ಪತ್ರಕರ್ತರಿಗೆ ಬೆದರಿಕೆ ಹಾಕುವುದು ಸರಿಯಲ್ಲ
Team Udayavani, Jun 15, 2021, 7:11 PM IST
ಬಂಗಾರಪೇಟೆ: ಯಾವ ರಾಜಕಾರಣಿಗಳ ಕೈಗೊಂಬೆಯಾಗದೇ, ನಿಸ್ವಾರ್ಥ ಹಾಗೂ ನಿಜಾಂಶ ಸುದ್ದಿ ಮಾಡಿದವರ ಮೇಲೆಜಿಲ್ಲೆಯ ಕೆಲವು ಜನಪ್ರತಿನಿಧಿಗಳು,ಪೊಲೀಸ್ ಕೇಸು ಹಾಕಿ, ಬೆದರಿಕೆಗೆ ಹಾಕುವುದು ಸರಿಯಲ್ಲ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.
ಪಟ್ಟಣದ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮದವರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿ, ಕೊರೊನಾ ಸೋಂಕು ನಿಯಂತ್ರಿಸುವ ವಿಚಾರದಲ್ಲಿ ಜನಪ್ರತಿನಿಧಿಗಳು ಮಾಡಿದ ಕೆಲಸವನ್ನು ಮಾಧ್ಯಮದವರು ಸುದ್ದಿ ಮಾಡಿದ್ದಾರೆ. ಕೆಲಸ ಮಾಡದೇ ಇರುವವರ ಬಗ್ಗೆಯೂ ಸುದ್ದಿ ಮಾಡಲಾಗಿದೆ. ಈ ಕಾರಣಕ್ಕೆಪತ್ರಕರ್ತರಿಗೆ ಬೆದರಿಕೆ ಹಾಕುವುದು ಸರಿಯಲ್ಲ, ಯಾರೂ ಸಹಿಸುವುದಿಲ್ಲ ಎಂದು ತಿಳಿಸಿದರು.
ಕೊರೊನಾ ಸೋಂಕು ತಡೆಗಟ್ಟುವವಿಚಾರದಲ್ಲಿ ಪತ್ರಕರ್ತರು ವಾರಿಯರ್ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನರಲ್ಲಿಜಾಗೃತಿ ಮೂಡಿಸಿ ಜನ ಸೋಂಕಿನಿಂದ ಮುಕ್ತರಾಗಲು ಕಾರಣರಾಗಿದ್ದಾರೆ. ಲಾಕ್ಡೌನ್ ವೇಳೆ ಸಂಕಷ್ಟದಲ್ಲಿರುವ ಮಾಧ್ಯಮದವರನ್ನು ಗುರುತಿಸಿ ಸಹಾಯಹಸ್ತನೀಡುವ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹಾಗೂಜಿಪಂ ಸದಸ್ಯ ಬಿ.ವಿ.ಮಹೇಶ್, ಬಿ.ಹೊಸರಾಯಪ್ಪ, ತಾಲೂಕು ಬಿಜೆಪಿ ಅಧ್ಯಕ್ಷನಾಗೇಶ್, ಎಂ.ಪಿ.ಶ್ರೀನಿವಾಸಗೌಡ, ಜಿಲ್ಲಾಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಪಿ.ಅಮರೇಶ್, ಎಂ.ಸಂಪಂಗಿರೆಡ್ಡಿ, ಶಶಿಕುಮಾರ್, ಹುಣಸನಹಳ್ಳಿ ವೆಂಕಟೇಶ್,ಕಾರಹಳ್ಳಿ ನಾರಾಯಣಸ್ವಾಮಿ, ಶಾಂತಿನಗರ ಮಂಜುನಾಥ್, ಚಿಕ್ಕವಲಗಮಾದಿಚೌಡಪ್ಪ, ದೇಶಿಹಳ್ಳಿ ಪ್ರಭಾಕರ್ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?