
ಪತ್ರಕರ್ತರಿಗೆ ಬೆದರಿಕೆ ಹಾಕುವುದು ಸರಿಯಲ್ಲ
Team Udayavani, Jun 15, 2021, 7:11 PM IST

ಬಂಗಾರಪೇಟೆ: ಯಾವ ರಾಜಕಾರಣಿಗಳ ಕೈಗೊಂಬೆಯಾಗದೇ, ನಿಸ್ವಾರ್ಥ ಹಾಗೂ ನಿಜಾಂಶ ಸುದ್ದಿ ಮಾಡಿದವರ ಮೇಲೆಜಿಲ್ಲೆಯ ಕೆಲವು ಜನಪ್ರತಿನಿಧಿಗಳು,ಪೊಲೀಸ್ ಕೇಸು ಹಾಕಿ, ಬೆದರಿಕೆಗೆ ಹಾಕುವುದು ಸರಿಯಲ್ಲ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.
ಪಟ್ಟಣದ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮದವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ಕೊರೊನಾ ಸೋಂಕು ನಿಯಂತ್ರಿಸುವ ವಿಚಾರದಲ್ಲಿ ಜನಪ್ರತಿನಿಧಿಗಳು ಮಾಡಿದ ಕೆಲಸವನ್ನು ಮಾಧ್ಯಮದವರು ಸುದ್ದಿ ಮಾಡಿದ್ದಾರೆ. ಕೆಲಸ ಮಾಡದೇ ಇರುವವರ ಬಗ್ಗೆಯೂ ಸುದ್ದಿ ಮಾಡಲಾಗಿದೆ. ಈ ಕಾರಣಕ್ಕೆಪತ್ರಕರ್ತರಿಗೆ ಬೆದರಿಕೆ ಹಾಕುವುದು ಸರಿಯಲ್ಲ, ಯಾರೂ ಸಹಿಸುವುದಿಲ್ಲ ಎಂದು ತಿಳಿಸಿದರು.
ಕೊರೊನಾ ಸೋಂಕು ತಡೆಗಟ್ಟುವವಿಚಾರದಲ್ಲಿ ಪತ್ರಕರ್ತರು ವಾರಿಯರ್ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನರಲ್ಲಿಜಾಗೃತಿ ಮೂಡಿಸಿ ಜನ ಸೋಂಕಿನಿಂದ ಮುಕ್ತರಾಗಲು ಕಾರಣರಾಗಿದ್ದಾರೆ. ಲಾಕ್ಡೌನ್ ವೇಳೆ ಸಂಕಷ್ಟದಲ್ಲಿರುವ ಮಾಧ್ಯಮದವರನ್ನು ಗುರುತಿಸಿ ಸಹಾಯಹಸ್ತನೀಡುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂಜಿಪಂ ಸದಸ್ಯ ಬಿ.ವಿ.ಮಹೇಶ್, ಬಿ.ಹೊಸರಾಯಪ್ಪ, ತಾಲೂಕು ಬಿಜೆಪಿ ಅಧ್ಯಕ್ಷನಾಗೇಶ್, ಎಂ.ಪಿ.ಶ್ರೀನಿವಾಸಗೌಡ, ಜಿಲ್ಲಾಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಪಿ.ಅಮರೇಶ್, ಎಂ.ಸಂಪಂಗಿರೆಡ್ಡಿ, ಶಶಿಕುಮಾರ್, ಹುಣಸನಹಳ್ಳಿ ವೆಂಕಟೇಶ್,ಕಾರಹಳ್ಳಿ ನಾರಾಯಣಸ್ವಾಮಿ, ಶಾಂತಿನಗರ ಮಂಜುನಾಥ್, ಚಿಕ್ಕವಲಗಮಾದಿಚೌಡಪ್ಪ, ದೇಶಿಹಳ್ಳಿ ಪ್ರಭಾಕರ್ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಕಟಪಾಡಿ ಏಣಗುಡ್ಡೆಯಲ್ಲಿ ‘ಕೌಸ್ತುಭ ರೆಸಿಡೆನ್ಸಿ’ ಹೊಟೇಲ್, ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಬಿಜೆಪಿ ತೊರೆದು ಜೆಡಿಎಸ್ ಸೇರಿದ ಚಳ್ಳಕೆರೆ ಮಾಜಿ ಶಾಸಕ

ಕಾಶ್ಮೀರ ಕುರಿತ ಹೇಳಿಕೆ; ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ವಿವೇಕ್ ಅಗ್ನಿಹೋತ್ರಿ

ಬಳ್ಳಾರಿಯಲ್ಲಿ ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!!

180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ