ಕೆಜಿಎಫ್ ಪೊಲೀಸ್‌ ಘಟಕ ಸ್ಥಳಾಂತರಕ್ಕೆ ಯತ್ನ


Team Udayavani, Nov 19, 2021, 3:14 PM IST

ಕೆಜಿಎಫ್ ಪೊಲೀಸ್‌ ಘಟಕ ಸ್ಥಳಾಂತರಕ್ಕೆ ಯತ್ನ

ಕೆಜಿಎಫ್: ಹೊಸದಾಗಿ ಸೃಜನೆಗೊಂಡಿರುವ ವಿಜಯನಗರ ಜಿಲ್ಲೆಗೆ ಕರ್ನಾಟಕ ರಾಜ್ಯ ಪೊಲೀಸ್‌ ಇತಿಹಾಸದಲ್ಲೇ ವಿಶೇಷತೆಯನ್ನು ಪಡೆದಿರುವ ಕೆಜಿಎಫ್ ಪೊಲೀಸ್‌ ಘಟಕವನ್ನು ಸ್ಥಳಾಂತರಗೊಳಿ ಸಲು ಪ್ರಯತ್ನಗಳು ಮುಂದುವರಿದಿದೆ. ಅ.21ರಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಹುದ್ದೆಯು ಖಾಲೆ ಇದ್ದು, ಕೋಲಾರ ಎಸ್‌ಪಿ ಪ್ರಭಾರದಲ್ಲಿದ್ದಾರೆ.

ಬಳ್ಳಾರಿ ಜಿಲ್ಲೆಯಿಂದ ವಿಭಜನೆಗೊಂಡು ಹೊಸ ದಾಗಿ ರಚನೆಯಾಗಿರುವ ವಿಜಯನಗರ ಜಿಲ್ಲೆಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗದಂತೆ ಪೊಲೀಸ್‌ ಘಟಕವನ್ನು ಸೃಜನೆಮಾಡಲು ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಪ್ರಸ್ತಾವನೆಯಂತೆ ರಾಜ್ಯ ಸರ್ಕಾರವು ಆ.19ರಂದು ಹೊರಡಿಸಿದ ಆದೇಶ ದಂತೆ ಕೆಜಿಎಫ್ ಪೊಲೀಸ್‌ ವಿಶೇಷ ಜಿಲ್ಲೆಯ ಜಿಲ್ಲಾ ಮಟ್ಟದ ಸ್ಥಾನಮಾನವನ್ನು ಸಂಪೂರ್ಣ ಸ್ಥಳಾಂತರಿಸುವ ಪ್ರಯತ್ನಗಳನ್ನು ನಡೆಸಲಾಗುತ್ತಿದೆ.

ಸ್ಥಳಾಂತರಿಸುವ ಪ್ರಸ್ತಾವನೆ: ಎಸ್‌ಪಿ ಇಲಕ್ಕಿಯಾ ಕರುಣಾಕರನ್‌ ವರ್ಗಾವಣೆಯ ಬಳಿಕ ಕೆಜಿಎಫ್ಗೆ ಎಸ್‌ಪಿ ಯಾರೂ ನಿಯುಕ್ತಿಗೊಳ್ಳದೇ ಕೋಲಾರದ ಎಸ್‌ಪಿ ಡೆಕ್ಕಾ ಕಿಶೋರ್‌ಬಾಬು ಹೆಚ್ಚುವರಿ ಪ್ರಭಾರ ನೋಡಿಕೊಳ್ಳುತ್ತಿದ್ದಾರೆ. ಈಗಾಗಲೇ ವಿಜಯನಗರಕ್ಕೆ ಕೆಜಿಎಫ್ ಪೊಲೀಸ್‌ ಘಟಕವನ್ನು ಸ್ಥಳಾಂತರಿಸುವ ಪ್ರಸ್ತಾವನೆ ವಿರೋಧಿಸಿ ಕೆಜಿಎಫ್, ಬಂಗಾರಪೇಟೆ ತಾಲೂಕುಗಳಲ್ಲಿ ಭಾರೀ ಪ್ರತಿಭಟನೆ, ಬಂದ್‌ ನಡೆದಿದ್ದರಿಂದಾಗಿ ರಾಜ್ಯ ಸರ್ಕಾರವು ಸ್ಥಳಾಂತರಿಸುವ ಪ್ರಸ್ತಾವನೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿದಿತ್ತು.

19ರಂದು ಆದೇಶ: ಮತ್ತೆ ಕೆಜಿಎಫ್ ಪೊಲೀಸ್‌ ಘಟಕದ ಸ್ಥಳಾಂತರದ ಪ್ರಸ್ತಾವನೆಯು ವ್ಯಾಪಕವಾಗಿ ನಡೆಯುತ್ತಿದೆ. ಕೆಜಿಎಫ್ ಪೊಲೀಸ್‌ ಜಿಲ್ಲೆಯಲ್ಲಿ 965 ಸಂಖ್ಯಾ ಬಲವುಳ್ಳ ಅಧಿಕಾರಿ, ಸಿಬ್ಬಂದಿ ಕಾರ್ಯನಿರ್ವ ಹಿಸುತ್ತಿದ್ದು, ಈ ಪೈಕಿ ಜಿಲ್ಲಾ ಪೊಲೀಸ್‌ ಕಚೇರಿಯ ಲಿಪಿಕ ಮತ್ತು ಕಾರ್ಯಕಾರಿ ಸಿಬ್ಬಂದಿ 40, ಡಿಎಆರ್‌ನ ಎಲ್ಲಾ 248 ಅಧಿಕಾರಿ, ಸಿಬ್ಬಂದಿ ಸ್ಥಳಾಂತರಿಸಲು ಆ.19 ರಂದು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ಕೆಜಿಎಫ್ನಲ್ಲೇ ಸ್ಥಳಾವಕಾಶ: ಉಳಿದಂತೆ ಎಲ್ಲಾ ಒಂಬತ್ತು ಪೊಲೀಸ್‌ ಠಾಣೆಗಳ, ನಾಲ್ಕು ವೃತ್ತ ಕಚೇರಿ ಗಳ ಸಿವಿಲ್‌ ಸಿಬ್ಬಂದಿ ಕೋಲಾರ ಜಿಲ್ಲೆಗೆ ಸೇರ್ಪಡೆ ಮಾಡಲಿದ್ದು, ಕೆಜಿಎಫ್ನಲ್ಲಿ ಉಪವಿಭಾಗ ಕಚೇರಿ ಯು ಮಾತ್ರ ಕಾರ್ಯ ನಿರ್ವಹಿಸಲಿದೆ. ಕೆಜಿಎಫ್ ಡಿಎ ಆರ್‌ ಘಟಕದ ಅಧಿಕಾರಿ ಸಿಬ್ಬಂದಿಗೆ ಕೆಜಿಎಫ್ನಲ್ಲೇ ಸ್ಥಳಾವಕಾಶ ಕಲ್ಪಿಸಲು ಪ್ರಯತ್ನಗಳು ನಡೆಯುತ್ತಿದೆ.

ಸಿಬ್ಬಂದಿಗೆ ಸ್ಥಳಾವಕಾಶ: ಕೆಜಿಎಫ್ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಕೆಎಸ್‌ಐಎಸ್‌ಎಫ್ ಘಟಕ ಪ್ರಾರಂಭಿಸಿ ಅದರಲ್ಲಿ 71 ಮಂದಿಗೆ, ಡಿಎಆರ್‌ನಲ್ಲಿ ಪೊಲೀಸ್‌ ತರಬೇತಿ ಪ್ರಾರಂಭಿಸಿ ಅದರಲ್ಲಿ 40 ಮಂದಿಗೆ, ವಿಜಯ ನಗರ ಜಿಲ್ಲೆಗೆ ತೆರಳಲು ಆಸಕ್ತಿವುಳ್ಳ 67 ಮಂದಿ ಮತ್ತು ಉಳಿದ 70 ಮಂದಿಗೆ ಕೋಲಾರ ಘಟಕದ ಡಿಎಆರ್‌ ನಲ್ಲಿ ಹಂಚಿಕೆ ಮಾಡಿ, ಒಟ್ಟಾರೆ ಕೆಜಿಎಫ್ ಡಿಎಆರ್‌ ಮಂಜೂರಾತಿ ಬಲವನ್ನು ವಿಜಯನಗರ ಜಿಲ್ಲೆಗೆ ಸ್ಥಳಾಂತರ ಮಾಡಲು ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರ ಕಚೇರಿಯಲ್ಲಿ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ.

ಸಿಇಎನ್‌ ಕ್ರೈಂಪೊಲೀಸ್‌ ಠಾಣೆ ಸ್ಥಳಾಂತರ?: ಜಿಲ್ಲಾ ಪೊಲೀಸ್‌ ಕಚೇರಿಯ ಲಿಪಿಕ ಮತ್ತು ಕಾರ್ಯಕಾರಿ ಸಿಬ್ಬಂದಿ 40 ಮಂದಿ ಸೇರಿ, ಕೆಜಿಎಫ್ನ ಡಿಎಆರ್‌, ನಿಸ್ತಂತು ಘಟಕ, ಇಆರ್‌ಎಸ್‌ಎಸ್‌, ಡಿಎಸ್‌ಬಿ, ಡಿಸಿಐಬಿ, ಡಿಸಿಆರ್‌ಬಿ, ಡಿಎಸ್‌ಎ ಘಟಕಗಳ ಸಹಿತ ಸಿಇಎನ್‌ ಕ್ರೈಂಪೊಲೀಸ್‌ ಠಾಣೆಯನ್ನು ವಿಜಯನಗರ ಜಿಲ್ಲೆಗೆ ಸ್ಥಳಾಂತರಿಸಲು ಸಿದ್ಧತೆಗಳು ಮಾಡಲಾಗುತ್ತಿದೆ.

ಡಿ.31ರೊಳಗಾಗಿ ಎಲ್ಲಾ ಪ್ರಕ್ರಿಯೆಗಳು ಪೂರ್ಣ ಗೊಳ್ಳಲಿವೆ ಎಂದು ಹೇಳಲಾಗುತ್ತಿದೆ. ಐತಿಹಾಸಿಕ ಕೆಜಿಎಫ್ ಪೊಲೀಸ್‌ ಜಿಲ್ಲೆಯ ಸ್ಥಾನ ಮಾನವನ್ನು ಪ್ರಸ್ತುತ ವಿಜಯನಗರ ಜಿಲ್ಲೆಗೆ ಆರ್ಥಿಕ ಹೊರೆಯ ಕಾರಣದಿಂದಾಗಿ ರಾಜ್ಯ ಸರ್ಕಾರವು ಸ್ಥಳಾಂತರಿಸಲು ಮುಂದಾಗಿದ್ದು, ಮುಂದಿನ ದಿನ ಗಳಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ, ಅಪರಾಧಗಳ ಸಂಖ್ಯೆ ಹೆಚ್ಚಳ, ರೌಡಿಗಳ ಅಟ್ಟಹಾಸ ಹೆಚ್ಚಾಗು ವುದರಲ್ಲಿ ಸಂಶಯವಿಲ್ಲ.

– ಬಿ.ಆರ್‌.ಗೋಪಿನಾಥ್‌

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.