ಕೋಚಿಮುಲ್‌: ಮತದಾನಕೆ ಸಿದ್ಧತೆ


Team Udayavani, May 11, 2019, 11:00 AM IST

k-1

ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಆಡಳಿತ ಮಂಡಳಿಯ 9 ಸ್ಥಾನಗಳಿಗೆ ಮೇ 13 ರಂದು ನಡೆಯಲಿರುವ ಮತದಾನಕ್ಕಾಗಿ ನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ ಸಕಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್‌ ತಿಳಿಸಿದರು.

ಮತದಾನದ ಸಂಬಂಧ ಕಾಲೇಜು ಕಟ್ಟಡ, ಕೊಠಡಿಗಳನ್ನು ಪರಿಶೀಲಿಸಲು ಶುಕ್ರವಾರ ಗೋಕುಲ ಕಾಲೇಜಿಗೆ ಆಗಮಿಸಿದ್ದ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಹಾಲು ಒಕ್ಕೂಟದ 13 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಕಣದಲ್ಲಿ ಒಬ್ಬೊಬ್ಬರೇ ಅಭ್ಯರ್ಥಿಗಳು ಉಳಿದು ಕೊಂಡಿದ್ದರಿಂದಾಗಿ ನಾಲ್ಕು ಸ್ಥಾನಗಳಿಗೆ ಅವಿರೋಧ ಆಯ್ಕೆ ಘೋಷಿಲಾಗಿದ್ದು, ಉಳಿದಂತೆ ಜಿಲ್ಲೆಯ 5 ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

9 ಕ್ಷೇತ್ರಗಳ ಮತದಾನಕ್ಕಾಗಿ ಹಾರೋಹಳ್ಳಿ ಜಯನಗರದ ಗೋಕುಲ ವಿದ್ಯಾಸಂಸ್ಥೆಯಲ್ಲಿ 9 ಕೊಠಡಿಗಳನ್ನು ಆಯ್ಕೆ ಮಾಡಲಾಗಿದೆ ಎಂದ ಜಿಲ್ಲಾಧಿಕಾರಿಯವರು, ಒಟ್ಟು 1200 ಮತದಾರರು ಮತದಾನ ಮಾಡಲಿದ್ದಾರೆ. ಈಗಾಗಲೇ ಆಯಾ ಗ್ರಾಮೀಣ ಹಾಲು ಉತ್ಪಾದಕರ ಸಹಕಾರ ಸಂಘಗಳ ನಿರ್ದೇಶಕ ಮಂಡಳಿ ನಾಮನಿರ್ದೇಶನ ಮಾಡಿರುವ ಮತದಾರರಿಗೆ ಡೆಲಿಗೇಟ್‌ ಫಾರಂ ಹಾಗೂ ಗುರುತಿನ ಚೀಟಿ ನೀಡಲಾಗಿದೆ. ಅವರಿಗೆ ಮಾತ್ರ ಮತದಾನದಲ್ಲಿ ಪಾಲ್ಗೊ ಳ್ಳಲು ಅವಕಾಶವಿದೆ ಎಂದರು. ಮತದಾನ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೂ ನಡೆಯಲಿದ್ದು, ಮತದಾನ ಮುಗಿದ ನಂತರ ಮತ ಎಣಿಕೆ ಕಾರ್ಯ ಆರಂಭಗೊಂಡು ಸಂಜೆ 5.30ರ ವೇಳೆಗೆ ಫಲಿತಾಂಶ ಹೊರಬರಲಿದೆ ಎಂದು ತಿಳಿಸಿದರು.

ನಿಷೇಧಾಜ್ಞೆ ಜಾರಿ: ಮತದಾನ ಮತ್ತು ಮತ ಎಣಿಕೆ ಕಾರ್ಯ ನಡೆಯುವ ಮೇ 13ರಂದು ಗೋಕುಲ ಕಾಲೇಜು ಸುತ್ತಮುತ್ತ ಸೆಕ್ಷನ್‌ 144ರಡಿ ನಿಷೇಧಾಜ್ಞೆ
ಜಾರಿ ಮಾಡಲಾಗುವುದು. ವಿಜಯೋತ್ಸವ, ಗುಂಪು ಸೇರುವುದು, ಗೊಂದಲಕ್ಕೆ ಅವಕಾಶ ನೀಡದಂತೆ ಪೊಲೀಸರಿಗೆ ಸೂಚಿಸಲಾಗಿದೆ. ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರೂ ಶಾಂತಿಯುತ ಚುನಾವಣೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಚುನಾವಣೆ ಹಿನ್ನೆಲೆಯಲ್ಲಿ ಗೋಕುಲ ಕಾಲೇಜು ಪಕ್ಕದ ರಸ್ತೆ ಬಂದ್‌ ಆಗುವುದರಿಂದ ಆ ದಿನದ ಮಟ್ಟಿಗೆ ಬೇರೆ ಏರ್ಪಾಟು ಮಾಡಿಕೊಳ್ಳಲು ಕೋರಿದರು. ಚುನಾವಣಾಧಿಕಾರಿಯೂ ಆಗಿರುವ ವಿಭಾಗಾಧಿಕಾರಿ ಸೋಮಶೇಖರ್‌, ಚುನಾವಣೆ ಶಾಂತಿಯು ತವಾಗಿ ನಡೆಯಲು ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುವುದು, ಮತಗಟ್ಟೆ ಸುತ್ತ ತಡೆಗೋಡೆಯನ್ನು ನಿರ್ಮಿಸಲಾಗುವುದು, ಈ ಸಂಬಂಧ ಪೊಲೀಸ್‌ ಇಲಾಖೆ ಸಹಕಾರ ಪಡೆಯಲಾಗಿದೆ ಎಂದರು.

ಡಿಲಿಗೇಟ್‌ಫಾರಂಗೆ ಪರಿಶೀಲನಾಧಿಕಾರಿ: ಕೋಚಿಮುಲ್‌ ವ್ಯವಸ್ಥಾಪಕ ನಿರ್ದೇಶಕ ಡಾ.ಸ್ವಾಮಿ ಮಾತನಾಡಿ, ಮತದಾನದ ಅರ್ಹತೆಗಾಗಿ ಎಂಪಿಸಿಎಸ್‌ಗಳಿಂದ ನಾಮನಿರ್ದೇಶಿತಗೊಂಡ ಮತದಾರರಿಗೆ ನೀಡುವ ಡೆಲಿಗೇಟ್‌ ಫಾರಂ ನೀಡಿಕೆಯಲ್ಲಿ ತಪ್ಪಾಗದಂತೆ ಪರಿಶೀಲನೆಗಾಗಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಪ್ರತ್ಯೇಕ ಪರಿಶೀಲನಾಧಿ ಕಾರಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ನ್ಯಾಯಸಮ್ಮತ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದ್ದು, ಯಾವುದೇ ಗೊಂದಲ, ಸಮಸ್ಯೆಗಳು ಎದುರಾಗದಂತೆ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗೋಕುಲ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ನಾರಾಯಣಸ್ವಾಮಿ, ನಗರಠಾಣೆ ವೃತ್ತ ನಿರೀಕ್ಷಕ ನಾಗರಾಜ್‌, ಪಿಎಸ್‌ಐ ಶಂಕರಪ್ಪ, ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾಗ ರಾಜಗೌಡ, ಕೋಚಿಮುಲ್‌ ಉಪವ್ಯವಸ್ಥಾಪಕರಾದ ನಾಗೇಶ್‌, ಮಲ್ಲಿಕಾರ್ಜುನ್‌, ರಮೇಶ್‌ಬಾಬು ಮತ್ತಿತರರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.