ಕೋವಿಡ್ 19 ಕಾಲಿಡದಿರಲು ಕಟ್ಟೆಚ್ಚರವೇ ಕಾರಣ


Team Udayavani, Apr 11, 2020, 3:56 PM IST

kolar-tdy-2

ಕೋಲಾರ: ಲಾಕ್‌ಡೌನ್‌ ಆದ ಮೊದಲ ದಿನ ದಿಂದಲೂ ಕೊರೊನಾಗೆ ಕಡಿವಾಣ ಹಾಕುವಲ್ಲಿ ಸಫ‌ಲವಾಗಿರುವ ಜಿಲ್ಲಾಧಿಕಾರಿ ಸಿ.ಸತ್ಯ ಭಾಮ ಹಾಗೂ ಅಧಿಕಾರಿಗಳ ತಂಡದ ಚುರುಕಿನ ಕಾರ್ಯವೈಖರಿ ಕೋಲಾರಕ್ಕೆ ಇದುವರೆಗೂ ಕೋವಿಡ್ 19 ಕಾಲಿಡದಂತೆ ಮಾಡಿದೆ.

ಯಾವುದೇ ವಿಚಾರದಲ್ಲಿಯೂ ಲೋಪವಾಗದಂತೆ ಆರೋಗ್ಯ ಸಿಬ್ಬಂದಿ, ಕಂದಾಯ ಇಲಾಖೆ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಪೊಲೀಸ್‌ ಬಂದೋಬಸ್ತ್ ಕಟ್ಟೆಚ್ಚರ, ಇವುಗಳ ಮೇಲೆ ಉಸ್ತುವಾರಿ ನಿಗಾವಹಿಸಿರುವ ಡಿ.ಸಿ. ಸತ್ಯಭಾಮ ಕೊರೊನಾವನ್ನು ಕೋಲಾರ ಗಡಿ ದಾಟಿ ಬರಲು ಬಿಟ್ಟಿಲ್ಲ. ತುರ್ತು ಗಮನ: ಜಿಲ್ಲೆಯಲ್ಲಿ ಲಾಕ್‌ಡೌನ್‌ ಆದ ಮೊದಲ ದಿನದಿಂದಲೇ ಕೋವಿಡ್ 19 ಶಂಕಿತ ವ್ಯಕ್ತಿಗಳ ಬಗ್ಗೆ ತುರ್ತು ಗಮನ ಹರಿಸಲಾಗುತ್ತಿದೆ. ಶಂಕಿತರು ಹಾಗೂ ಅವರ ಸಂಪರ್ಕಕ್ಕೆ ಬಂದವರನ್ನು ಕಟ್ಟುನಿಟ್ಟಾಗಿ ಕ್ವಾರಂಟೈನ್‌ ಮಾಡಲಾಗುತ್ತಿದೆ.

ಇದರ ಜೊತೆಗೆ ಜಿಲ್ಲೆಯೊಳಕ್ಕೆ ಯಾವುದೇ ವ್ಯಕ್ತಿ ವಾಹನ ಅನಗತ್ಯವಾಗಿ ನುಸುಳದಂತೆ ಚೆಕ್‌ಪೋಸ್ಟ್‌ಗಳನ್ನು ರಚಿಸಲಾಗಿದೆ. ದಿನದ 24 ಗಂಟೆಯೂ ಈ ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಪೂರಕವಾಗಿ ಬಹುತೇಕ ಗ್ರಾಮಗಳಲ್ಲಿ ಹೊರಗಿನ ವ್ಯಕ್ತಿಗಳ ಪ್ರವೇಶ ನಿರಾಕರಿಸಲಾಗಿದೆ. ಸಾಮಾಜಿಕ ಅಂತರಕ್ಕೆ ಒತ್ತು ನೀಡಲಾಗುತ್ತಿದೆ.

ಶಂಕಿತರು ಮತ್ತವರ ಸಂಪರ್ಕದಲ್ಲಿರುವವರ ಗಂಟಲ ದ್ರಾವಣವನ್ನು ಕೊರೊನಾ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇಲ್ಲಿಯವರೆಗೂ 350ಕ್ಕೆ ಹೆಚ್ಚು ಮಂದಿಯ ಮೇಲೆ ನಿಗಾ ಇಟ್ಟು ಕ್ವಾರಂಟೈನ್‌ ಮಾಡಲಾಗಿದೆ. ಶಂಕಿತ 168 ಮಂದಿ ಗಂಟಲ ದ್ರವ ಜಿಲ್ಲೆಯಿಂದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದು ಪಾಸಿಟಿವ್‌ ಇಲ್ಲದ ಜಿಲ್ಲೆಗಳಲ್ಲಿ ಅತ್ಯಧಿಕ.

ಗಡಿಗಳಲ್ಲಿ ಕಟ್ಟೆಚ್ಚರ: ಕೋಲಾರ ಜಿಲ್ಲೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗೆ ಹೊಂದಿಕೊಂಡಿದೆ. ಆಂಧ್ರಪ್ರದೇಶ ಮತ್ತು ತಮಿಳುನಾಡು ಗಡಿಗಳನ್ನು ಹೊಂದಿವೆ. ಕೋಲಾರ ಜಿಲ್ಲೆಯ ಗಡಿಯಾಚೆಗಿನ ಎಲ್ಲಾ ಜಿಲ್ಲೆಗಳಲ್ಲಿಯೂ ಕೋವಿಡ್ 19  ಸೋಂಕಿತರಿ ದ್ದಾರೆ. ಆದರೆ, ಕೋಲಾರ ಜಿಲ್ಲೆಗೆ ಇದುವರೆಗೂ ಕಾಲಿಡದಂತೆ ಮಾಡುವಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್‌, ಆರೋಗ್ಯ ಇಲಾಖೆಯ ಶ್ರಮ ಎದ್ದು ಕಾಣಿಸುತ್ತಿದೆ. ತಂಡವಾಗಿ ಕೆಲಸ: ಕೊರೊನಾಕ್ಕೆ ಕಡಿವಾಣ ಹಾಕುವ ವಿಚಾರದಲ್ಲಿ ಡಿ.ಸಿ. ವಿವಿಧ ಇಲಾಖೆ ಗಳ ಜಿಲ್ಲಾ ಅಧಿಕಾರಿಗಳ ನೇತೃತ್ವದ ವಿವಿಧ ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ವಿವಿಧ ಪ್ರದೇಶಗಳ ಉಸ್ತುವಾರಿ ಹಾಗೂ ಸಕಲ ಜವಾಬ್ದಾರಿಯನ್ನು ನೀಡಲಾಗಿದೆ. ಪೊಲೀಸ್‌, ಆರೋಗ್ಯ ಇಲಾಖೆ, ಆಶಾ, ಅಂಗನವಾಡಿ ಕಾರ್ಯಕರ್ತೆಯವರು ಸಮರ ಯೋಧರಂತೆ ಕೊರೊನಾ ವಿರುದ್ಧದ ಸಮರಕ್ಕೆ ಸಜ್ಜಾಗಿ ಶ್ರಮಿಸುತ್ತಿದ್ದಾರೆ.  ಕೋವಿಡ್ 19  ವಿರುದ್ಧದ ಹೋರಾಟದಲ್ಲಿ ಇಷ್ಟೆಲ್ಲಾ ಶ್ರಮಿಸುತ್ತಿದ್ದರೂ, ದೇವರ ಆಶೀ ರ್ವಾದವೇ ಕೋಲಾರವನ್ನು ಕಾಪಾಡುತ್ತಿದೆಯೆಂದು ಡಿ.ಸಿ. ಸತ್ಯಭಾಮ ವಿನೀತರಾಗುತ್ತಾರೆ.

ಶಂಕಿತರ ಬಗ್ಗೆ ತುರ್ತು ಗಮನ, ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ, ಸಾಮಾಜಿಕ ಅಂತರ, ಹೊರಗಿನ ವ್ಯಕ್ತಿಗಳಿಗೆ ಜಿಲ್ಲೆ ಪ್ರವೇಶ ನಿಷೇಧ, ಶಂಕಿತರ ಬಗ್ಗೆ ಫಾಲೋಅಪ್‌, ಸರ್ವೇಕ್ಷಣಾಧಿಕಾರಿ ಡಾ. ಚಾರಣಿಯವರ ಪರಿಶ್ರಮ, ದೇವರ ಆಶೀರ್ವಾದದಿಂದ ಕೋಲಾರಕ್ಕೆ ಇದುವರೆಗೂ ಕೋವಿಡ್ 19 ಕಾಲಿಟ್ಟಿಲ್ಲ.- ಸಿ.ಸತ್ಯಭಾಮ, ಡಿ.ಸಿ, ಕೋಲಾರ.

 

ಕೋಲಾರ ಜಿಲ್ಲೆ ಸಂಪರ್ಕಿಸುವ ನೆರೆ ರಾಜ್ಯಗಳ ಗಡಿಗಳಲ್ಲಿ ಚೆಕ್‌ ಪೋಸ್ಟ್‌, ಅಗತ್ಯ ವಸ್ತುಗಳ ಹೊರತುಪಡಿಸಿ ಯಾವುದೇ ವಾಹನ, ವ್ಯಕ್ತಿ ಗಳ ಅನಗತ್ಯ ಓಡಾಟಕ್ಕೆ ಅವಕಾಶ ನಿರಾಕರಣೆ, ಸಾಮಾ ಜಿಕ ಅಂತರದ ಕಟ್ಟುನಿಟ್ಟಿನ ಸೂಚನೆ ಜಿಲ್ಲೆಗೆ ಇದು ವರೆಗೂ ಕೊರೊನಾ ಕಾಲಿಡದಂತೆ ಮಾಡಲು ಸಹಕಾರಿಯಾಗಿದೆ. ಸುಜೀತಾ ಮಹಮದ್‌, ಎಸ್ಪಿ, ಕೆಜಿಎಫ್

 

ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.