ಕೆ.ಸಿ.ವ್ಯಾಲಿ ನೀರು ಹರಿಯುವ ಮುನ್ನ ಕೆರೆ ಸ್ವಚ್ಛ ಮಾಡಿ


Team Udayavani, May 5, 2019, 11:23 AM IST

kolar-tdy-6..

ಮುಳಬಾಗಿಲು ತಾಲೂಕಿನ ದುಗ್ಗಸಂದ್ರ ಹೋಬಳಿ ಕುರುಡುಮಲೆ ಗ್ರಾಪಂ ವ್ಯಾಪ್ತಿಯ ಕದರೀಪುರ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಮಾತನಾಡಿದರು.

ಮುಳಬಾಗಿಲು: ಕೆ.ಸಿ.ವ್ಯಾಲಿ ನೀರನ್ನು ನಗರದಂಚಿನ ಯರಕಲಕುಂಟೆ ಮತ್ತು ಗೋಪನ್ನ ಕೆರೆಗೆ ಹರಿಸಲಾಗುತ್ತದೆ. ಹೀಗಾಗಿ ಕೂಡಲೇ ಸ್ವಚ್ಛಗೊಳಿಸಿ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ಪಿಡಿಒ ರೂಪಾಗೆ ಸೂಚಿಸಿದರು.

ತಾಲೂಕಿನ ಕುರುಡುಮಲೆ ಗ್ರಾಪಂ ವ್ಯಾಪ್ತಿಯ ಕದರೀಪುರ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ನಡೆದ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ರೈತ ಕೃಷ್ಣಪ್ಪ ಅವರ ಕೊಳವೆ ಬಾವಿಯಿಂದ ನೀರು ಪೂರೈಕೆ ಮಾಡಿ, ಅವರಿಗೆ ಮಾಸಿಕ 18 ಸಾವಿರ ರೂ. ನೀಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ ಅವರು, ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾದರೆ ಪ್ರತಿ ಟ್ಯಾಂಕರ್‌ಗೆ 500 ರೂ.ನಂತೆ ಪೂರೈಕೆ ಮಾಡಬೇಕು. ವೃದ್ಧಾಪ್ಯ ವೇತನ ಸಮಸ್ಯೆ ನಿವಾರಣೆಗೆ ಹಳ್ಳಿಗಳಲ್ಲಿಯೇ ಕಂದಾಯ ಅದಾಲತ್‌ ಮಾಡಲಾಗುವುದು ಎಂದು ಹೇಳಿದರು.

ಹೂಳು ತೆಗೆಯಿರಿ: ಉತ್ತನೂರು ಗ್ರಾಪಂ ವ್ಯಾಪ್ತಿಯ ಕೆ.ಜಿ.ಲಕ್ಷ್ಮೀಸಾಗರ ಗ್ರಾಮದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಮಂಜುನಾಥ್‌, ನರೇಗಾ, ಕುಡಿಯುವ ನೀರು, ಮತ್ತಿತರ ಸಮಸ್ಯೆಗಳ ಕುರಿತು ಚರ್ಚಿಸಿದರು. ತಾಲೂಕಿನಲ್ಲಿ ಬರ ಇರುವುದರಿಂದ ಜನರಿಗೆ ಕೆಲಸ ಸಿಗಲು ಗ್ರಾಮದ ಕೆರೆಯಲ್ಲಿ ಹೂಳು ತೆಗೆಯುವ ಕೆಲಸ ಕೈಗೊಳ್ಳಿ ಎಂದು ಜಿಪಂ ಸಿಇಒ ಜಿ.ಜಗದೀಶ್‌ಗೆ ಸೂಚಿಸಿದರು.

ಕೊಳವೆ ಬಾವಿ ಕೊರೆಯಿಸಿ: ಮುಖ್ಯರಸ್ತೆಗೆ 2 ಕಿ.ಮೀ. ದೂರವಿರುವುದರಿಂದ ಗ್ರಾಮಕ್ಕೆ ಪ್ರತಿನಿತ್ಯ ಮುಂಜಾನೆ 9 ಮತ್ತು ಮಧ್ಯಾಹ್ನ 2 ಗಂಟೆಗೆ ಬಸ್‌ ಸಂಚಾರ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಕ್ರಮಕೈಗೊಳ್ಳುವಂತೆ ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮದಲ್ಲಿ ಈಗಾಗಲೇ ಎರಡು ಕೊಳವೆಬಾವಿ ಕೊರೆಸಿದ್ದರೂ ನೀರು ಸಿಗದ ಕಾರಣ ಇತ್ತೀಚಿನ ದಿನಗಳಲ್ಲಿ ಖಾಸಗಿ ಕೊಳವೆ ಬಾವಿಯಿಂದ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಅದನ್ನು ಪರಿಶೀಲಿಸಿದ ಅವರು, ತುರ್ತಾಗಿ ಮತ್ತೂಂದು ಕೊಳವೆಬಾವಿ ಕೊರೆಸಲು ಸೂಚಿಸಿದರು.

ತಹಶೀಲ್ದಾರ್‌ಗೆ ಸೂಚನೆ: ಅಲ್ಲದೇ, ಗ್ರಾಮದ 20 ಜಮೀನಿಗೆ ತೆರಳಲು ನಕಾಶೆಯಲ್ಲಿ ದಾರಿಯಿದ್ದರೂ ಈ ರಸ್ತೆಯನ್ನು ಕೆಲವರು ಮುಚ್ಚಿದ್ದಾರೆ. ರಸ್ತೆಯನ್ನು ಸರಿಪಡಿಸಿ ಜನರ ಮುಕ್ತ ಓಡಾಟಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಶೀಘ್ರ ಸರ್ವೇ ಮಾಡಿಸಿ ರಸ್ತೆ ಸೌಲಭ್ಯ ಕಲ್ಪಿಸಲು ತಹಶೀಲ್ದಾರ್‌ ಬಿ.ಎನ್‌.ಪ್ರವೀಣ್‌ಗೆ ಸೂಚಿಸಿದರು. ತಹಶೀಲ್ದಾರ್‌ ಬಿ.ಎನ್‌.ಪ್ರವೀಣ್‌, ತಾಪಂ ಇಒ ಡಾ.ಕೆ.ಸರ್ವೇಶ್‌, ಜಿಪಂ ಸದಸ್ಯ ಅರವಿಂದ್‌ಕುಮಾರ್‌, ಉತ್ತನೂರು ಪಿಡಿಒ ಕೃಷ್ಣಪ್ಪ, ಉತ್ತನೂರು ಶ್ರೀನಿವಾಸ್‌, ತಾಪಂ ಮಾಜಿ ಉಪಾಧ್ಯಕ್ಷ ರಾಜಪ್ಪ, ಗ್ರಾಮದ ಮುಖಂಡ ಕೆ.ಆರ್‌.ಮಂಜುನಾಥ್‌, ಯುವ ಮುಖಂಡ ಸುಬ್ರಮಣಿ ಇತರರಿದ್ದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.