ಕೋಲಾರಕ್ಕೆ ಸಿಕ್ಕಿದ್ದೇ ಮಹಾಪ್ರಸಾದ


Team Udayavani, Feb 9, 2019, 6:56 AM IST

kolar.jpg

ಕೋಲಾರ: ಸಮ್ಮಿಶ್ರ ಸರ್ಕಾರ ಮಂಡಿಸಿದ ಮೊದಲ ಬಜೆಟ್ ಹಾಗೂ ಸಿದ್ದರಾಮಯ್ಯ ಸರ್ಕಾರ ಮಂಡಿಸಿದ ಕೊನೆ ಬಜೆಟ್‌ನಲ್ಲಿ ಕೋಲಾರ ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿತ್ತು. ಈ ಕೊರತೆ ತುಂಬಿಕೊಡುವಂತೆ ಸಮ್ಮಿಶ್ರ ಸರ್ಕಾರದ ಎರಡನೇ ಬಜೆಟ್ ಮಂಡನೆಯಾಗಲಿದೆ ಎಂದು ಕೋಲಾರ ಜಿಲ್ಲೆಯ ಜನ ನಿರೀಕ್ಷಿಸುತ್ತಿದ್ದರು. ಆದರೆ, ಕೋಲಾರ ಜಿಲ್ಲೆಯ ಜನರ ನಿರೀಕ್ಷೆ ಇರಲಿ, ಜನಪ್ರತಿನಿಧಿಗಳು ಪತ್ರಿಕಾ ಹೇಳಿಕೆಗಳ ಮೂಲಕ ಕೇಳಿದ್ದನ್ನು ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೊಡಲೇ ಇಲ್ಲ.

ನಿರೀಕ್ಷೆಗಳೇನಿದ್ದವು: ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ಯೋಜನೆಯಡಿ ನೀರನ್ನು 3 ಬಾರಿ ಸಂಸ್ಕರಿಸಿದ ನಂತರ ಕೆರೆಗಳಿಗೆ ಹರಿಸಬೇಕೆಂಬ ಬಗ್ಗೆ ಬಜೆಟ್ ಚಕಾರವೆ ತ್ತದಿರುವುದು ಜನರನ್ನು ನಿರಾಸೆಗೆ ತಳ್ಳಿದೆ. ಕೆಜಿಎಫ್ ಚಿನ್ನದ ಗಣಿ ಕಾರ್ಮಿಕರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಗಣಿ ಪ್ರದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಪಡಿಸುವ ಕುರಿತು ಬಜೆಟ್ ಸ್ಪಂದಿಸಿಲ್ಲ. ಕೋಲಾರ ಜಿಲ್ಲೆಗೆ ಮಂಜೂರಾದ ರ್ವೆಲ್ವೆ ಯೋಜನೆಗಳಿಗೆ ಭೂಮಿ ನೀಡುವ ಕುರಿತು ಪ್ರಸ್ತಾಪ ಮಾಡಿಲ್ಲ.

ಜಿಲ್ಲೆಯಲ್ಲಿ ಅತಿ ಹೆಚ್ಚು ಬೆಳೆಯುವ ಮಾವು ಸಂಸ್ಕರಣೆಗೆ ಘಟಕ ಮಂಜೂರು ಮಾಡದಿರುವುದು ಮಾವು ಬೆಳೆಗಾರರನ್ನು ನಿರಾಸೆಗೊಳಿಸಿದೆ. ಅತಿ ಹೆಚ್ಚು ರೇಷ್ಮೆ ಉತ್ಪಾದಿಸುವ ಕೋಲಾರವನ್ನು ಕಡೆಗಣಿಸಿ ಇತರೇ ಜಿಲ್ಲೆಗಳಲ್ಲಿ ರೇಷ್ಮೆ ಯೋಜನೆಗಳನ್ನು ಪ್ರಕಟಿಸಲಾಗಿದೆ. ಶಾಶ್ವತ ಬರ ಪೀಡಿತ ಕೋಲಾರ ಜಿಲ್ಲೆಯನ್ನು ವಿಶೇಷವಾಗಿ ಪರಿಗ ಣಿಸಿ ವಿದರ್ಭ ಮಾದರಿಯ ಪ್ಯಾಕೇಜ್‌ ಪ್ರಕಟಿ ಸಬೇಕೆಂಬುದಕ್ಕೂ ಬಜೆಟ್ ಸ್ಪಂದಿಸಿಲ್ಲ.

ಅಂತರ್ಜಲ ತೀವ್ರವಾಗಿ ಕುಸಿದಿರುವ ಜಿಲ್ಲೆಗಳಲ್ಲಿ ಅಂತರ್ಜಲ ಮರುಪೂರಣ ಮಾಡಿಸುವ ಸಲುವಾಗಿ 10 ಕೋಟಿ ರೂಪಾಯಿ ಅನುದಾನ ನೀಡಿರುವುದು, ಅಂತರ್ಜಲ ಪಾತಾಳಕ್ಕೆ ಕುಸಿದಿರುವ ಕೋಲಾರ ಜಿಲ್ಲೆಗೂ ಇದರಿಂದ ಅನುಕೂಲವಾಗಬಹುದಾಗಿದೆ.

ಕೆ.ಸಿ. ವ್ಯಾಲಿ ಯೋಜನೆಯಡಿ ಮೂರನೇ ಬಾರಿಗೆ ಸಂಸ್ಕರಣೆಗೆ ಬೇಡಿಕೆ ಇಟ್ಟಿದ್ದರೆ ಸರ್ಕಾರ ವರ್ತೂರು , ಬೆಳ್ಳಂದೂರು ಕೆರೆಗಳ ನೀರಿನ ಗುಣಮಟ್ಟ ತಪಾಸಣೆಗೆ ನಿರಂತರ ಪರಿವೇಷ್ಠಕ ಜಲಗುಣಮಟ್ಟ ಮಾಪನ ಕೇಂದ್ರವನ್ನು 9 ಕೋಟಿ ರೂ.ಗಳಲ್ಲಿ ಅಳವಡಿಸುತ್ತಿರುವುದು ಪರೋಕ್ಷವಾಗಿ ಕೋಲಾರ ಜಿಲ್ಲೆಯ ಕೆ.ಸಿ. ವ್ಯಾಲಿ ಯೋಜನೆಯಡಿ ಗುಣಮಟ್ಟದ ನೀರನ್ನು ಮಾತ್ರವೇ ಕೋಲಾರದ ಕೆರೆಗಳಿಗೆ ಹರಿಸಲು ಸಹಕಾರಿಯಾಗ ಬಹುದು ಎನ್ನಲಾಗುತ್ತಿದೆ.

ಪ್ರತಿ ಜಿಲ್ಲೆಗೂ ಇ ಆಡಳಿತ ತರಬೇತಿ ಕೇಂದ್ರ ಮಂಜೂರು ಮಾಡಿರುವುದರಿಂದ ಕೋಲಾರ ಜಿಲ್ಲೆಗೂ ಇದರ ಪಾಲು ಸಿಗಲಿದೆ. ಈಗಾಗಲೇ ಆರಂಭವಾಗಿರುವ ಎತ್ತಿನಹೊಳೆ ಯೋಜನೆಯಡಿ ಶೀಘ್ರ ಕೋಲಾರಕ್ಕೆ ನೀರು ಹರಿಸಲಾಗುವುದು ಎಂಬ ವಾಕ್ಯವನ್ನು ಹಿಂದಿನ ಬಜೆಟ್‌ಗಳಂತೆಯೇ ಪುನರಾವರ್ತಿಸಲಾಗಿದೆ.

ಪ್ರತ್ಯಕ್ಷವಾಗಿ ಸಿಕ್ಕಿದ್ದೇನು?: 
* ಸಮ್ಮಿಶ್ರ ಸರ್ಕಾರದ 2ನೇ ಬಜೆಟ್‌ನಲ್ಲಿ ಕೋಲಾರ ಜಿಲ್ಲೆಯಲ್ಲಿ ಹೆಚ್ಚಾಗಿ ಬೆಳೆಯುವ ಟೊಮೆಟೋ ಸಂಸ್ಕರಣಾ ಘಟಕ ಆರಂಭಿಸಲು 20 ಕೋಟಿ ರೂ.ಗಳನ್ನು ಇಡಲಾಗಿದೆ.

* ಕೆ.ಸಿ. ವ್ಯಾಲಿ ಯೋಜನೆಯಡಿ ಕೈಗಾರಿಕಾ ಪ್ರದೇಶಗಳಲ್ಲಿ ಆರಂಭವಾಗುತ್ತಿರುವ ಕೈಗಾರಿಕೆಗಳಿಗೆ 40 ಎಂಎಲ್‌ಡಿ ನೀರು ಹರಿಸಲು 40 ಕೋಟಿ ರೂ. ಮೀಸಲಿಡಲಾಗಿದೆ.

* ಕೋಲಾರ ಸೇರಿದಂತೆ ಹತ್ತು ಜಿಲ್ಲಾಸ್ಪತ್ರೆಗಳಲ್ಲಿ ಮಹಿಳೆಯರ ಸ್ತನ ಕ್ಯಾನ್ಸರ್‌ ಪತ್ತೆ ಹಚ್ಚುವ ಸಲುವಾಗಿ ಸ್ತನ ರೇಖನ ವ್ಯವಸ್ಥೆ ಯಂತ್ರಗಳನ್ನು ಅಳವಡಿಸಲಾಗುತ್ತಿದೆ. ಕೋಲಾರ ಜಿಲ್ಲೆಯ ಶಿಲ್ಪಗ್ರಾಮ ಶಿವಾರಪಟ್ಟಣದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಮರ ಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರವನ್ನು ಮಂಜೂರು ಮಾಡಲಾಗುತ್ತಿದೆ. ಕೋಲಾರ ಜಿಲ್ಲೆ ಸೇರಿ 10 ಜಿಲ್ಲೆಗಳಲ್ಲಿ ಬಾಲಕಿಯರ ಕ್ರೀಡಾ ಹಾಸ್ಟೆಲ್‌ ತೆರೆಯಲು 15 ಕೋಟಿ ರೂ., ಮೀಸಲಿಡಲಾಗಿದೆ.

* ರಾಯಚೂರು, ವಿಜಯಪುರ, ಮಂಡ್ಯ ಜೊತೆಗೆ ಕೋಲಾರ ಜಿಲ್ಲೆಗೆ 4 ಸಾವಿರ ಕೋಟಿ ರೂ. ವೆಚ್ಚದಲ್ಲಿ ಜಲಧಾರೆ ಯೋಜನೆಯನ್ನು ಕೈಗೆತ್ತಿಕೊಳ್ಳುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇವಿಷ್ಟು ಕೋಲಾರ ಜಿಲ್ಲೆಗೆ ನೇರವಾಗಿ ಸಿಕ್ಕ ಕೊಡುಗೆಗಳಾಗಿವೆ.

ಪರೋಕ್ಷವಾಗಿ ಸಿಕ್ಕಿದ್ದೇನು?
* ಕೋಲಾರ ಜಿಲ್ಲೆಯಲ್ಲಿ ಹಾಲಿನ ಉತ್ಪಾದಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಬಜೆಟ್‌ನಲ್ಲಿ ಪ್ರತಿ ಲೀಟರ್‌ ಹಾಲಿಗೆ 1 ರೂ. ಪ್ರೋತ್ಸಾಹ ಧನ ಹೆಚ್ಚಳ ಮಾಡಿರುವ ಫ‌ಲ ಸಿಗಲಿದೆ. ಹಾಗೆಯೇ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗೆ 2502 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಇದರ ಪ್ರಯೋಜನವು ಜಿಲ್ಲೆಗೆ ಸಿಗಲಿದೆ.

* ಇಸ್ರೇಲ್‌ ಮಾದರಿ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು 145 ಕೋಟಿ ರೂ., ನಿಗದಿಪಡಿಸಿರುವುದರಿಂದ ಈಗಾಗಲೇ ಕೋಲಾರ ಜಿಲ್ಲೆಯ ರೈತರು ಇಸ್ರೇಲ್‌ ಪದ್ಧತಿ ಅಳವಡಿಸಿಕೊಳ್ಳುತ್ತಿರುವುದರಿಂದ ಉಪಯೋಗವಾಗುವ ಸಾಧ್ಯತೆಗಳಿವೆ.

* ರಾಜ್ಯದ ಎಲ್ಲಾ ಎಪಿಎಂಸಿ ಮಾರುಕಟ್ಟೆಗಳಲ್ಲಿ ರೈತರ ಕಣಜ ಯೋಜನೆಗೆ 510 ಕೋಟಿ ರೂ., ಅನುದಾನ ಮೀಸಲಿಟ್ಟಿದ್ದು, ಕೋಲಾರ ಜಿಲ್ಲೆಯ ಮಾರುಕಟ್ಟೆಗಳಿಗೂ ರೈತ ಕಣಜಗಳು ಪ್ರಾಪ್ತಿಯಾಗಲಿವೆ.

* ಈರುಳ್ಳಿ, ಆಲೂಗಡ್ಡೆ ಮತ್ತು ಟೊಮೆಟೋ ಬೆಳೆಗಳಿಗೆ ಧಾರಣೆ ಕುಸಿದಾಗ ಬೆಂಬಲ ಬೆಲೆ ನೀಡುವ ಸಲುವಾಗಿ ಬೆಲೆ ಕೊರತೆ ಪಾವತಿ ಯೋಜನೆಗೆ 50 ಕೋಟಿ ರೂಪಾಯಿಗಳು ನಿಗದಿಪಡಿಸಿದ್ದು, ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚಾಗಿ ಬೆಳೆಯುವ ಆಲೂಗಡ್ಡೆ, ಟೊಮೆಟೋ ಬೆಳೆಗಾರರಿಗೆ ಇದು ಅನುಕೂಲವಾಗಲಿದೆ.

* ಹಾಲು ಸಂಘಗಳಿಗೆ ಸ್ವಯಂ ಚಾಲಿತ ಹಾಲು ಶೇಖರಣೆ ಯಂತ್ರ ಖರೀದಿಗೆ 5 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಇದರ ಪ್ರಯೋಜನ ಕೋಲಾರ ಜಿಲ್ಲೆಯ ಹಾಲು ಸಂಘಗಳಿಗೆ ದಕ್ಕಲಿದೆ.

* ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.