udayavani, Jul 16, 2019, 12:47 PM IST

kolar-tdy-2..

ಮಾಲೂರು ತಾಲೂಕಿನ ಶಿವಾರಪಟ್ಟಣದ ಕೆರೆ ಕೆ.ಸಿ.ವ್ಯಾಲಿ ನೀರು ಹರಿದು ಬರುವ ಮುನ್ನ ದೊಡ್ಡ ಅಯ್ಯೂರು ಕೆರೆಗೆ ಬಂದ ಸೇರುತ್ತಿರುವ ಕೆ.ಸಿ.ವ್ಯಾಲಿ ನೀರು.

ಮಾಲೂರು: ತಾಲೂಕಿನ ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು ಹರಿಸದಿದ್ದಲ್ಲಿ ರಾಜೀನಾಮೆಗೆ ಸಿದ್ಧ ಎಂದಿದ್ದ ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ ಮಾತಿಗೆ ಮಣಿದ ರಾಜ್ಯ ಸರ್ಕಾರ, ನೀರು ಹರಿಸುವ ಕಾರ್ಯಕ್ಕೆ ಅನುಮತಿ ನೀಡಿದ್ದು, ಸೋಮವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ತಾಲೂಕಿನ ನರಸಾಪುರ ಕೆರೆಯಲ್ಲಿ ಅಳವಡಿಸಿರುವ ಪಂಪ್‌ ಮೂಲಕ ಒಂದು ಭಾಗವನ್ನು ಕೋಲಾರದ ಕಡೆಗೆ, ಇನ್ನೊಂದು ಭಾಗದಲ್ಲಿ ಮಾಲೂರು ತಾಲೂಕಿನ ಶಿವಾರಪಟ್ಟಣದ ಕೆರೆಗೆ ನೀರು ಹರಿಸಲು ಯೋಜನೆ ರೂಪಿಸಿ, ಕಳೆದ ವರ್ಷ ಯೋಜನೆ ಆರಂಭಿಸಿತ್ತು. ಕೋಲಾರ ಮತ್ತು ಬಂಗಾರಪೇಟೆ ಕಡೆಗೆ ಹರಿಯುವ ಪಂಪ್‌ಗೆ ಮಾತ್ರ ಚಾಲನೆ ನೀಡಲಾಗಿತ್ತು.

ಅಧಿಕೃತವಾಗಿ ಚಾಲನೆ: ಸರ್ಕಾರದ ಕ್ರಮದಿಂದ ಬೇಸತ್ತ ಶಾಸಕ ಕೆ.ವೈ.ನಂಜೇಗೌಡ, ರಾಜ್ಯ ರಾಜಕಾರಣದಲ್ಲಿನ ಶಾಸಕರ ರಾಜೀನಾಮೆ ಪರ್ವವನ್ನು ಬಳಕೆ ಮಾಡಿಕೊಂಡು ಮಾಲೂರು ತಾಲೂಕಿನ ಕೆರೆಗಳಿಗೆ ನೀರು ಹರಿಯದಿದ್ದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದರು. ಪರಿಣಾಮ ತಾಲೂಕಿನ ಶಿವಾರಪಟ್ಟಣದ ಕೆರೆಗೆ ನೀರು ಹರಿಸುವ ಪಂಪ್‌ಗೆ ಸೋಮವಾರ ಚಾಲನೆ ನೀಡಲಾಗಿದೆ.

40 ಎಂಎಲ್ಡಿ ನೀರು: ಈ ವೇಳೆ ಮಾತನಾಡಿದ ಶಾಸಕ ನಂಜೇಗೌಡ, 1300 ಕೋಟಿ ರೂ.ನಲ್ಲಿ ಕೆ.ಸಿ.ವ್ಯಾಲಿ ಯೋಜನೆ ರೂಪಿಸಿ ನೀರನ್ನು ತಾಲೂಕಿನ ಕೆರೆಗಳಿಗೆ ಹರಿಸಲು ಸರ್ಕಾರ ಅನುಮತಿ ನೀಡಿರುವುದು ಶ್ಲಾಘನೀಯ. ಯೋಜನೆಯಂತೆ ತಾಲೂಕಿನ ಕೆರೆಗಳಿಗೆ 100 ಎಂಎಲ್ಡಿ ನೀರು ಹರಿಸಬೇಕಾಗಿದ್ದು, ಈಗ 40 ಎಂಎಲ್ಡಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಅನುಮತಿ: ತಾಲೂಕಿನ ಕೆರೆಗಳಿಗೆ ನೀರು ಹರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಾಬೈರೇಗೌಡರಲ್ಲಿ ಮನವಿ ಮಾಡಿದ್ದೆ. ವಾರದಲ್ಲಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡುವ ವಿಶ್ವಾಸ ವ್ಯಕ್ತ ಪಡಿಸಿದ್ದರು. ಅನ್ಯಾಯವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸಿದ್ಧನಾಗಿರುವುದಾಗಿ ಹೇಳಿ ದ್ದರಿಂದ, ಅಂತಹ ಘಟನೆಗಳಿಗೆ ಅವಕಾಶ ನೀಡದೆ ಅನುಮತಿ ನೀಡಲಾಗಿದೆ ಎಂದು ಹೇಳಿದರು.

ಹಲವು ಕೆರೆಗಳಿಗೆ ನೀರು: ಸದ್ಯ ತಾಲೂಕಿನ ಕೆರೆಗಳಿಗೆ ಪೀಡರ್‌ ಚಾನಲ್ ಮೂಲಕ ನೀರು ಪಂಪ್‌ ಮಾಡಲು ಅನುಮತಿ ನೀಡಲಾಗಿದೆ. ಇದರಿಂದ ತಾಲೂಕಿನ ಶಿವಾರಪಟ್ಟಣದ ಕೆರೆಗೆ ಹೊಂದಿಕೊಂಡಿರುವ ದೊಡ್ಡಅಯ್ಯೂರು ಕೆರೆಗೆ ನೀರು ಹರಿದು ನಂತರ ರಾಜಕಾಲುವೆಯ ಮೂಲಕ ಶಿವಾರಪಟ್ಟಣದ ಕೆರೆಗೆ ಹರಿದು ಬರಲಿದೆ. ಇಲ್ಲಿಂದ ಭಾವನಹಳ್ಳಿ ಕೆರೆಗೆ ಪಂಪ್‌ಮಾಡಿ ತಾಲೂಕಿನ ತಂಬಿಹಳ್ಳಿ ಅಬ್ಬೇನಹಳ್ಳಿ, ಹಾರೋಹಳ್ಳಿ, ಮಾಲೂರು ಕೆರೆಗೆ ನೀರು ಹರಿಸಲಾಗುವುದು ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಟಿ.ಮುನಿಯಪ್ಪ, ಸಿ.ರಾಜಣ್ಣ, ನವೀನ್‌, ಮೈಲಾಂಡಹಳ್ಳಿ ನಾರಾಯಣಸ್ವಾಮಿ, ಸಂತೇಹಳ್ಳಿ ನಾರಾಯಣಸ್ವಾಮಿ, ಅಶ್ವತ್ಥ್ರೆಡ್ಡಿ, ಬಿ.ಆರ್‌.ಶ್ರೀನಿವಾಸ್‌, ಹರೀಶ್‌, ಎಂ.ಜಿ.ಮಧುಸೂದನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.