ಕಿಸಾನ್ ಕ್ರೆಡಿಟ್ ಕಾರ್ಡ್ ಜಾರಿ
Team Udayavani, Jun 20, 2020, 7:07 AM IST
ಮುಳಬಾಗಿಲು: ಕೇಂದ್ರ ಸರ್ಕಾರ ಹೈನುಗಾರಿಕೆ ಅಭಿವೃದ್ಧಿಗೂ ಕಿಸಾನ್ ಕ್ರೆಡಿಟ್ ಕಾರ್ಡ್ ಜಾರಿಗೆ ತಂದಿದ್ದು, ಹಾಲು ಉತ್ಪಾದಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಕೋಚಿಮುಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ಸಲಹೆ ನೀಡಿದರು. ನಗರದ ಕೋಚಿಮುಲ್ ಶಿಬಿರ ಕಚೇರಿಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳ ಸಭೆ ಉದ್ಘಾಟಿಸಿ ಮಾತನಾಡಿದರು.
ಕೋವಿಡ್ 19ದಿಂದ ದೇಶವೇ ತತ್ತರಿಸುತ್ತಿದೆ, ಈ ಒಂದು ಸಂದರ್ಭದಲ್ಲಿ ರೈತರ ಕೈ ಹಿಡಿದಿರುವ ಹೈನುಗಾರಿಕೆಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಕೃಷಿಗಷ್ಟೇ ಅಲ್ಲ, ಹೈನುಗಾರಿಕೆಗೂ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುತ್ತಿದೆ ಎಂದು ಹೇಳಿದರು.ಕೋವಿಡ್ 19 ಸಂಕಷ್ಟ ಕಾಲ ದಲ್ಲಿ ಖಾಸಗಿ ಡೇರಿಗಳು ರೈತರಿಂದ ಹಾಲು ಸ್ವೀಕರಿಸುತ್ತಿಲ್ಲ.
ಆದರೆ, ಕೋಚಿ ಮುಲ್ ಕಂಟೇನ್ಮೆಂಟ್ ಜೋನ್ಗಳಲ್ಲೂ ಹಾಲು ಸ್ವೀಕರಿಸಿ ಹಣ ಬಟವಾಡೆ ಮಾಡಿ ರೈತರ ಪರ ನಿಂತಿದೆ. ಆದ್ದರಿಂದ, ಹಸು ಹೊಂದಿರುವ ರೈತರು ಸಂಘದಲ್ಲಿ ಹೆಸರು ನೋಂದಾಯಿಸಿಕೊಳ್ಳಿ, ಇದರಿಂದ ವಾರ್ಷಿಕ 2 ಲಕ್ಷ ರೂ.ವರೆಗೂ ಕಡಿಮೆ ಬಡ್ಡಿದರದಲ್ಲಿ ಸಾಲ ದೊರೆಯಲಿದೆ ಎಂದು ಹೇಳಿದರು. ಉಪ ವ್ಯವಸ್ಥಾಪಕ ಶ್ರೀಧರ್ಮೂರ್ತಿ, ವಿಸ್ತರಣಾಧಿ ಕಾರಿ ಶ್ರೀರಾಮ್, ಕೃಷ್ಣಪ್ಪ, ಆನಂದ್, ಎಂ.ರವಿ ಕುಮಾರ್, ಶ್ರೀನಿವಾಸ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ